ಕ್ರೀಡೆ

ಬಾಂಗ್ಲಾ ಟೆಸ್ಟ್: ಗೆಲುವಿನೆಡೆಗೆ ಭಾರತ ಮುನ್ನಡೆ

ಜಾಕೀರ್ ಹಸನ್‌ ಶತಕ ಸಂಭ್ರಮ, ಮತ್ತೆ ಮಿಂಚಿದ ಸ್ಪಿನ್ನರ್ ಗಳು

ಚಿತ್ತಗಾಂಗ್‌ : ಬಂದರು ನಗರಿ ಚಿತ್ತಗಾಂಗ್‌ ನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾ ನಡುವಿನ ಮೊದಲ ಟೆಸ್ಟ್​ ಪಂದ್ಯದ ನಾಲ್ಕನೇ ದಿನ ಭಾರತ ಗೆಲುವಿನತ್ತ ಮುಖ ಮಾಡಿದೆ. ದಿನದಾಟದಂತ್ಯಕ್ಕೆ ಬಾಂಗ್ಲಾ ತಂಡ ಪ್ರಮುಖ 6 ವಿಕೆಟ್ ಕಳೆದುಕೊಂಡು 272 ರನ್ ಗಳಿಸಿದೆ.

ನಾಲ್ಕನೇ ದಿನದಾಟದಲ್ಲಿ ಬಾಂಗ್ಲಾ ಪರ ಜಾಕೀರ್ ಹಸನ್ ಶತಕ ಸಿಡಿಸಿ ಸಂಭ್ರಮಿಸಿದರೆ, ನಾಯಕ ಶಕೀಬ್ ಹಾಗೂ ಮೆಹದಿ ಹಸನ್ ಐದನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಬಾಂಗ್ಲಾ ಗೆಲ್ಲಬೇಕಾದರೆ ಕೊನೆಯ ದಿನದಲ್ಲಿ 241 ರನ್ ಗಳಿಸಬೇಕಿದೆ. ಟೀಂ ಇಂಡಿಯಾ ಗೆಲುವು ಸಾಧಿಸಬೇಕೆಂದರೆ ಬಾಂಗ್ಲಾ ತಂಡದಲ್ಲಿ ಉಳಿದಿರುವ 4 ವಿಕೆಟ್​ಗಳನ್ನು ಉರುಳಿಸಬೇಕಿದೆ.

ಮೊದಲ ಇನಿಂಗ್ಸ್‌ನಲ್ಲಿ 404 ರನ್ ಗಳಿಸಿದ ಭಾರತ, ಎರಡನೇ ಇನ್ನಿಂಗ್ಸ್​ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.

ಭಾರತ ನೀಡಿರುವ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾ ಪಡೆ, 3ನೇ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 42 ರನ್​ಗಳಿಸಿತ್ತು. ಬಳಿಕ ನಾಲ್ಕನೇ ದಿನದಾಟ ಆರಂಭಿಸಿದ ಬಾಂಗ್ಲಾದೇಶ ತಂಡದ ಆರಂಭಿಕ ಜೋಡಿ ನಜ್ಮುಲ್ ಹುಸೇನ್ ಶಾಂಟೊ ಮತ್ತು ಜಾಕಿರ್ ಹಸನ್ ಮೊದಲ ವಿಕೆಟ್‌ಗೆ 124 ರನ್ ಸೇರಿಸಿದರು. ಆದರೆ ಈ ಜೋಡಿ ಮುರಿದ ತಕ್ಷಣ ಬಾಂಗ್ಲಾದೇಶದ ಉಳಿದ ಬ್ಯಾಟರ್‌ ಗಳು ಬಂದಷ್ಟೇ ವೇಗವಾಗಿ ಪೆವಿಲಿಯನ್‌ ಸೇರಿಕೊಂಡರು.

ಅಕ್ಷರ್ ಪಟೇಲ್, ಕುಲ್ದೀಪ್ ಮ್ಯಾಜಿಕ್ ಮುಂದೆ ಮಂಕಾದ ಬಾಂಗ್ಲಾ ತಂಡ ನಿರಂತರವಾಗಿ ವಿಕೆಟ್ ಕಳೆದುಕೊಳ್ಳಲಾರಂಭಿಸಿತು. ಆದರೆ, ಇದಕ್ಕೂ ಮುನ್ನ ಶಾಂಟೊ ಅವರನ್ನು ಔಟ್ ಮಾಡುವ ಮೂಲಕ ಉಮೇಶ್ ಯಾದವ್ ಭಾರತಕ್ಕೆ ಮೊದಲ ವಿಕೆಟ್ ತಂದುಕೊಡುವಲ್ಲಿ ಯಶಸ್ವಿಯಾದರು. ತಮ್ಮ ಇನ್ನಿಂಗ್ಸ್​ನಲ್ಲಿ 156 ಎಸೆತಗಳನ್ನು ಎದುರಿಸಿದ ಶಾಂಟೊ ಏಳು ಬೌಂಡರಿಗಳ ನೆರವಿನಿಂದ 67 ರನ್ ಗಳಿಸಿದರು.
ಶಾಂಟೋ ವಿಕೆಟ್ ಬಳಿಕ ಅಕ್ಷರ್, ಯಾಸಿರ್ ಅಲಿಯನ್ನು ವಜಾ ಮಾಡಿದರು. ಲಿಟನ್ ದಾಸ್ ಅವರನ್ನು ಕುಲ್ದೀಪ್ ಯಾದವ್ ಔಟ್ ಮಾಡುವ ಮೂಲಕ ಭಾರತಕ್ಕೆ ನಾಲ್ಕನೇ ಯಶಸ್ಸು ತಂದುಕೊಟ್ಟರು. ಯಾಸಿರ್ ಐದು ರನ್ ಗಳಿಸಿದರೆ, ಲಿಟನ್ 19 ರನ್ ಗಳಿಸಿ ಪೆವಿಲಿಯನ್​ ಸೇರಿಕೊಂಡರು.

ಶತಕ ಬಾರಿಸುವುದರೊಂದಿಗೆ ಭಾರತಕ್ಕೆ ತಲೆನೋವಾಗಿದ್ದ ಹಸನ್​ರನ್ನು ಔಟ್​ ಮಾಡುವ ಮೂಲಕ ಅಶ್ವಿನ್ ಭಾರತಕ್ಕೆ ಐದನೇ ಯಶಸ್ಸು ನೀಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 224 ಎಸೆತಗಳನ್ನು ಎದುರಿಸಿದ ಹಸನ್, 13 ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 100 ರನ್ ಗಳಿಸಿದರು. ನಂತರ ಬಾಂಗ್ಲಾದೇಶಕ್ಕೆ ಐದನೇ ಹೊಡೆತವನ್ನು ನೀಡಿದ ಅಕ್ಷರ್, ಮುಶ್ಫಿಕ್ಮರ್ ರಹೀಮ್ ಅವರ ಇನ್ನಿಂಗ್ಸ್ ಅನ್ನು 23 ರನ್‌ಗಳಿಗೆ ಕೊನೆಗೊಳಿಸಿದರು. ಬಳಿಕ ನೂರುಲ್ ಹಸನ್​ಗೂ ಪೆವಿಲಿಯನ್ ಹಾದಿ ತೋರಿಸಿದರು.

andolanait

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

5 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

8 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

9 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

9 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

9 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

10 hours ago