ಕ್ರೀಡೆ

ಐಸಿಸಿ ವರ್ಷದ ಶ್ರೇಷ್ಠ ಪ್ರಶಸ್ತಿಗೆ ಬಾಬರ್ ಆಜಂ ಭಾಜನ

ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್​ ಮಂಡಳಿ 2022ರ ಅತ್ಯುತ್ತಮ ಕ್ರಿಕೆಟಿಗ ಪ್ರಶಸ್ತಿಯನ್ನು ಪ್ರಕಟಿಸಿದೆ. ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಹೆಸರಿನಲ್ಲಿ ನೀಡಲಾಗುವ ಈ ಪ್ರಶಸ್ತಿಯು ಈ ಬಾರಿ ಪಾಕಿಸ್ತಾನ್ ತಂಡದ ನಾಯಕ ಬಾಬರ್ ಆಜಂ ಅವರಿಗೆ ಒಲಿದಿದೆ.
ಇದಕ್ಕೂ ಮುನ್ನ 2022ರ ಐಸಿಸಿ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಬಾಬರ್ ಆಜಂ ಆಯ್ಕೆಯಾಗಿದ್ದರು. ಇದೀಗ ಕಳೆದ ವರ್ಷದ ಅತ್ಯುತ್ತಮ ಆಟಗಾರನ ಪ್ರಶಸ್ತಿ ಕೂಡ ಬಾಬರ್ ಪಾಲಾಗಿದೆ.

ಈ ಬಾರಿಯ ಪ್ರಶಸ್ತಿ ಸುತ್ತಿನಲ್ಲಿ ಒಟ್ಟು ನಾಲ್ವರು ಆಟಗಾರರಿದ್ದರು. ಬಾಬರ್ ಆಜಂ ಜೊತೆ ಇಂಗ್ಲೆಂಡ್ ಆಲ್​ರೌಂಡರ್ ಬೆನ್ ಸ್ಟೋಕ್ಸ್​, ಜಿಂಬಾಬ್ವೆ ಆಲ್​ರೌಂಡರ್ ಸಿಕಂದರ್ ರಾಝ ಹಾಗೂ ನ್ಯೂಜಿಲೆಂಡ್ ವೇಗಿ ಟಿಮ್ ಸೌಥಿ ಅಂತಿಮ ಸುತ್ತಿನ ಪೈಪೋಟಿಯಲ್ಲಿದ್ದರು. ಆದರೆ ಮೂರು ಸ್ವರೂಪದ ಕ್ರಿಕೆಟ್​ನಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದ ಬಾಬರ್​ಗೆ ಇದೀಗ ಶ್ರೇಷ್ಠ ಕ್ರಿಕೆಟಿಗ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿ ಒಲಿದಿದೆ.

andolanait

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

8 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

10 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

10 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

10 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

12 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

13 hours ago