ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಪ್ರಥಮ ಟೆಸ್ಟ್‌ ಗೆದ್ದು ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ

ಏಕದಿನ ವಿಶ್ವಕಪ್‌ ಬೆನ್ನಲ್ಲೇ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್‌ 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಮೊದಲಿಗೆ ನಡೆದ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದಿದ್ದ ನ್ಯೂಜಿಲೆಂಡ್‌ ಇದೀಗ ಮೊದಲನೇ ಟೆಸ್ಟ್‌ನಲ್ಲಿ ಸೋಲುವ ಮೂಲಕ ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಸೋತ ಮುಖಭಂಗಕ್ಕೊಳಗಾಗಿದೆ.

ಹೌದು, ಬಾಂಗ್ಲಾದೇಶದ ಸಿಲ್ಹೆಟ್‌ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 150 ರನ್‌ಗಳ ಭರ್ಜರಿ ಜಯ ಸಾಧಿಸಿರುವ ಬಾಂಗ್ಲಾದೇಶ ನೂತನ ಇತಿಹಾಸ ನಿರ್ಮಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 310 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಅತ್ತ ನ್ಯೂಜಿಲೆಂಡ್‌ 317 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕೇವಲ 7 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತ್ತು.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 338 ರನ್‌ ಗಳಿಸಿದ ಬಾಂಗ್ಲಾದೇಶ ಆಲ್‌ಔಟ್‌ ಆಗಿ ಎದುರಾಳಿ ನ್ಯೂಜಿಲೆಂಡ್‌ಗೆ 332 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ನ್ಯೂಜಿಲೆಂಡ್‌ ಕೇವಲ 181 ರನ್‌ಗಳಿಗೆ ಆಲ್‌ಔಟ್‌ ಆಗಿ ಹೀನಾಯ ಸೋಲನ್ನು ಕಂಡು ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾ ವಿರುದ್ಧ ಮಂಡಿಯೂರಿತ್ತು.

ಬಾಂಗ್ಲಾದೇಶದ ಪರ ಮೊದಲ ಇನ್ನಿಂಗ್ಸ್‌ನಲ್ಲಿ 4 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಪಡೆದು ಗೆಲುವಿಗೆ ಪ್ರಮುಖ ಕಾರಣಕರ್ತ ಎನಿಸಿಕೊಂಡ ತೈಜುಲ್‌ ಇಸ್ಲಾಂ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

andolana

Recent Posts

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

37 mins ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

1 hour ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

2 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

4 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

4 hours ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

4 hours ago