ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಒಲಂಪಿಕ್ಸ್ 2024ರ 3000 ಮೀ ಪುರುಷರ ಸ್ಟೀಪಲ್ಸ್ ಚೇಸ್ ಫೈನಲ್ಸ್ನಲ್ಲಿ ಭಾರತದ ಅವಿನಾಶ್ ಸಾಬಳೆ ಅವರು ಪದಕ ಪಡೆಯುವಲ್ಲಿ ವಿಫಲರಾಗಿದ್ದಾರೆ.
8 ನಿಮಿಷ 14.18 ಸೆಕೆಂಡುಗಳಲ್ಲಿ ಸ್ಪರ್ಧೆ ಪೂರ್ಣಗೊಳಿಸಿ 29 ವರ್ಷದ ಸಾಬಳೆ ಫೈನಲ್ ರೇಸ್ನಲ್ಲಿ 11ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
ಇನ್ನು ಮೊರಾಕ್ಕೋದ ಸೋಫಿಯನ್ ಅಲ್ ಬಕಾಲಿ 8 ನಿಮಿಷ, 06.05 ಸೆಕೆಂಡುಗಳಲ್ಲಿ ಗುರಿಮುಟ್ಟುವ ಮೂಲಕ ಚಿನ್ನಕ್ಕೆ ಕೊರಳೊಡ್ಡಿದರು. ಅಮೇರಿಕಾದ ಕೆನ್ನೆತ್ ರೂಕ್ಸ್ 8 ನಿಮಿಷ, 6.41 ಸೆಕೆಂಡುಗಳಲ್ಲಿ ಗುರಿ ತಲುಪಿ ಬೆಳ್ಳಿ ಗೆದ್ದರೇ, 8 ನಿಮಿಷ 06.47 ಸೆಕೆಂಡುಗಳಲ್ಲಿ ಮೂರನೇಯವರಾಗಿ ಕಂಚಿನ ಪದಕ ಗೆದ್ದರು.
ಸ್ಟೀಪಲ್ ಚೇಸ್ನಲ್ಲಿ ಫೈನಲ್ಸ್ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಅವಿನಾಶ್ ಸಾಬಳೆ ಭಾರತಕ್ಕೆ ಪದಕ ತಂದುಕೊಡಲಿದ್ದಾರೆ ಎಂದು ನಂಬಲಾಗಿತ್ತು. ಆದರೆ ಫೈನಲ್ಸ್ ರೇಸ್ನಲ್ಲಿ ಆರಂಭದಲ್ಲಿ ಮುನ್ನಡೆ ಕಾಯ್ದುಕೊಂಡ ಸಾಬಳೆ ಬಳಿಕ ಹಿಂದುಳಿದರು. ಅದಾದ ಬಳಿಕ ಅವರು ಮುಂದೆ ಬರಲಿಲ್ಲ. ಅಂತಿಮವಾಗಿ ಸಾಬಳೆ 11ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು.
ಲಾಂಗ್ ಜಂಪ್: ಇತ್ತ ಲಾಂಗ್ ಜಂಪ್ನಲ್ಲಿ ಭಾರತ ಪರವಾಗಿ ಸ್ಪರ್ಧಿಸಿದ್ದ ಅಬ್ದುಲ್ಲಾ ಅಬೂಬಕ್ಕರ್, ಪ್ರವೀಣ್ ಚಿತ್ರವೇಲ್ ಅವರು ಫೈನಲ್ಸ್ ತಲುಪುವಲ್ಲಿ ವಿಫಲರಾಗಿದ್ದಾರೆ. ಒಟ್ಟು 32 ಜನ ಸ್ಪರ್ಧಿಗಳು ಸ್ಪರ್ಧಿಸಿದ್ದ ಈ ವಿಭಾಗದಲ್ಲಿ 16.49 ಮೀ ದೂರ ಜಿಗಿದ ಅಬ್ದುಲ್ಲಾ 21ನೇ ಸ್ಥಾನಕ್ಕೆ ತೃಪ್ತಿಪಟ್ಟರೇ, 16.25 ಮೀ ಜಿಗಿದ ಪ್ರವೀಣ್ 27ನೇ ಸ್ಥಾನ ಪಡೆದು ಟೂರ್ನಿಯಿಂದ ಹೊರನಡೆದರು.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…