ಕ್ರೀಡೆ

ಪ್ರಧಾನಿ ನಿವಾಸದ ಮುಂದೆ ಪದಕ ತೊರೆದುಹೋದ ಭಜರಂಗ್‌ ಪುನಿಯಾ

ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ) ಚುನಾವಣೆಯಲ್ಲಿ ಲೈಂಗಿಕ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಗದ್ದು, ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲ್ಲಿಕ್‌ ಪರವಾಗಿ ಒಲಂಪಿಕ್‌ ಪದಕ ವಿಜೇತ ಭಜರಂಗ ಪೂಜಿಯಾ ಬೆಂಬಲ ಸೂಚಿಸಿದ್ದು, ತಮಗೆ ಸಂದಿರುಚ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.

ಕುಸ್ತಿಪಟು ಬಜರಂಗ್ ಪುನಿಯಾ ಅವರು ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸದ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ನಾನು ಮೊದಲೇ ಹೇಳಿದಂತೆ, ನಮ್ಮ ಸಹೋದರಿಯರಿಗಾಗಿ ಹೋರಾಟ ಮಾಡುತ್ತಿದ್ದೇವು. ನನ್ನಿಂದ ಅವರಿಗೆ ನ್ಯಾಯ ಕೊಡಿಸಲು ಆಗಲಿಲ್ಲ. ಹಾಗಾಗಿ ನಾನು ಪದ್ಮಶ್ರೀ ಪ್ರಶಸ್ತಿಗೆ ಅನರ್ಹ ಎಂದು ಭಾವಿಸಿದ್ದೇನೆ. ಇದನ್ನು ನಾನು ಮನೆಗೆ ತೆಗೆದುಕೊಂಡು ಹೋಗುವುದಿಲ್ಲ ಎಂದರು.

ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ನನಗೆ ಅಪಾಯಿಂಟ್‌ಮೆಂಟ್ ಇಲ್ಲದ ಕಾರಣ ಸಾಧ್ಯವಾಗಲಿಲ್ಲ. ಪ್ರಧಾನಿಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ. ಹಾಗಾಗಿ ಪ್ರಧಾನಿಗೆ ಬರೆದ ಪತ್ರದೊಂದಿಗೆ ನನ್ನ ಪ್ರಶಸ್ತಿಯನ್ನು ಬಿಟ್ಟು ಹೋಗುತ್ತಿದ್ದೇನೆ ಎಂದು ಪುನಿಯಾ ತಿಳಿಸಿದರು.

ಪ್ರಧಾನಿ ಭೇಟಿಯಾಗಲು ಹೋದ ಪುನಿಯಾರನ್ನು ಭೇಟಿಯಾಗಲು ಅನುಮತಿ ಇದೆಯೇ? ಎಂದು ಪ್ರಶ್ನಿಸಿ ಪೊಲೀಸರು ತಡೆದಿದ್ದರು. ಇದಕ್ಕೆ ಉತ್ತರಿಸಿದ ಪುನಿಯಾ “ಇಲ್ಲ, ಅನುಮತಿ ಸಿಕ್ಕಿಲ್ಲ. ನಾನಿಲ್ಲಿ ಪ್ರತಿಭಟನೆ ನೆಡೆಸಲು ಬಂದಿಲ್ಲ ಸಾಧ್ಯವಾದರೆ ದಯವಿಟ್ಟು ಈ ಪತ್ರವನ್ನು ಪ್ರಧಾನಿ ಕಚೇರಿಗೆ ತಲುಪಿಸಿ. ಒಳಗೆ ಹೋಗಲು ನನಗೆ ಸಾಧ್ಯವಾಗದು ಎಂದು ಹೇಳಿದ್ದರು.

andolanait

Recent Posts

ರೋಹಿತ್‌ ಬ್ಯಾಟಿಂಗ್‌ ಅಬ್ಬರ : ಭರ್ಜರಿ ಗೆಲುವು ದಾಖಲಿಸಿದ ಮುಂಬೈ

ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್‌ ಹಾಕಿದ ಮುಂಬೈ ಇಂಡಿಯನ್ಸ್‌ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…

6 hours ago

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

9 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

9 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

9 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

10 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

10 hours ago