ಕ್ರೀಡೆ

ಬಾಂಗ್ಲಾ ಟೆಸ್ಟ್: ಗೆಲುವಿನೆಡೆಗೆ ಭಾರತ ಮುನ್ನಡೆ

ಜಾಕೀರ್ ಹಸನ್‌ ಶತಕ ಸಂಭ್ರಮ, ಮತ್ತೆ ಮಿಂಚಿದ ಸ್ಪಿನ್ನರ್ ಗಳು

ಚಿತ್ತಗಾಂಗ್‌ : ಬಂದರು ನಗರಿ ಚಿತ್ತಗಾಂಗ್‌ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾ ನಡುವಿನ ಮೊದಲ ಟೆಸ್ಟ್​ ಪಂದ್ಯದ ನಾಲ್ಕನೇ ದಿನ ಭಾರತ ಗೆಲುವಿನತ್ತ ಮುಖ ಮಾಡಿದೆ. ದಿನದಾಟದಂತ್ಯಕ್ಕೆ ಬಾಂಗ್ಲಾ ತಂಡ ಪ್ರಮುಖ 6 ವಿಕೆಟ್ ಕಳೆದುಕೊಂಡು 272 ರನ್ ಗಳಿಸಿದೆ.

ನಾಲ್ಕನೇ ದಿನದಾಟದಲ್ಲಿ ಬಾಂಗ್ಲಾ ಪರ ಜಾಕೀರ್ ಹಸನ್ ಶತಕ ಸಿಡಿಸಿ ಸಂಭ್ರಮಿಸಿದರೆ, ನಾಯಕ ಶಕೀಬ್ ಹಾಗೂ ಮೆಹದಿ ಹಸನ್ ಐದನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಬಾಂಗ್ಲಾ ಗೆಲ್ಲಬೇಕಾದರೆ ಕೊನೆಯ ದಿನದಲ್ಲಿ 241 ರನ್ ಗಳಿಸಬೇಕಿದೆ. ಟೀಂ ಇಂಡಿಯಾ ಗೆಲುವು ಸಾಧಿಸಬೇಕೆಂದರೆ ಬಾಂಗ್ಲಾ ತಂಡದಲ್ಲಿ ಉಳಿದಿರುವ 4 ವಿಕೆಟ್​ಗಳನ್ನು ಉರುಳಿಸಬೇಕಿದೆ.

ಮೊದಲ ಇನಿಂಗ್ಸ್‌ನಲ್ಲಿ 404 ರನ್ ಗಳಿಸಿದ ಭಾರತ, ಎರಡನೇ ಇನ್ನಿಂಗ್ಸ್​ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಭಾರತ ನೀಡಿರುವ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾ ಪಡೆ, 3ನೇ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 42 ರನ್​ಗಳಿಸಿತ್ತು. ಬಳಿಕ ನಾಲ್ಕನೇ ದಿನದಾಟ ಆರಂಭಿಸಿದ ಬಾಂಗ್ಲಾದೇಶ ತಂಡದ ಆರಂಭಿಕ ಜೋಡಿ ನಜ್ಮುಲ್ ಹುಸೇನ್ ಶಾಂಟೊ ಮತ್ತು ಜಾಕಿರ್ ಹಸನ್ ಮೊದಲ ವಿಕೆಟ್‌ಗೆ 124 ರನ್ ಸೇರಿಸಿದರು. ಆದರೆ ಈ ಜೋಡಿ ಮುರಿದ ತಕ್ಷಣ ಬಾಂಗ್ಲಾದೇಶದ ಉಳಿದ ಬ್ಯಾಟರ್‌ ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿಕೊಂಡರು.

ಅಕ್ಷರ್ ಪಟೇಲ್, ಕುಲ್ದೀಪ್ ಮ್ಯಾಜಿಕ್ ಮುಂದೆ ಮಂಕಾದ ಬಾಂಗ್ಲಾ ತಂಡ ನಿರಂತರವಾಗಿ ವಿಕೆಟ್ ಕಳೆದುಕೊಳ್ಳಲಾರಂಭಿಸಿತು. ಆದರೆ, ಇದಕ್ಕೂ ಮುನ್ನ ಶಾಂಟೊ ಅವರನ್ನು ಔಟ್ ಮಾಡುವ ಮೂಲಕ ಉಮೇಶ್ ಯಾದವ್ ಭಾರತಕ್ಕೆ ಮೊದಲ ವಿಕೆಟ್ ತಂದುಕೊಡುವಲ್ಲಿ ಯಶಸ್ವಿಯಾದರು. ತಮ್ಮ ಇನ್ನಿಂಗ್ಸ್​ನಲ್ಲಿ 156 ಎಸೆತಗಳನ್ನು ಎದುರಿಸಿದ ಶಾಂಟೊ ಏಳು ಬೌಂಡರಿಗಳ ನೆರವಿನಿಂದ 67 ರನ್ ಗಳಿಸಿದರು.
ಶಾಂಟೋ ವಿಕೆಟ್ ಬಳಿಕ ಅಕ್ಷರ್, ಯಾಸಿರ್ ಅಲಿಯನ್ನು ವಜಾ ಮಾಡಿದರು. ಲಿಟನ್ ದಾಸ್ ಅವರನ್ನು ಕುಲ್ದೀಪ್ ಯಾದವ್ ಔಟ್ ಮಾಡುವ ಮೂಲಕ ಭಾರತಕ್ಕೆ ನಾಲ್ಕನೇ ಯಶಸ್ಸು ತಂದುಕೊಟ್ಟರು. ಯಾಸಿರ್ ಐದು ರನ್ ಗಳಿಸಿದರೆ, ಲಿಟನ್ 19 ರನ್ ಗಳಿಸಿ ಪೆವಿಲಿಯನ್​ ಸೇರಿಕೊಂಡರು.

ಶತಕ ಬಾರಿಸುವುದರೊಂದಿಗೆ ಭಾರತಕ್ಕೆ ತಲೆನೋವಾಗಿದ್ದ ಹಸನ್​ರನ್ನು ಔಟ್​ ಮಾಡುವ ಮೂಲಕ ಅಶ್ವಿನ್ ಭಾರತಕ್ಕೆ ಐದನೇ ಯಶಸ್ಸು ನೀಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 224 ಎಸೆತಗಳನ್ನು ಎದುರಿಸಿದ ಹಸನ್, 13 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 100 ರನ್ ಗಳಿಸಿದರು. ನಂತರ ಬಾಂಗ್ಲಾದೇಶಕ್ಕೆ ಐದನೇ ಹೊಡೆತವನ್ನು ನೀಡಿದ ಅಕ್ಷರ್, ಮುಶ್ಫಿಕ್ಮರ್ ರಹೀಮ್ ಅವರ ಇನ್ನಿಂಗ್ಸ್ ಅನ್ನು 23 ರನ್‌ಗಳಿಗೆ ಕೊನೆಗೊಳಿಸಿದರು. ಬಳಿಕ ನೂರುಲ್ ಹಸನ್​ಗೂ ಪೆವಿಲಿಯನ್ ಹಾದಿ ತೋರಿಸಿದರು.

andolanait

Recent Posts

ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶ

ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…

2 hours ago

ಮಹಾಭಾರತ: ಹೊಸ ಅರ್ಥ ಕಟ್ಟಲು ಯತ್ನಿಸಿದ ರಾಮು

ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…

2 hours ago

ಹಾಡು-ಪಾಡುವಿನ ರಾಮು ರಾಜ್ಯ

ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…

2 hours ago

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

16 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

16 hours ago