ಕ್ರೀಡೆ

ನ್ಯೂಜಿಲೆಂಡ್ ವಿರುದ್ಧ ಪ್ರಥಮ ಟೆಸ್ಟ್‌ ಗೆದ್ದು ಇತಿಹಾಸ ನಿರ್ಮಿಸಿದ ಬಾಂಗ್ಲಾದೇಶ

ಏಕದಿನ ವಿಶ್ವಕಪ್‌ ಬೆನ್ನಲ್ಲೇ ಬಾಂಗ್ಲಾದೇಶ ಪ್ರವಾಸವನ್ನು ಕೈಗೊಂಡಿರುವ ನ್ಯೂಜಿಲೆಂಡ್‌ 3 ಪಂದ್ಯಗಳ ಏಕದಿನ ಸರಣಿ ಹಾಗೂ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಮೊದಲಿಗೆ ನಡೆದ ಏಕದಿನ ಸರಣಿಯನ್ನು 2-0 ಅಂತರದಿಂದ ಗೆದ್ದಿದ್ದ ನ್ಯೂಜಿಲೆಂಡ್‌ ಇದೀಗ ಮೊದಲನೇ ಟೆಸ್ಟ್‌ನಲ್ಲಿ ಸೋಲುವ ಮೂಲಕ ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಸೋತ ಮುಖಭಂಗಕ್ಕೊಳಗಾಗಿದೆ.

ಹೌದು, ಬಾಂಗ್ಲಾದೇಶದ ಸಿಲ್ಹೆಟ್‌ನ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲೆಂಡ್‌ ವಿರುದ್ಧ 150 ರನ್‌ಗಳ ಭರ್ಜರಿ ಜಯ ಸಾಧಿಸಿರುವ ಬಾಂಗ್ಲಾದೇಶ ನೂತನ ಇತಿಹಾಸ ನಿರ್ಮಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್‌ನಲ್ಲಿ 310 ರನ್‌ಗಳಿಗೆ ಆಲ್‌ಔಟ್‌ ಆಗಿತ್ತು. ಅತ್ತ ನ್ಯೂಜಿಲೆಂಡ್‌ 317 ರನ್‌ ಕಲೆಹಾಕಿ ಆಲ್‌ಔಟ್‌ ಆಗಿ ಕೇವಲ 7 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತ್ತು.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ 338 ರನ್‌ ಗಳಿಸಿದ ಬಾಂಗ್ಲಾದೇಶ ಆಲ್‌ಔಟ್‌ ಆಗಿ ಎದುರಾಳಿ ನ್ಯೂಜಿಲೆಂಡ್‌ಗೆ 332 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಆದರೆ ಈ ಗುರಿಯನ್ನು ಬೆನ್ನತ್ತುವಲ್ಲಿ ವಿಫಲಗೊಂಡ ನ್ಯೂಜಿಲೆಂಡ್‌ ಕೇವಲ 181 ರನ್‌ಗಳಿಗೆ ಆಲ್‌ಔಟ್‌ ಆಗಿ ಹೀನಾಯ ಸೋಲನ್ನು ಕಂಡು ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಾಂಗ್ಲಾ ವಿರುದ್ಧ ಮಂಡಿಯೂರಿತ್ತು.

ಬಾಂಗ್ಲಾದೇಶದ ಪರ ಮೊದಲ ಇನ್ನಿಂಗ್ಸ್‌ನಲ್ಲಿ 4 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್‌ ಪಡೆದು ಗೆಲುವಿಗೆ ಪ್ರಮುಖ ಕಾರಣಕರ್ತ ಎನಿಸಿಕೊಂಡ ತೈಜುಲ್‌ ಇಸ್ಲಾಂ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

andolana

Recent Posts

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

46 mins ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

2 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

2 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

4 hours ago

ಹನೂರು ಗುಂಡಿನ ದಾಳಿ: ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ ಕುಟುಂಬಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಖೆ ಅರಣ್ಯದಲ್ಲಿ ನಡೆದ ಗುಂಡಿನ…

4 hours ago

ಕುಶಾಲನಗರ| ಬೀದಿ ನಾಯಿ ದಾಳಿ: ವ್ಯಕ್ತಿಗೆ ಗಾಯ

ಕುಶಾಲನಗರ: ತಾಲ್ಲೂಕಿನ ಕೂಡಿಗೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ವ್ಯಕ್ತಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಹೆಗ್ಗಡಹಳ್ಳಿ ಗ್ರಾಮದ…

5 hours ago