ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಪ್ರಥಮ ಟೆಸ್ಟ್‌ ಗೆದ್ದು ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ

ಏಕದಿನ ವಿಶ್ವಕಪ್‌ ಬೆನ್ನಲ್ಲೇ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್‌ 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಮೊದಲಿಗೆ ನಡೆದ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದಿದ್ದ ನ್ಯೂಜಿಲೆಂಡ್‌ ಇದೀಗ ಮೊದಲನೇ ಟೆಸ್ಟ್‌ನಲ್ಲಿ ಸೋಲುವ ಮೂಲಕ ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಸೋತ ಮುಖಭಂಗಕ್ಕೊಳಗಾಗಿದೆ.

ಹೌದು, ಬಾಂಗ್ಲಾದೇಶದ ಸಿಲ್ಹೆಟ್‌ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 150 ರನ್‌ಗಳ ಭರ್ಜರಿ ಜಯ ಸಾಧಿಸಿರುವ ಬಾಂಗ್ಲಾದೇಶ ನೂತನ ಇತಿಹಾಸ ನಿರ್ಮಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 310 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಅತ್ತ ನ್ಯೂಜಿಲೆಂಡ್‌ 317 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕೇವಲ 7 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತ್ತು.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 338 ರನ್‌ ಗಳಿಸಿದ ಬಾಂಗ್ಲಾದೇಶ ಆಲ್‌ಔಟ್‌ ಆಗಿ ಎದುರಾಳಿ ನ್ಯೂಜಿಲೆಂಡ್‌ಗೆ 332 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ನ್ಯೂಜಿಲೆಂಡ್‌ ಕೇವಲ 181 ರನ್‌ಗಳಿಗೆ ಆಲ್‌ಔಟ್‌ ಆಗಿ ಹೀನಾಯ ಸೋಲನ್ನು ಕಂಡು ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾ ವಿರುದ್ಧ ಮಂಡಿಯೂರಿತ್ತು.

ಬಾಂಗ್ಲಾದೇಶದ ಪರ ಮೊದಲ ಇನ್ನಿಂಗ್ಸ್‌ನಲ್ಲಿ 4 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಪಡೆದು ಗೆಲುವಿಗೆ ಪ್ರಮುಖ ಕಾರಣಕರ್ತ ಎನಿಸಿಕೊಂಡ ತೈಜುಲ್‌ ಇಸ್ಲಾಂ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

andolana

Recent Posts

ವಾಜಮಂಗಲ ಬಳಿ ಘರ್ಜಿಸಿದ ಜೆಸಿಬಿ : ಅನಧಿಕೃತ ಕಟ್ಟಡ ನೆಲಸಮ ಮಾಡಿದ ಎಂಡಿಎ

ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…

45 mins ago

ಮುಡಾ ಪ್ರಕರಣದಲ್ಲಿ ಸಿಎಂʼಗೆ ಬಿಗ್‌ ರಿಲೀಫ್‌ : ಬಿ ರಿಪೋರ್ಟ್‌ ಎತ್ತಿ ಹಿಡಿದ ಕೋರ್ಟ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…

1 hour ago

ಒಳಚರಂಡಿ ನೀರು ಕಾಲುವೆ ಸೇರಿದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ : ಶಾಸಕ ಜಿಟಿಡಿ ಸೂಚನೆ

ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…

1 hour ago

ನಾಳೆಯಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ಈ ಬಾರಿ ಏನೆಲ್ಲಾ ವಿಶೇಷ

ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…

2 hours ago

ರಾಜ್ಯಪಾಲರಿಗೆ ದಿಲ್ಲಿಯಿಂದ ಫೋನ್‌? : ಫೋನ್‌ ಟ್ಯಾಪಿಂಗ್‌ ಬಗ್ಗೆ ವಿಧಾನಸಭೆಯಲ್ಲಿ ಗದ್ದಲ

ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…

2 hours ago

ನಾಳೆ ಸಾರಿಗೆ ನೌಕರರಿಂದ ಬೆಂಗಳೂರು ಚಲೋ: ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ಎಚ್ಚರಿಕೆ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

3 hours ago