ಕ್ರೀಡೆ

ವಿರಾಟ್‌ ಕೊಹ್ಲಿ ಹಿಂದಿಕ್ಕಿದ ಬಾಬರ್‌

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್‌ ಬಾಬರ್‌ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ.

ಕರಾಚಿ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ, ನ್ಯೂಜಿಲೆಂಡ್‌ ತಂಡದ ಎದುರು 29 ರನ್‌ ಗಳಿಸಿ ಔಟಾಗುವ ಮೂಲಕ ಕಡಿಮೆ ಇನ್ನಿಂಗ್ಸ್‌ನಲ್ಲಿ 6,000 ರನ್‌ ಗಡಿ ದಾಟಿದ ಸಾಧನೆ ಮಾಡಿದ್ದಾರೆ.

ವೇಗವಾಗಿ 6,000 ರನ್‌ ಕಲೆಹಾಕಿದ ಬ್ಯಾಟರ್‌ಗಳ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಆಮ್ಲಾ ಇದ್ದರೆ, ಎರಡನೇ ಸ್ಥಾನದಲ್ಲಿ ಬಾಬರ್‌ ಅಜಂ, ನಂತರದ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಇದ್ದಾರೆ.

ಏಕದಿನ ಮಾದರಿಯಲ್ಲಿ ಈವರೆಗೆ ಒಟ್ಟು 123 ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸಿರುವ ಬಾಬರ್‌, 55.73ರ ಸರಾಸರಿಯಲ್ಲಿ 6,019 ರನ್‌ ಕಲೆಹಾಕಿದ್ದಾರೆ. ಇದರಲ್ಲಿ 19 ಶತಕ ಮತ್ತು 34 ಅರ್ಧಶತಕ ಸೇರಿವೆ.

ವೇಗವಾಗಿ 6 ಸಾವಿರ ರನ್‌ ಕಲೆಹಾಕಿದವರು:

* ಹಾಶೀಂ ಆಮ್ಲಾ (ದಕ್ಷಿಣ ಆಫ್ರಿಕಾ): 123 ಇನ್ನಿಂಗ್ಸ್‌

* ಬಾಬರ್‌ ಅಜಂ (ಪಾಕಿಸ್ತಾನ): 123 ಇನ್ನಿಂಗ್ಸ್‌

* ವಿರಾಟ್‌ ಕೊಹ್ಲಿ (ಭಾರತ): 136 ಇನ್ನಿಂಗ್ಸ್‌

* ಕೇನ್‌ ವಿಲಿಯಮ್ಸನ್‌ (ನ್ಯೂಜಿಲೆಂಡ್‌): 139 ಇನ್ನಿಂಗ್ಸ್‌

* ಡೆವಿಡ್‌ ವಾರ್ನರ್‌ (ಆಸ್ರೇಲಿಯಾ): 139 ಇನ್ನಿಂಗ್ಸ್‌

* ಶಿಖರ್‌ ಧವನ್‌ (ಭಾರತ): 140 ಇನ್ನಿಂಗ್ಸ್‌

* ವಿವಿಯನ್‌ ರಿಚರ್ಡ್ಸನ್‌ (ವೆಸ್ಟ್‌ ಇಂಡೀಸ್):‌ 141 ಇನ್ನಿಂಗ್ಸ್‌

* ಜೋ ರೂಟ್‌ (ಇಂಗ್ಲೆಂಡ್‌): 141 ಇನ್ನಿಂಗ್ಸ್‌

* ಕ್ವಿಂಟನ್‌ ಡಿ ಕಾಕ್‌ (ದಕ್ಷಿಣ ಆಫ್ರಿಕಾ): 142 ಇನ್ನಿಂಗ್ಸ್‌

* ಸೌರವ್‌ ಗಂಗೂಲಿ (ಭಾರತ): 147 ಇನ್ನಿಂಗ್ಸ್‌

* ಎಬಿ ಡಿ ವಿಲಿಯರ್ಸ್‌ (ದಕ್ಷಿಣ ಆಫ್ರಿಕಾ): 147 ಇನ್ನಿಂಗ್ಸ್‌

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

9 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

9 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

9 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

10 hours ago