ಕ್ರೀಡೆ

ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಾಂಗ್ಲಾ: 546 ರನ್​ಗಳ ಭರ್ಜರಿ ಗೆಲುವು

ಢಾಕಾ: ಅಫ್ಘಾನಿಸ್ತಾನ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶವು ಭರ್ಜರಿಯಾಗಿ ಗೆದ್ದುಕೊಂಡಿದೆ. ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆದ ಪಂದ್ಯವನ್ನು ಲಿಟ್ಟನ್ ದಾಸ್ ಪಡೆ 546 ರನ್ ಅಂತರದಿಂದ ಗೆದ್ದು ಬೀಗಿದೆ.

ಬಾಂಗ್ಲಾದೇಶ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಅವರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ದಾಖಲಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಬಾಂಗ್ಲಾದೇಶ ಈ ಗೌರವಕ್ಕೆ ಪಾತ್ರವಾಯಿತು.

ಟೆಸ್ಟ್ ಪಂದ್ಯ ಗೆಲ್ಲಲು 662 ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನವು ಕೇವಲ 115 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. 2019ರ ಟೆಸ್ಟ್ ಸೋಲಿನ ಸೇಡನ್ನು ಬಾಂಗ್ಲಾ ಭರ್ಜರಿಯಾಗಿ ತೀರಿಸಿಕೊಂಡಿತು.

ಬಾಂಗ್ಲಾ ದೇಶವು ಮೊದಲ ಇನ್ನಿಂಗ್ಸ್ ನಲ್ಲಿ 382 ರನ್ ಗಳಿಸಿದ್ದರೆ, ಅಫ್ಘಾನಿಸ್ತಾನವು ಕೇವಲ 146 ರನ್ ಮಾಡಿತ್ತು. ಎರಡನೇ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾ ನಾಲ್ಕು ವಿಕೆಟ್ ನಷ್ಟಕ್ಕೆ 425 ರನ್ ಮಾಡಿ ಡಿಕ್ಲೇರ್ ಮಾಡಿಕೊಂಡಿತ್ತು.

ಬಾಂಗ್ಲಾದ ನಜ್ಮುಲ್ ಹುಸೇನ್ ಶಂಟೋ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಮೊದಲ ಇನ್ನಿಂಗ್ಸ್ ನಲ್ಲಿ 146 ರನ್ ಮಾಡಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 124 ರನ್ ಬಾರಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಮೊಮಿನಲ್ ಹಕ್ 121 ರನ್ ಗಳಿಸಿದ್ದರು.

ನಜ್ಮುಲ್ ಹುಸೇನ್ ಶಂಟೋ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಬಾಂಗ್ಲಾ ಪ್ರವಾಸದಲ್ಲಿ ಅಫ್ಘಾನ್ ತಂಡವು ಮೂರು ಏಕದಿನ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಲಿದೆ

andolanait

Recent Posts

ಡೇವಿಡ್‌ ಬ್ಯಾಟಿಂಗ್‌ ಅಬ್ಬರ ; ಆರ್‌ಸಿಬಿಗೆ ವಿಕ್ಟರಿ, ಚೆನ್ನೈಗೆ ಸೋಲು

ಬೆಂಗಳೂರು : ನಾಯಕ ರಜತ್‌ ಪಾಟೀದಾರ್‌, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್‌ ನೆರವಿನಿಂದ ರಾಯಲ್‌ ಚಾಲೆಂಜರ್ಸ್‌…

42 mins ago

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

4 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

4 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

4 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

5 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

5 hours ago