ಕ್ರೀಡೆ

ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಭಾರತ ಸ್ಪಷ್ಟ ಮೇಲುಗೈ

ಚಿತ್ತಗಾಂಗ್: ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದ್ದು ಭಾರತ ಸ್ಪಷ್ಟ ಮೇಲುಗೈ ಸಾಧಿಸಿದೆ.

ಇಲ್ಲಿನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನ ಭಾರತ 133.5 ಓವರ್ಗಳಲ್ಲಿ 404 ರನ್ ಗಳಿಸಿ ಮೊದಲ ಇನ್ನಿಂಗ್ಸ್‌ ಮುಗಿಸಿದೆ.
ಇದಕ್ಕೆ ಪ್ರತ್ಯುತ್ತರವಾಗಿ ಬಾಂಗ್ಲಾದೇಶ 44 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 133 ರನ್ ಗಳಿಸಿದೆ. ಇದರಿಂದ ಟೀಂ ಇಂಡಿಯಾ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದು, ಜಯದ ವಿಶ್ವಾಸದಲ್ಲಿದೆ.
ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ಬಾಂಗ್ಲಾದೇಶವನ್ನು ಮೊದಲನೇ ದಿನವೇ ಕಟ್ಟಿಹಾಕಿತು.
ಎರಡನೇ ದಿನದ ಆಟ ಮುಂದುವರಿಸಿದ ಶ್ರೇಯಸ್ ಅಯ್ಯರ್ ಶತಕ ಗಳಿಸುವ ಭರವಸೆ ಮೂಡಿಸಿದ್ದರು. ಆದರೆ ಕೇವಲ 4 ರನ್ ಗಳಿಸಿ 86 ರನ್ ಗಳ ಗಳಿಕೆಯೊಂದಿಗೆ ಅವರು ಪೆವಿಲಿಯನ್ ಗೆ ಮರಳಿದರು. ಆದರೆ ನಂತರ ಬಂದ ರವಿಚಂದ್ರನ್ ಅಶ್ವಿನ್ (58) ಮತ್ತು ಕುಲದೀಪ್ ಯಾದವ್ (40) ಏಳನೇ ವಿಕೆಟ್ ಗೆ ಅದ್ಭುತ ಜತೆಯಾಟ ಪ್ರದರ್ಶಿಸಿ ಭಾರತ 400 ರ ಗಡಿ ದಾಟುವಂತೆ ನೋಡಿಕೊಂಡರು.
ಬಾಂಗ್ಲಾ ಪರ ಝಾಕಿರ್ ಹಸನ್ 22 ರನ್, ನಜ್ಮುಲ್ ಹೊಸೈನ್ ಶಾಂಟೊ ಶೂನ್ಯ, ಲಿಟನ್ ದಾಸ್ 24 ರನ್, ಶಾಕಿಬ್ ಅಲ್ ಹಸನ್ 3 ರನ್, ಮುಶ್ಫಿಕರ್ ರಹೀಮ್ 28 ರನ್, ಯಾಸಿರ್ ಅಲಿ 4 ರನ್, ನೂರುಲ್ ಹಸನ್ 16 ರನ್, ತೈಜುಲ್ ಇಸ್ಲಾಂ ಶೂನ್ಯಕ್ಕೆ ಔಟ್ ಆದರು.
ಮೆಹದಿ ಹಸನ್ ಮಿರಾಜ್ 16 ಹಾಗೂ ಇಬಾದತ್ ಹೊಸೈನ್ ಅಜೇಯ 13 ರನ್ ಗಳಿಸಿದ್ದು ಮೂರನೇ ದಿನದಾಟವನ್ನು ಆರಂಭಿಸಲಿದ್ದಾರೆ.

ಟೀಂ ಇಂಡಿಯಾ ಬೌಲಿಂಗ್ ಗೆ ತತ್ತರಿಸಿದ ಬಾಂಗ್ಲಾ:

ಮೊದಲ ಓವರ್ನಿಂದಲೇ ಬಾಂಗ್ಲಾ ವಿರುದ್ಧ ಭಾರತ ಬಿಗಿ ಹಿಡಿತ ಸಾಧಿಸಿತು. ಮೊಹಮ್ಮದ್ ಸಿರಾಜ್ ಬಾಂಗ್ಲಾದೇಶ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಸಿರಾಜ್ 9 ಓವರ್ ಗೆ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರು. ಕುಲ್ದೀಪ್ ಯಾವದ್ 10 ಓವರ್ಗೆ 34 ರನ್ ನೀಡಿ 4 ವಿಕೆಟ್ ಕಬಳಿಸಿದರು. ಉಮೇಶ್ ಯಾದವ್ 1 ವಿಕೆಟ್ ಪಡೆದರು.

andolanait

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago