ಕ್ರೀಡೆ

ವಿಶ್ವಕಪ್‌ನಿಂದ ಹೊರಬಿದ್ದ ಬಾಂಗ್ಲಾದೇಶ

ಕೋಲ್ಕತಾ: ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಪಾಕಿಸ್ಥಾನ ತಂಡವು ಮಂಗಳವಾರ ನಡೆದ ವಿಶ್ವಕಪ್‌ ಕ್ರಿಕೆಟ್‌ ಕೂಟದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿತು. ಈ ಸೋಲಿನಿಂದ ಬಾಂಗ್ಲಾದೇಶವು ಕೂಟದಿಂದ ಹೊರಬಿತ್ತು.

ಶಾಹೀನ್‌ ಶಾ ಅಫ್ರಿದಿ ಮತ್ತು ಮೊಹಮ್ಮದ್‌ ವಸೀಮ್‌ ಅವರ ಬಿಗು ದಾಳಿಯೆದುರು ರನ್‌ ಗಳಿಸಲು ಒದ್ದಾಡಿದ ಬಾಂಗ್ಲಾದೇಶವು 45.1 ಓವರ್‌ಗಳಲ್ಲಿ 204 ರನ್ನಿಗೆ ಆಲೌಟಾಯಿತು. ಇದಕ್ಕುತ್ತರವಾಗಿ ಆರಂಭಿಕರಾದ ಅಬ್ದುಲ್ಲ ಶಫೀಕ್‌ ಮತ್ತು ಫ‌ಖಾರ್‌ ಜಮಾನ್‌ ಅವರ ಆಕರ್ಷಕ ಅರ್ಧಶತಕದಿಂದಾಗಿ ಪಾಕಿಸ್ಥಾನವು 32.3 ಓವರ್‌ಗಳಲ್ಲಿ ಮೂರು ವಿಕೆಟಿಗೆ 205 ರನ್‌ ಗಳಿಸಿ ಜಯಭೇರಿ ಬಾರಿಸಿತು. ಇದು ಈ ಕೂಟದಲ್ಲಿ ಪಾಕ ಸಾಧಿಸಿದ ಮೂರನೇ ಗೆಲುವು ಸಾಗಿದೆ.

ಬಾಂಗ್ಲಾ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಶಫೀಕ್‌ ಮತ್ತು ಜಮಾನ್‌ ಅವರು ಮೊದಲ ವಿಕೆಟಿಗೆ 128 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡದ ಗೆಲುವನ್ನು ಖಚಿತಪಡಿಸಿದ್ದರು. ಈ ಜೋಡಿಯನ್ನು ಮುರಿಯಲು ಬಾಂಗ್ಲಾ ಮಾಡಿದ ಎಲ್ಲ ಪ್ರಯತ್ನಗಳು ವಿಫ‌ಲವಾಗಿದ್ದವು. ಅಂತಿಮವಾಗಿ ಮೆಹಿದಿ ಹಸನ್‌ ಮಿರಾಜ್‌ ಈ ಜೋಡಿಯನ್ನು ಮುರಿದರು. 69 ಎಸೆತಗಳಿಂದ 68 ರನ್‌ ಗಳಿಸಿದ ಶಫೀಕ್‌ ಮೊದಲಿಗರಾಗಿ ಔಟಾದರು. ಅವರು 9 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದ್ದರು.

ಆಬಳಿಕ ಜಮಾನ್‌ ಅವರನ್ನು ಸೇರಿಕೊಂಡ ನಾಯಕ ಬಾಬರ ಆಜಂ ತಂಡವನ್ನು ಆಧರಿಸುವ ಪ್ರಯತ್ನ ಮಾಡಿದರು. ಆದರೆ ಅವರಿಬ್ಬರು 9 ರನ್‌ ಅಂತರದಲ್ಲಿ ಮಿರಾಜ್‌ಗೆ ವಿಕೆಟ್‌ ಒಪ್ಪಿಸಿದರು. 74 ಎಸೆತ ಎದುರಿಸಿದ ಅವರು 71 ರನ್‌ ಗಳಿಸಿದರು. 3 ಬೌಂಡರಿ ಮತ್ತು 7 ಸಿಕ್ಸರ್‌ ಬಾರಿಸಿದ್ದರು. ಮೊಹಮ್ಮದ್‌ ರಿಜ್ವಾನ್‌ ಮತ್ತು ಇಫ್ತಿಕಾರ್‌ ಅಹ್ಮದ್‌ ಮುರಿಯದ ನಾಲ್ಕನೇ ವಿಕೆಟಿಗೆ 36 ರನ್‌ ಪೇರಿಸಿ ತಂಡಕ್ಕೆ ಜಯ ತಂದುಕೊಟ್ಟರು.

ಮಹಮದುಲ್ಲ ಅರ್ಧಶತಕ

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಬಾಂಗ್ಲಾದೇಶ ಆರಂಭದಲ್ಲಿಯೇ ಎಡವಿತು. ಇನ್ನೂ ರನ್‌ ಖಾತೆ ತೆರೆಯುವ ಮೊದಲೇ ತಂಡವು ತಾಂಜಿದ್‌ ಹಸನ್‌ ಅವರನ್ನು ಕಳೆದುಕೊಂಡಿತು. ಆದರೆ ಲಿಟನ್‌ ದಾಸ್‌, ಶಕಿಬ್‌ ಅಲ್‌ ಹಸನ್‌ ಮತ್ತು ಮಹಮದುಲ್ಲ ಅವರ ತಾಳ್ಮೆಯ ಆಟದಿಂದಾಗಿ ತಂಡ 200ರ ಗಡಿ ದಾಟಲು ಯಶಸ್ವಿಯಾಯಿತು. ಅವರಲ್ಲಿ ಮಹಮದುಲ್ಲ ಅವರು ಅರ್ಧಶತಕ ದಾಖಲಿಸಿ ಗಮನ ಸೆಳೆದರು.

23 ರನ್ನಿಗೆ ಮೂರು ವಿಕೆಟ್‌ ಕಳೆದುಕೊಐಡು ಒದ್ದಾಡುತ್ತಿದ್ದ ತಂಡಕ್ಕೆ ಲಿಟನ್‌ ದಾಸ್‌ ಮತ್ತು ಮಹಮದುಲ್ಲ ಆಸರೆಯಾಗಿ ನಿಂತರು. ಅವರಿಬ್ಬರು ನಾಲ್ಕನೇ ವಿಕೆಟಿಗೆ 79 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ಕುಸಿದ ತಂಡವನ್ನು ಮೇಲಕ್ಕೆತ್ತಲು ನೆರವಾದರು. ಈ ಹಂತದಲ್ಲಿ 45 ರನ್‌ ಗಳಿಸಿದ ಲಿಟನ್‌ ಔಟಾದರು. ಸ್ವಲ್ಪ ಹೊತ್ತಿನ ಬಳಿಕ ಮಹಮದುಲ್ಲ ಕೂಡ ಔಟಾದರು. ಅವರು 70 ಎಸೆತ ಎದುರಿಸಿ 56 ರನ್‌ ಹೊಡೆದರು. 6 ಬೌಂಡರಿ ಮತ್ತು 1 ಸಿಕ್ಸರ್‌ ಬಾರಿಸಿದ್ದರು.

ಆರಂಭದಲ್ಲಿ ಬಾಂಗ್ಲಾದ ಕುಸಿತಕ್ಕೆ ಕಾರಣರಾದ ಶಾಹೀನ್‌ ಶಾ ಅಫ್ರಿದಿ 23 ರನ್ನಿಗೆ ಮೂರು ವಿಕೆಟ್‌ ಕಿತ್ತ ಸಾಧನೆ ಮಾಡಿದರು. ಈ ನಿರ್ವಹಣೆ ವೇಳೆ ಅವರು ಏಕದಿನ ಕ್ರಿಕೆಟ್‌ನಲ್ಲಿ ಅತೀವೇವಾಗಿ ನೂರು ವಿಕೆಟ್‌ ಕಿತ್ತು ಗಮನ ಸೆಳೆದರು. ಅವರು 51 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ ಮಿಚೆಲ್‌ ಸ್ಟಾರ್ಕ್‌ 52 ಪಂದ್ಯಗಳಿಂದ ನೂರು ವಿಕೆಟ್‌ ಉರುಳಿಸಿದ್ದರು.

ಕೊನೆ ಹಂತದಲ್ಲಿ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್‌ ವಸೀಮ್‌ ಜೂನಿಯರ್‌ 31 ರನ್ನಿಗೆ ಮೂರು ವಿಕೆಟ್‌ ಪಡೆದರು. ಹ್ಯಾರಿಸ್‌ ರವೂಫ್ 36 ರನ್ನಿಗೆ ಎರಡು ವಿಕೆಟ್‌ ಕಿತ್ತರು.

andolanait

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

8 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

12 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

13 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

13 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

18 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

18 hours ago