ಕ್ರೀಡೆ

ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಬಾಂಗ್ಲಾ: 546 ರನ್​ಗಳ ಭರ್ಜರಿ ಗೆಲುವು

ಢಾಕಾ: ಅಫ್ಘಾನಿಸ್ತಾನ ವಿರುದ್ದದ ಏಕೈಕ ಟೆಸ್ಟ್ ಪಂದ್ಯವನ್ನು ಬಾಂಗ್ಲಾದೇಶವು ಭರ್ಜರಿಯಾಗಿ ಗೆದ್ದುಕೊಂಡಿದೆ. ಶೇರ್ ಎ ಬಾಂಗ್ಲಾ ಮೈದಾನದಲ್ಲಿ ನಡೆದ ಪಂದ್ಯವನ್ನು ಲಿಟ್ಟನ್ ದಾಸ್ ಪಡೆ 546 ರನ್ ಅಂತರದಿಂದ ಗೆದ್ದು ಬೀಗಿದೆ.

ಬಾಂಗ್ಲಾದೇಶ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಅವರು ತಮ್ಮ ಕ್ರಿಕೆಟ್ ಇತಿಹಾಸದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ದಾಖಲಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧ ತವರಿನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಬಾಂಗ್ಲಾದೇಶ ಈ ಗೌರವಕ್ಕೆ ಪಾತ್ರವಾಯಿತು.

ಟೆಸ್ಟ್ ಪಂದ್ಯ ಗೆಲ್ಲಲು 662 ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನವು ಕೇವಲ 115 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು. 2019ರ ಟೆಸ್ಟ್ ಸೋಲಿನ ಸೇಡನ್ನು ಬಾಂಗ್ಲಾ ಭರ್ಜರಿಯಾಗಿ ತೀರಿಸಿಕೊಂಡಿತು.

ಬಾಂಗ್ಲಾ ದೇಶವು ಮೊದಲ ಇನ್ನಿಂಗ್ಸ್ ನಲ್ಲಿ 382 ರನ್ ಗಳಿಸಿದ್ದರೆ, ಅಫ್ಘಾನಿಸ್ತಾನವು ಕೇವಲ 146 ರನ್ ಮಾಡಿತ್ತು. ಎರಡನೇ ಇನ್ನಿಂಗ್ಸ್ ಆಡಿದ್ದ ಬಾಂಗ್ಲಾ ನಾಲ್ಕು ವಿಕೆಟ್ ನಷ್ಟಕ್ಕೆ 425 ರನ್ ಮಾಡಿ ಡಿಕ್ಲೇರ್ ಮಾಡಿಕೊಂಡಿತ್ತು.

ಬಾಂಗ್ಲಾದ ನಜ್ಮುಲ್ ಹುಸೇನ್ ಶಂಟೋ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿ ಮಿಂಚಿದರು. ಮೊದಲ ಇನ್ನಿಂಗ್ಸ್ ನಲ್ಲಿ 146 ರನ್ ಮಾಡಿದರೆ, ಎರಡನೇ ಇನ್ನಿಂಗ್ಸ್ ನಲ್ಲಿ 124 ರನ್ ಬಾರಿಸಿದ್ದರು. ಎರಡನೇ ಇನ್ನಿಂಗ್ಸ್ ನಲ್ಲಿ ಮೊಮಿನಲ್ ಹಕ್ 121 ರನ್ ಗಳಿಸಿದ್ದರು.

ನಜ್ಮುಲ್ ಹುಸೇನ್ ಶಂಟೋ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಬಾಂಗ್ಲಾ ಪ್ರವಾಸದಲ್ಲಿ ಅಫ್ಘಾನ್ ತಂಡವು ಮೂರು ಏಕದಿನ ಮತ್ತು ಎರಡು ಟಿ20 ಪಂದ್ಯಗಳನ್ನು ಆಡಲಿದೆ

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

22 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago