ಕ್ರೀಡೆ

ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಭಾರತ ಸ್ಪಷ್ಟ ಮೇಲುಗೈ

ಚಿತ್ತಗಾಂಗ್: ಭಾರತ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂತ್ಯಕ್ಕೆ ಬಾಂಗ್ಲಾದೇಶ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿದ್ದು ಭಾರತ ಸ್ಪಷ್ಟ ಮೇಲುಗೈ ಸಾಧಿಸಿದೆ.

ಇಲ್ಲಿನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನ ಭಾರತ 133.5 ಓವರ್ಗಳಲ್ಲಿ 404 ರನ್ ಗಳಿಸಿ ಮೊದಲ ಇನ್ನಿಂಗ್ಸ್‌ ಮುಗಿಸಿದೆ.
ಇದಕ್ಕೆ ಪ್ರತ್ಯುತ್ತರವಾಗಿ ಬಾಂಗ್ಲಾದೇಶ 44 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 133 ರನ್ ಗಳಿಸಿದೆ. ಇದರಿಂದ ಟೀಂ ಇಂಡಿಯಾ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದು, ಜಯದ ವಿಶ್ವಾಸದಲ್ಲಿದೆ.
ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಭಾರತ ಬಾಂಗ್ಲಾದೇಶವನ್ನು ಮೊದಲನೇ ದಿನವೇ ಕಟ್ಟಿಹಾಕಿತು.
ಎರಡನೇ ದಿನದ ಆಟ ಮುಂದುವರಿಸಿದ ಶ್ರೇಯಸ್ ಅಯ್ಯರ್ ಶತಕ ಗಳಿಸುವ ಭರವಸೆ ಮೂಡಿಸಿದ್ದರು. ಆದರೆ ಕೇವಲ 4 ರನ್ ಗಳಿಸಿ 86 ರನ್ ಗಳ ಗಳಿಕೆಯೊಂದಿಗೆ ಅವರು ಪೆವಿಲಿಯನ್ ಗೆ ಮರಳಿದರು. ಆದರೆ ನಂತರ ಬಂದ ರವಿಚಂದ್ರನ್ ಅಶ್ವಿನ್ (58) ಮತ್ತು ಕುಲದೀಪ್ ಯಾದವ್ (40) ಏಳನೇ ವಿಕೆಟ್ ಗೆ ಅದ್ಭುತ ಜತೆಯಾಟ ಪ್ರದರ್ಶಿಸಿ ಭಾರತ 400 ರ ಗಡಿ ದಾಟುವಂತೆ ನೋಡಿಕೊಂಡರು.
ಬಾಂಗ್ಲಾ ಪರ ಝಾಕಿರ್ ಹಸನ್ 22 ರನ್, ನಜ್ಮುಲ್ ಹೊಸೈನ್ ಶಾಂಟೊ ಶೂನ್ಯ, ಲಿಟನ್ ದಾಸ್ 24 ರನ್, ಶಾಕಿಬ್ ಅಲ್ ಹಸನ್ 3 ರನ್, ಮುಶ್ಫಿಕರ್ ರಹೀಮ್ 28 ರನ್, ಯಾಸಿರ್ ಅಲಿ 4 ರನ್, ನೂರುಲ್ ಹಸನ್ 16 ರನ್, ತೈಜುಲ್ ಇಸ್ಲಾಂ ಶೂನ್ಯಕ್ಕೆ ಔಟ್ ಆದರು.
ಮೆಹದಿ ಹಸನ್ ಮಿರಾಜ್ 16 ಹಾಗೂ ಇಬಾದತ್ ಹೊಸೈನ್ ಅಜೇಯ 13 ರನ್ ಗಳಿಸಿದ್ದು ಮೂರನೇ ದಿನದಾಟವನ್ನು ಆರಂಭಿಸಲಿದ್ದಾರೆ.

ಟೀಂ ಇಂಡಿಯಾ ಬೌಲಿಂಗ್ ಗೆ ತತ್ತರಿಸಿದ ಬಾಂಗ್ಲಾ:

ಮೊದಲ ಓವರ್ನಿಂದಲೇ ಬಾಂಗ್ಲಾ ವಿರುದ್ಧ ಭಾರತ ಬಿಗಿ ಹಿಡಿತ ಸಾಧಿಸಿತು. ಮೊಹಮ್ಮದ್ ಸಿರಾಜ್ ಬಾಂಗ್ಲಾದೇಶ ತಂಡಕ್ಕೆ ಆರಂಭಿಕ ಆಘಾತ ನೀಡಿದರು. ಸಿರಾಜ್ 9 ಓವರ್ ಗೆ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರು. ಕುಲ್ದೀಪ್ ಯಾವದ್ 10 ಓವರ್ಗೆ 34 ರನ್ ನೀಡಿ 4 ವಿಕೆಟ್ ಕಬಳಿಸಿದರು. ಉಮೇಶ್ ಯಾದವ್ 1 ವಿಕೆಟ್ ಪಡೆದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

3 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

3 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

3 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

3 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

3 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

3 hours ago