ಕ್ರೀಡೆ

ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಾಂಗ್ಲಾ: 546 ರನ್​ಗಳ ಭರ್ಜರಿ ಗೆಲುವು

ಢಾಕಾ: ಅಫ್ಘಾನಿಸ್ತಾನ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶವು ಭರ್ಜರಿಯಾಗಿ ಗೆದ್ದುಕೊಂಡಿದೆ. ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆದ ಪಂದ್ಯವನ್ನು ಲಿಟ್ಟನ್ ದಾಸ್ ಪಡೆ 546 ರನ್ ಅಂತರದಿಂದ ಗೆದ್ದು ಬೀಗಿದೆ.

ಬಾಂಗ್ಲಾದೇಶ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಅವರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ದಾಖಲಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಬಾಂಗ್ಲಾದೇಶ ಈ ಗೌರವಕ್ಕೆ ಪಾತ್ರವಾಯಿತು.

ಟೆಸ್ಟ್ ಪಂದ್ಯ ಗೆಲ್ಲಲು 662 ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನವು ಕೇವಲ 115 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. 2019ರ ಟೆಸ್ಟ್ ಸೋಲಿನ ಸೇಡನ್ನು ಬಾಂಗ್ಲಾ ಭರ್ಜರಿಯಾಗಿ ತೀರಿಸಿಕೊಂಡಿತು.

ಬಾಂಗ್ಲಾ ದೇಶವು ಮೊದಲ ಇನ್ನಿಂಗ್ಸ್ ನಲ್ಲಿ 382 ರನ್ ಗಳಿಸಿದ್ದರೆ, ಅಫ್ಘಾನಿಸ್ತಾನವು ಕೇವಲ 146 ರನ್ ಮಾಡಿತ್ತು. ಎರಡನೇ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾ ನಾಲ್ಕು ವಿಕೆಟ್ ನಷ್ಟಕ್ಕೆ 425 ರನ್ ಮಾಡಿ ಡಿಕ್ಲೇರ್ ಮಾಡಿಕೊಂಡಿತ್ತು.

ಬಾಂಗ್ಲಾದ ನಜ್ಮುಲ್ ಹುಸೇನ್ ಶಂಟೋ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಮೊದಲ ಇನ್ನಿಂಗ್ಸ್ ನಲ್ಲಿ 146 ರನ್ ಮಾಡಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 124 ರನ್ ಬಾರಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಮೊಮಿನಲ್ ಹಕ್ 121 ರನ್ ಗಳಿಸಿದ್ದರು.

ನಜ್ಮುಲ್ ಹುಸೇನ್ ಶಂಟೋ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಬಾಂಗ್ಲಾ ಪ್ರವಾಸದಲ್ಲಿ ಅಫ್ಘಾನ್ ತಂಡವು ಮೂರು ಏಕದಿನ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಲಿದೆ

andolanait

Recent Posts

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

8 mins ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

20 mins ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

50 mins ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

1 hour ago

ಮಾಲೂರು ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ : ನಂಜೇಗೌಡ ವಿನ್ನರ್‌ ಎಂದ ಸುಪ್ರೀಂ

ಬೆಂಗಳೂರು : ಕೋಲಾರ ಜಿಲ್ಲೆ, ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ನಂಜೇಗೌಡ ಅವರು…

1 hour ago

ರತ್ನಪುರಿ | ನಾಳೆಯಿಂದ ಹಿಂದೂ ಮುಸ್ಲಿಂ ಭಾವೈಕ್ಯತೆ ಜಾತ್ರೆ

ಹುಣಸೂರು : ರಾಜ್ಯದಲ್ಲೇ ಜಾನುವಾರುಗಳ ಪ್ರಮುಖ ಜಾತ್ರೆಯಲ್ಲೊಂದಾದ ಹುಣಸೂರು ತಾಲೂಕಿನ ರತ್ನಪುರಿ(ದರ್ಗ)ಯಲ್ಲಿ ಹಿಂದೂ-ಮುಸ್ಲಿಮರ ಭಾವೈಕ್ಯತೆ ಮೆರೆವ ಶ್ರೀ ಅಂಜನೇಯ ಸ್ವಾಮಿಯ…

2 hours ago