ನವದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಚುನಾವಣೆಯಲ್ಲಿ ಲೈಂಗಿಕ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಗದ್ದು, ಅಧ್ಯಕ್ಷರಾಗಿ ನೇಮಕಗೊಂಡ ಬೆನ್ನಲ್ಲೇ ಕಣ್ಣೀರಿಡುತ್ತಾ ಕುಸ್ತಿಗೆ ವಿದಾಯ ಹೇಳಿದ ಸಾಕ್ಷಿ ಮಲ್ಲಿಕ್ ಪರವಾಗಿ ಒಲಂಪಿಕ್ ಪದಕ ವಿಜೇತ ಭಜರಂಗ ಪೂಜಿಯಾ ಬೆಂಬಲ ಸೂಚಿಸಿದ್ದು, ತಮಗೆ ಸಂದಿರುಚ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ.
ಕುಸ್ತಿಪಟು ಬಜರಂಗ್ ಪುನಿಯಾ ಅವರು ತಮಗೆ ಲಭಿಸಿದ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿ ಮೋದಿ ನಿವಾಸದ ಕರ್ತವ್ಯ ಪಥದ ಪಾದಚಾರಿ ಮಾರ್ಗದಲ್ಲಿ ತೊರೆದು ಹೋಗಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ, ನಾನು ಮೊದಲೇ ಹೇಳಿದಂತೆ, ನಮ್ಮ ಸಹೋದರಿಯರಿಗಾಗಿ ಹೋರಾಟ ಮಾಡುತ್ತಿದ್ದೇವು. ನನ್ನಿಂದ ಅವರಿಗೆ ನ್ಯಾಯ ಕೊಡಿಸಲು ಆಗಲಿಲ್ಲ. ಹಾಗಾಗಿ ನಾನು ಪದ್ಮಶ್ರೀ ಪ್ರಶಸ್ತಿಗೆ ಅನರ್ಹ ಎಂದು ಭಾವಿಸಿದ್ದೇನೆ. ಇದನ್ನು ನಾನು ಮನೆಗೆ ತೆಗೆದುಕೊಂಡು ಹೋಗುವುದಿಲ್ಲ ಎಂದರು.
ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ನನಗೆ ಅಪಾಯಿಂಟ್ಮೆಂಟ್ ಇಲ್ಲದ ಕಾರಣ ಸಾಧ್ಯವಾಗಲಿಲ್ಲ. ಪ್ರಧಾನಿಗೆ ಬಿಡುವಿಲ್ಲದ ವೇಳಾಪಟ್ಟಿ ಇದೆ. ಹಾಗಾಗಿ ಪ್ರಧಾನಿಗೆ ಬರೆದ ಪತ್ರದೊಂದಿಗೆ ನನ್ನ ಪ್ರಶಸ್ತಿಯನ್ನು ಬಿಟ್ಟು ಹೋಗುತ್ತಿದ್ದೇನೆ ಎಂದು ಪುನಿಯಾ ತಿಳಿಸಿದರು.
ಪ್ರಧಾನಿ ಭೇಟಿಯಾಗಲು ಹೋದ ಪುನಿಯಾರನ್ನು ಭೇಟಿಯಾಗಲು ಅನುಮತಿ ಇದೆಯೇ? ಎಂದು ಪ್ರಶ್ನಿಸಿ ಪೊಲೀಸರು ತಡೆದಿದ್ದರು. ಇದಕ್ಕೆ ಉತ್ತರಿಸಿದ ಪುನಿಯಾ “ಇಲ್ಲ, ಅನುಮತಿ ಸಿಕ್ಕಿಲ್ಲ. ನಾನಿಲ್ಲಿ ಪ್ರತಿಭಟನೆ ನೆಡೆಸಲು ಬಂದಿಲ್ಲ ಸಾಧ್ಯವಾದರೆ ದಯವಿಟ್ಟು ಈ ಪತ್ರವನ್ನು ಪ್ರಧಾನಿ ಕಚೇರಿಗೆ ತಲುಪಿಸಿ. ಒಳಗೆ ಹೋಗಲು ನನಗೆ ಸಾಧ್ಯವಾಗದು ಎಂದು ಹೇಳಿದ್ದರು.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…