ಕ್ರೀಡೆ

ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಭಾರತ ಸ್ಪಷ್ಟ ಮೇಲುಗೈ

ಚಿತ್ತಗಾಂಗ್: ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದ್ದು ಭಾರತ ಸ್ಪಷ್ಟ ಮೇಲುಗೈ ಸಾಧಿಸಿದೆ.

ಇಲ್ಲಿನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನ ಭಾರತ 133.5 ಓವರ್ಗಳಲ್ಲಿ 404 ರನ್ ಗಳಿಸಿ ಮೊದಲ ಇನ್ನಿಂಗ್ಸ್‌ ಮುಗಿಸಿದೆ.
ಇದಕ್ಕೆ ಪ್ರತ್ಯುತ್ತರವಾಗಿ ಬಾಂಗ್ಲಾದೇಶ 44 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 133 ರನ್ ಗಳಿಸಿದೆ. ಇದರಿಂದ ಟೀಂ ಇಂಡಿಯಾ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದು, ಜಯದ ವಿಶ್ವಾಸದಲ್ಲಿದೆ.
ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ಬಾಂಗ್ಲಾದೇಶವನ್ನು ಮೊದಲನೇ ದಿನವೇ ಕಟ್ಟಿಹಾಕಿತು.
ಎರಡನೇ ದಿನದ ಆಟ ಮುಂದುವರಿಸಿದ ಶ್ರೇಯಸ್ ಅಯ್ಯರ್ ಶತಕ ಗಳಿಸುವ ಭರವಸೆ ಮೂಡಿಸಿದ್ದರು. ಆದರೆ ಕೇವಲ 4 ರನ್ ಗಳಿಸಿ 86 ರನ್ ಗಳ ಗಳಿಕೆಯೊಂದಿಗೆ ಅವರು ಪೆವಿಲಿಯನ್ ಗೆ ಮರಳಿದರು. ಆದರೆ ನಂತರ ಬಂದ ರವಿಚಂದ್ರನ್ ಅಶ್ವಿನ್ (58) ಮತ್ತು ಕುಲದೀಪ್ ಯಾದವ್ (40) ಏಳನೇ ವಿಕೆಟ್ ಗೆ ಅದ್ಭುತ ಜತೆಯಾಟ ಪ್ರದರ್ಶಿಸಿ ಭಾರತ 400 ರ ಗಡಿ ದಾಟುವಂತೆ ನೋಡಿಕೊಂಡರು.
ಬಾಂಗ್ಲಾ ಪರ ಝಾಕಿರ್ ಹಸನ್ 22 ರನ್, ನಜ್ಮುಲ್ ಹೊಸೈನ್ ಶಾಂಟೊ ಶೂನ್ಯ, ಲಿಟನ್ ದಾಸ್ 24 ರನ್, ಶಾಕಿಬ್ ಅಲ್ ಹಸನ್ 3 ರನ್, ಮುಶ್ಫಿಕರ್ ರಹೀಮ್ 28 ರನ್, ಯಾಸಿರ್ ಅಲಿ 4 ರನ್, ನೂರುಲ್ ಹಸನ್ 16 ರನ್, ತೈಜುಲ್ ಇಸ್ಲಾಂ ಶೂನ್ಯಕ್ಕೆ ಔಟ್ ಆದರು.
ಮೆಹದಿ ಹಸನ್ ಮಿರಾಜ್ 16 ಹಾಗೂ ಇಬಾದತ್ ಹೊಸೈನ್ ಅಜೇಯ 13 ರನ್ ಗಳಿಸಿದ್ದು ಮೂರನೇ ದಿನದಾಟವನ್ನು ಆರಂಭಿಸಲಿದ್ದಾರೆ.

ಟೀಂ ಇಂಡಿಯಾ ಬೌಲಿಂಗ್ ಗೆ ತತ್ತರಿಸಿದ ಬಾಂಗ್ಲಾ:

ಮೊದಲ ಓವರ್ನಿಂದಲೇ ಬಾಂಗ್ಲಾ ವಿರುದ್ಧ ಭಾರತ ಬಿಗಿ ಹಿಡಿತ ಸಾಧಿಸಿತು. ಮೊಹಮ್ಮದ್ ಸಿರಾಜ್ ಬಾಂಗ್ಲಾದೇಶ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಸಿರಾಜ್ 9 ಓವರ್ ಗೆ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರು. ಕುಲ್ದೀಪ್ ಯಾವದ್ 10 ಓವರ್ಗೆ 34 ರನ್ ನೀಡಿ 4 ವಿಕೆಟ್ ಕಬಳಿಸಿದರು. ಉಮೇಶ್ ಯಾದವ್ 1 ವಿಕೆಟ್ ಪಡೆದರು.

andolanait

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

49 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

56 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

2 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

3 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago