ಅಡಿಲೇಡ್: ಟಿ20 ವಿಶ್ವಕಪ್ನ ಪಂದ್ಯದಲ್ಲಿ ಬುಧವಾರ ಭಾರತ ತಂಡ ಬಾಂಗ್ಲಾವನ್ನು ಎದುರಿಸಲಿದ್ದು ಸೆಮಿ ಫೈನಲ್ ಪ್ರವೇಶಿಸಲು ಉಭಯ ತಂಡಗಳಿಗೆ ಈ ಪಂದ್ಯ ಪ್ರಮುಖವಾಗಿದೆ. ಭಾರತ ಸ್ವಲ್ಪ ಮೈಮರೆತರೂ ಸೆಮಿಫೈನಲ್ ಹಾದಿ ಕಠಿಣಗೊಳ್ಳಲಿದೆ.
ಬುಧವಾರ ಸಂಜೆ ಅಡಿಲೇಡ್ನಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಒಂದು ವೇಳೆ ಪಂದ್ಯ ರದ್ದುಗೊಂಡರೆ ಭಾರತ ಒಂದು ಅಂಕ ಪಡೆದು 2ನೇ ಸ್ಥಾನದಲ್ಲೇ ಉಳಿಯಲಿದೆ. ಆಗ ಜಿಂಬಾಬ್ವೆ ವಿರುದ್ಧದ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.
ಬಾಂಗ್ಲಾದೇಶ ವಿರುದ್ಧ ಮೇಲ್ನೋಟಕ್ಕೆ ಭಾರತವೇ ಗೆಲ್ಲುವ ನೆಚ್ಚಿನ ತಂಡ ಎನಿಸಿದರೂ, ಬಾಂಗ್ಲಾದೇಶವನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಭಾರತ ತಾನೆದುರಿಸುತ್ತಿರುವ ಕೆಲ ಪ್ರಮುಖ ಸಮಸ್ಯೆಗಳಿಗೆ ತುರ್ತಾಗಿ ಪರಿಹಾರ ಕಂಡುಕೊಳ್ಳಬೇಕಿದೆ. ಕೆ.ಎಲ್.ರಾಹುಲ್ ಲಯಕ್ಕೆ ಮರಳಲು ತಿಣುಕಾಡುತ್ತಿದ್ದಾರೆ. ರೋಹಿತ್ ಶರ್ಮಾ ಸ್ಥಿರತೆ ಕಂಡುಕೊಂಡಿಲ್ಲ. ಪವರ್-ಪ್ಲೇನಲ್ಲಿ ಭಾರತದ ಆಟ ಪಂದ್ಯದಿಂದ ಪಂದ್ಯಕ್ಕೆ ಸಪ್ಪೆಯಾಗುತ್ತಿದೆ.
ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಇದನ್ನು ತಪ್ಪಿಸಬೇಕಿದ್ದರೆ ಆರಂಭಿಕರು ತಮ್ಮ ಸಾಮರ್ಥ್ಯಕ್ಕೆ ತಕ್ಕ ಆಟವಾಡಬೇಕು. ಹಾರ್ದಿಕ್ ಪಾಂಡ್ಯ ಆಲ್ರೌಂಡರ್ ಆಗಿ ಇನ್ನೂ ಮಿಂಚಿಲ್ಲ. ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಆಯ್ಕೆ ಸಮರ್ಥಿಸಿಕೊಳ್ಳುವಂತಹ ಆಟವಾಡಿಲ್ಲ. ಜೊತೆಗೆ ಗಾಯಗೊಂಡಿರುವ ಕಾರಣ ಅವರನ್ನು ಹೊರಗಿಟ್ಟು ರಿಷಭ್ ಪಂತ್ರನ್ನು ಆಡಿಸುವ ಸಾಧ್ಯತೆ ಇದೆ. ಒಂದು ವೇಳೆ ಕಾರ್ತಿಕ್ರನ್ನು ಉಳಿಸಿಕೊಂಡರೂ ದೀಪಕ್ ಹೂಡಾ ಬದಲಿಗೆ ಪಂತ್ರನ್ನು ಆಡಿಸಬಹುದು. ಇನು ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಕಣಕ್ಕಿಳಿಯುವ ನಿರೀಕ್ಷೆ ಇದೆ. ಉಳಿದಂತೆ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಆಗುವ ಸಾಧ್ಯತೆ ಕಡಿಮೆ. ಬಾಂಗ್ಲಾದೇಶ ಪ್ರತಿಭಾನ್ವಿತ ಆಟಗಾರರನ್ನು ಹೊಂದಿದ್ದು, ಬೌಲರ್ಗಳ ಮೇಲೆ ಹೆಚ್ಚು ಅವಲಂಬಿತಗೊಂಡಿದೆ.
ಸಂಭವನೀಯ ಆಟಗಾರರ ಪಟ್ಟಿ
ಭಾರತ: ಕೆ ಎಲ್ ರಾಹುಲ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಅಶ್ರ್ದೀಪ್ ಸಿಂಗ್.
ಬಾಂಗ್ಲಾ: ಸೌಮ್ಯ ಸರ್ಕಾರ್, ನಜ್ಮುಲ್ ಹುಸೈನ್ ಶಾಂಟೋ, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್(ನಾಯಕ), ಅಫೀಫ್ ಹೊಸೈನ್, ನುರುಲ್ ಹಸನ್, ಮೊಸಾದೆಕ್, ಯಾಸಿರ್, ಟಸ್ಕಿನ್ ಅಹಮ್ಮದ್, ಮುಸ್ತಾಫಿಜುರ್, ಹಸನ್.
ಪಂದ್ಯ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…