ಕ್ರೀಡೆ

ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಭಾರತ ಸ್ಪಷ್ಟ ಮೇಲುಗೈ

ಚಿತ್ತಗಾಂಗ್: ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದ್ದು ಭಾರತ ಸ್ಪಷ್ಟ ಮೇಲುಗೈ ಸಾಧಿಸಿದೆ.

ಇಲ್ಲಿನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನ ಭಾರತ 133.5 ಓವರ್ಗಳಲ್ಲಿ 404 ರನ್ ಗಳಿಸಿ ಮೊದಲ ಇನ್ನಿಂಗ್ಸ್‌ ಮುಗಿಸಿದೆ.
ಇದಕ್ಕೆ ಪ್ರತ್ಯುತ್ತರವಾಗಿ ಬಾಂಗ್ಲಾದೇಶ 44 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 133 ರನ್ ಗಳಿಸಿದೆ. ಇದರಿಂದ ಟೀಂ ಇಂಡಿಯಾ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದು, ಜಯದ ವಿಶ್ವಾಸದಲ್ಲಿದೆ.
ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ಬಾಂಗ್ಲಾದೇಶವನ್ನು ಮೊದಲನೇ ದಿನವೇ ಕಟ್ಟಿಹಾಕಿತು.
ಎರಡನೇ ದಿನದ ಆಟ ಮುಂದುವರಿಸಿದ ಶ್ರೇಯಸ್ ಅಯ್ಯರ್ ಶತಕ ಗಳಿಸುವ ಭರವಸೆ ಮೂಡಿಸಿದ್ದರು. ಆದರೆ ಕೇವಲ 4 ರನ್ ಗಳಿಸಿ 86 ರನ್ ಗಳ ಗಳಿಕೆಯೊಂದಿಗೆ ಅವರು ಪೆವಿಲಿಯನ್ ಗೆ ಮರಳಿದರು. ಆದರೆ ನಂತರ ಬಂದ ರವಿಚಂದ್ರನ್ ಅಶ್ವಿನ್ (58) ಮತ್ತು ಕುಲದೀಪ್ ಯಾದವ್ (40) ಏಳನೇ ವಿಕೆಟ್ ಗೆ ಅದ್ಭುತ ಜತೆಯಾಟ ಪ್ರದರ್ಶಿಸಿ ಭಾರತ 400 ರ ಗಡಿ ದಾಟುವಂತೆ ನೋಡಿಕೊಂಡರು.
ಬಾಂಗ್ಲಾ ಪರ ಝಾಕಿರ್ ಹಸನ್ 22 ರನ್, ನಜ್ಮುಲ್ ಹೊಸೈನ್ ಶಾಂಟೊ ಶೂನ್ಯ, ಲಿಟನ್ ದಾಸ್ 24 ರನ್, ಶಾಕಿಬ್ ಅಲ್ ಹಸನ್ 3 ರನ್, ಮುಶ್ಫಿಕರ್ ರಹೀಮ್ 28 ರನ್, ಯಾಸಿರ್ ಅಲಿ 4 ರನ್, ನೂರುಲ್ ಹಸನ್ 16 ರನ್, ತೈಜುಲ್ ಇಸ್ಲಾಂ ಶೂನ್ಯಕ್ಕೆ ಔಟ್ ಆದರು.
ಮೆಹದಿ ಹಸನ್ ಮಿರಾಜ್ 16 ಹಾಗೂ ಇಬಾದತ್ ಹೊಸೈನ್ ಅಜೇಯ 13 ರನ್ ಗಳಿಸಿದ್ದು ಮೂರನೇ ದಿನದಾಟವನ್ನು ಆರಂಭಿಸಲಿದ್ದಾರೆ.

ಟೀಂ ಇಂಡಿಯಾ ಬೌಲಿಂಗ್ ಗೆ ತತ್ತರಿಸಿದ ಬಾಂಗ್ಲಾ:

ಮೊದಲ ಓವರ್ನಿಂದಲೇ ಬಾಂಗ್ಲಾ ವಿರುದ್ಧ ಭಾರತ ಬಿಗಿ ಹಿಡಿತ ಸಾಧಿಸಿತು. ಮೊಹಮ್ಮದ್ ಸಿರಾಜ್ ಬಾಂಗ್ಲಾದೇಶ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಸಿರಾಜ್ 9 ಓವರ್ ಗೆ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರು. ಕುಲ್ದೀಪ್ ಯಾವದ್ 10 ಓವರ್ಗೆ 34 ರನ್ ನೀಡಿ 4 ವಿಕೆಟ್ ಕಬಳಿಸಿದರು. ಉಮೇಶ್ ಯಾದವ್ 1 ವಿಕೆಟ್ ಪಡೆದರು.

andolanait

Recent Posts

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

11 mins ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

1 hour ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

2 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

5 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

5 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

5 hours ago