ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಚುನಾವಣೆಯಲ್ಲಿ ಲೈಂಗಿಕ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಗದ್ದು, ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲ್ಲಿಕ್ ಪರವಾಗಿ ಒಲಂಪಿಕ್ ಪದಕ ವಿಜೇತ ಭಜರಂಗ ಪೂಜಿಯಾ ಬೆಂಬಲ ಸೂಚಿಸಿದ್ದು, ತಮಗೆ ಸಂದಿರುಚ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ಕುಸ್ತಿಪಟು ಬಜರಂಗ್ ಪುನಿಯಾ ಅವರು ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸದ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ನಾನು ಮೊದಲೇ ಹೇಳಿದಂತೆ, ನಮ್ಮ ಸಹೋದರಿಯರಿಗಾಗಿ ಹೋರಾಟ ಮಾಡುತ್ತಿದ್ದೇವು. ನನ್ನಿಂದ ಅವರಿಗೆ ನ್ಯಾಯ ಕೊಡಿಸಲು ಆಗಲಿಲ್ಲ. ಹಾಗಾಗಿ ನಾನು ಪದ್ಮಶ್ರೀ ಪ್ರಶಸ್ತಿಗೆ ಅನರ್ಹ ಎಂದು ಭಾವಿಸಿದ್ದೇನೆ. ಇದನ್ನು ನಾನು ಮನೆಗೆ ತೆಗೆದುಕೊಂಡು ಹೋಗುವುದಿಲ್ಲ ಎಂದರು.
ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ನನಗೆ ಅಪಾಯಿಂಟ್ಮೆಂಟ್ ಇಲ್ಲದ ಕಾರಣ ಸಾಧ್ಯವಾಗಲಿಲ್ಲ. ಪ್ರಧಾನಿಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ. ಹಾಗಾಗಿ ಪ್ರಧಾನಿಗೆ ಬರೆದ ಪತ್ರದೊಂದಿಗೆ ನನ್ನ ಪ್ರಶಸ್ತಿಯನ್ನು ಬಿಟ್ಟು ಹೋಗುತ್ತಿದ್ದೇನೆ ಎಂದು ಪುನಿಯಾ ತಿಳಿಸಿದರು.
ಪ್ರಧಾನಿ ಭೇಟಿಯಾಗಲು ಹೋದ ಪುನಿಯಾರನ್ನು ಭೇಟಿಯಾಗಲು ಅನುಮತಿ ಇದೆಯೇ? ಎಂದು ಪ್ರಶ್ನಿಸಿ ಪೊಲೀಸರು ತಡೆದಿದ್ದರು. ಇದಕ್ಕೆ ಉತ್ತರಿಸಿದ ಪುನಿಯಾ “ಇಲ್ಲ, ಅನುಮತಿ ಸಿಕ್ಕಿಲ್ಲ. ನಾನಿಲ್ಲಿ ಪ್ರತಿಭಟನೆ ನೆಡೆಸಲು ಬಂದಿಲ್ಲ ಸಾಧ್ಯವಾದರೆ ದಯವಿಟ್ಟು ಈ ಪತ್ರವನ್ನು ಪ್ರಧಾನಿ ಕಚೇರಿಗೆ ತಲುಪಿಸಿ. ಒಳಗೆ ಹೋಗಲು ನನಗೆ ಸಾಧ್ಯವಾಗದು ಎಂದು ಹೇಳಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…