ಕ್ರೀಡೆ

ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಾಂಗ್ಲಾ: 546 ರನ್​ಗಳ ಭರ್ಜರಿ ಗೆಲುವು

ಢಾಕಾ: ಅಫ್ಘಾನಿಸ್ತಾನ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶವು ಭರ್ಜರಿಯಾಗಿ ಗೆದ್ದುಕೊಂಡಿದೆ. ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆದ ಪಂದ್ಯವನ್ನು ಲಿಟ್ಟನ್ ದಾಸ್ ಪಡೆ 546 ರನ್ ಅಂತರದಿಂದ ಗೆದ್ದು ಬೀಗಿದೆ.

ಬಾಂಗ್ಲಾದೇಶ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಅವರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ದಾಖಲಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಬಾಂಗ್ಲಾದೇಶ ಈ ಗೌರವಕ್ಕೆ ಪಾತ್ರವಾಯಿತು.

ಟೆಸ್ಟ್ ಪಂದ್ಯ ಗೆಲ್ಲಲು 662 ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನವು ಕೇವಲ 115 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. 2019ರ ಟೆಸ್ಟ್ ಸೋಲಿನ ಸೇಡನ್ನು ಬಾಂಗ್ಲಾ ಭರ್ಜರಿಯಾಗಿ ತೀರಿಸಿಕೊಂಡಿತು.

ಬಾಂಗ್ಲಾ ದೇಶವು ಮೊದಲ ಇನ್ನಿಂಗ್ಸ್ ನಲ್ಲಿ 382 ರನ್ ಗಳಿಸಿದ್ದರೆ, ಅಫ್ಘಾನಿಸ್ತಾನವು ಕೇವಲ 146 ರನ್ ಮಾಡಿತ್ತು. ಎರಡನೇ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾ ನಾಲ್ಕು ವಿಕೆಟ್ ನಷ್ಟಕ್ಕೆ 425 ರನ್ ಮಾಡಿ ಡಿಕ್ಲೇರ್ ಮಾಡಿಕೊಂಡಿತ್ತು.

ಬಾಂಗ್ಲಾದ ನಜ್ಮುಲ್ ಹುಸೇನ್ ಶಂಟೋ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಮೊದಲ ಇನ್ನಿಂಗ್ಸ್ ನಲ್ಲಿ 146 ರನ್ ಮಾಡಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 124 ರನ್ ಬಾರಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಮೊಮಿನಲ್ ಹಕ್ 121 ರನ್ ಗಳಿಸಿದ್ದರು.

ನಜ್ಮುಲ್ ಹುಸೇನ್ ಶಂಟೋ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಬಾಂಗ್ಲಾ ಪ್ರವಾಸದಲ್ಲಿ ಅಫ್ಘಾನ್ ತಂಡವು ಮೂರು ಏಕದಿನ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಲಿದೆ

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

5 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

7 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

8 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

9 hours ago