ಕ್ರೀಡೆ

ವಿರಾಟ್‌ ಕೊಹ್ಲಿ ಹಿಂದಿಕ್ಕಿದ ಬಾಬರ್‌

ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್‌ ಬಾಬರ್‌ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ.

ಕರಾಚಿ ಸ್ಟೇಡಿಯಂನಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ ಪಂದ್ಯದಲ್ಲಿ, ನ್ಯೂಜಿಲೆಂಡ್‌ ತಂಡದ ಎದುರು 29 ರನ್‌ ಗಳಿಸಿ ಔಟಾಗುವ ಮೂಲಕ ಕಡಿಮೆ ಇನ್ನಿಂಗ್ಸ್‌ನಲ್ಲಿ 6,000 ರನ್‌ ಗಡಿ ದಾಟಿದ ಸಾಧನೆ ಮಾಡಿದ್ದಾರೆ.

ವೇಗವಾಗಿ 6,000 ರನ್‌ ಕಲೆಹಾಕಿದ ಬ್ಯಾಟರ್‌ಗಳ ಸಾಲಿನಲ್ಲಿ ಮೊದಲ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಆಮ್ಲಾ ಇದ್ದರೆ, ಎರಡನೇ ಸ್ಥಾನದಲ್ಲಿ ಬಾಬರ್‌ ಅಜಂ, ನಂತರದ ಸ್ಥಾನದಲ್ಲಿ ವಿರಾಟ್‌ ಕೊಹ್ಲಿ ಇದ್ದಾರೆ.

ಏಕದಿನ ಮಾದರಿಯಲ್ಲಿ ಈವರೆಗೆ ಒಟ್ಟು 123 ಇನ್ನಿಂಗ್ಸ್‌ನಲ್ಲಿ ಬ್ಯಾಟ್‌ ಬೀಸಿರುವ ಬಾಬರ್‌, 55.73ರ ಸರಾಸರಿಯಲ್ಲಿ 6,019 ರನ್‌ ಕಲೆಹಾಕಿದ್ದಾರೆ. ಇದರಲ್ಲಿ 19 ಶತಕ ಮತ್ತು 34 ಅರ್ಧಶತಕ ಸೇರಿವೆ.

ವೇಗವಾಗಿ 6 ಸಾವಿರ ರನ್‌ ಕಲೆಹಾಕಿದವರು:

* ಹಾಶೀಂ ಆಮ್ಲಾ (ದಕ್ಷಿಣ ಆಫ್ರಿಕಾ): 123 ಇನ್ನಿಂಗ್ಸ್‌

* ಬಾಬರ್‌ ಅಜಂ (ಪಾಕಿಸ್ತಾನ): 123 ಇನ್ನಿಂಗ್ಸ್‌

* ವಿರಾಟ್‌ ಕೊಹ್ಲಿ (ಭಾರತ): 136 ಇನ್ನಿಂಗ್ಸ್‌

* ಕೇನ್‌ ವಿಲಿಯಮ್ಸನ್‌ (ನ್ಯೂಜಿಲೆಂಡ್‌): 139 ಇನ್ನಿಂಗ್ಸ್‌

* ಡೆವಿಡ್‌ ವಾರ್ನರ್‌ (ಆಸ್ರೇಲಿಯಾ): 139 ಇನ್ನಿಂಗ್ಸ್‌

* ಶಿಖರ್‌ ಧವನ್‌ (ಭಾರತ): 140 ಇನ್ನಿಂಗ್ಸ್‌

* ವಿವಿಯನ್‌ ರಿಚರ್ಡ್ಸನ್‌ (ವೆಸ್ಟ್‌ ಇಂಡೀಸ್):‌ 141 ಇನ್ನಿಂಗ್ಸ್‌

* ಜೋ ರೂಟ್‌ (ಇಂಗ್ಲೆಂಡ್‌): 141 ಇನ್ನಿಂಗ್ಸ್‌

* ಕ್ವಿಂಟನ್‌ ಡಿ ಕಾಕ್‌ (ದಕ್ಷಿಣ ಆಫ್ರಿಕಾ): 142 ಇನ್ನಿಂಗ್ಸ್‌

* ಸೌರವ್‌ ಗಂಗೂಲಿ (ಭಾರತ): 147 ಇನ್ನಿಂಗ್ಸ್‌

* ಎಬಿ ಡಿ ವಿಲಿಯರ್ಸ್‌ (ದಕ್ಷಿಣ ಆಫ್ರಿಕಾ): 147 ಇನ್ನಿಂಗ್ಸ್‌

ಆಂದೋಲನ ಡೆಸ್ಕ್

Recent Posts

ಬೆಳ್ಳಿ ಬರೋಬ್ಬರಿ 20 ಸಾವಿರ ರೂ.ಇಳಿಕೆ : ಚಿನ್ನದ ದರದಲ್ಲೂ ದಿಢೀರ್ 4 ಸಾವಿರ ರೂ ಕುಸಿತ

ಹೈದರಾಬಾದ್ : ಕಳೆದ ಕೆಲವು ದಿನಗಳಿಂದ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇದ್ದಕ್ಕಿದ್ದಂತೆ…

7 mins ago

ಟಿವಿಕೆ ವಿಜಯ್ ಪಕ್ಷಕ್ಕೆ ಸೀಟಿ ಗುರುತು ನೀಡಿದ ಆಯೋಗ

ಚೆನ್ನೈ : ನಟ, ರಾಜಕಾರಣಿ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಚುನಾವಣಾ ಆಯೋಗವು ಗುರುವಾರ ಚಿಹ್ನೆ…

48 mins ago

ಮ.ಬೆಟ್ಟ | ಡ್ರೋನ್‌ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ ದೃಶ್ಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

59 mins ago

MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ ಇರಲಿದೆ : ಸಿಎಂ

ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…

1 hour ago

ಒಂದು ಎಕರೆಯಲ್ಲಿ 102 ವಿವಿಧ ಬೆಳೆ : ರೋಗರಹಿತ ಬೆಳೆಗಳ ತಳಿ ಪ್ರದರ್ಶನ

ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…

1 hour ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ 2 ತಿಂಗಳಲ್ಲಿ ದಾಖಲೆಯ ಆದಾಯ

ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್‌ ಹಾಗೂ…

3 hours ago