ಕ್ರೀಡೆ

ವಿರಾಟ್‌ ಕೊಹ್ಲಿ ಹಿಂದಿಕ್ಕಿದ ಬಾಬರ್‌

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್‌ ಬಾಬರ್‌ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ.

ಕರಾಚಿ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ, ನ್ಯೂಜಿಲೆಂಡ್‌ ತಂಡದ ಎದುರು 29 ರನ್‌ ಗಳಿಸಿ ಔಟಾಗುವ ಮೂಲಕ ಕಡಿಮೆ ಇನ್ನಿಂಗ್ಸ್‌ನಲ್ಲಿ 6,000 ರನ್‌ ಗಡಿ ದಾಟಿದ ಸಾಧನೆ ಮಾಡಿದ್ದಾರೆ.

ವೇಗವಾಗಿ 6,000 ರನ್‌ ಕಲೆಹಾಕಿದ ಬ್ಯಾಟರ್‌ಗಳ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಆಮ್ಲಾ ಇದ್ದರೆ, ಎರಡನೇ ಸ್ಥಾನದಲ್ಲಿ ಬಾಬರ್‌ ಅಜಂ, ನಂತರದ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಇದ್ದಾರೆ.

ಏಕದಿನ ಮಾದರಿಯಲ್ಲಿ ಈವರೆಗೆ ಒಟ್ಟು 123 ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸಿರುವ ಬಾಬರ್‌, 55.73ರ ಸರಾಸರಿಯಲ್ಲಿ 6,019 ರನ್‌ ಕಲೆಹಾಕಿದ್ದಾರೆ. ಇದರಲ್ಲಿ 19 ಶತಕ ಮತ್ತು 34 ಅರ್ಧಶತಕ ಸೇರಿವೆ.

ವೇಗವಾಗಿ 6 ಸಾವಿರ ರನ್‌ ಕಲೆಹಾಕಿದವರು:

* ಹಾಶೀಂ ಆಮ್ಲಾ (ದಕ್ಷಿಣ ಆಫ್ರಿಕಾ): 123 ಇನ್ನಿಂಗ್ಸ್‌

* ಬಾಬರ್‌ ಅಜಂ (ಪಾಕಿಸ್ತಾನ): 123 ಇನ್ನಿಂಗ್ಸ್‌

* ವಿರಾಟ್‌ ಕೊಹ್ಲಿ (ಭಾರತ): 136 ಇನ್ನಿಂಗ್ಸ್‌

* ಕೇನ್‌ ವಿಲಿಯಮ್ಸನ್‌ (ನ್ಯೂಜಿಲೆಂಡ್‌): 139 ಇನ್ನಿಂಗ್ಸ್‌

* ಡೆವಿಡ್‌ ವಾರ್ನರ್‌ (ಆಸ್ರೇಲಿಯಾ): 139 ಇನ್ನಿಂಗ್ಸ್‌

* ಶಿಖರ್‌ ಧವನ್‌ (ಭಾರತ): 140 ಇನ್ನಿಂಗ್ಸ್‌

* ವಿವಿಯನ್‌ ರಿಚರ್ಡ್ಸನ್‌ (ವೆಸ್ಟ್‌ ಇಂಡೀಸ್):‌ 141 ಇನ್ನಿಂಗ್ಸ್‌

* ಜೋ ರೂಟ್‌ (ಇಂಗ್ಲೆಂಡ್‌): 141 ಇನ್ನಿಂಗ್ಸ್‌

* ಕ್ವಿಂಟನ್‌ ಡಿ ಕಾಕ್‌ (ದಕ್ಷಿಣ ಆಫ್ರಿಕಾ): 142 ಇನ್ನಿಂಗ್ಸ್‌

* ಸೌರವ್‌ ಗಂಗೂಲಿ (ಭಾರತ): 147 ಇನ್ನಿಂಗ್ಸ್‌

* ಎಬಿ ಡಿ ವಿಲಿಯರ್ಸ್‌ (ದಕ್ಷಿಣ ಆಫ್ರಿಕಾ): 147 ಇನ್ನಿಂಗ್ಸ್‌

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓವೆಲ್ ಮೈದಾನದಲ್ಲಿ ಆಸನಗಳನ್ನು ದುರಸ್ತಿ ಮಾಡಿ

ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…

2 hours ago

ಓದುಗರ ಪತ್ರ: ಒಳಮೀಸಲಾತಿ; ಸಮಾನ ಅವಕಾಶ ಕಲ್ಪಿಸಿ

ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…

2 hours ago

ಓದುಗರ ಪತ್ರ: ನ್ಯಾಯಾಲಯದ ಬಳಿ ಸಿಗ್ನಲ್ ಲೈಟ್ ಅಳವಡಿಸಿ

ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…

2 hours ago

ಓದುಗರ ಪತ್ರ: ನಂದಿ ಭವನ ಮುಂಭಾಗದ ಮೋರಿ ಶುಚಿಗೊಳಿಸಿ

ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ವಾಟ್ಸಾಪ್ ಹೇಳಿಕೆ, ಡೀಪ್ ಫೇಕ್ ಹಾವಳಿ, ಪಾಪರಾಜಿಗಳ ನಿಯಂತ್ರಣದತ್ತ

ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…

2 hours ago

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…

2 hours ago