ಕ್ರೀಡೆ

ಟೆಸ್ಟ್ನಲ್ಲೂ ಬಾಂಗ್ಲಾ ವಿರುದ್ಧ ತಿಣುಕಾಟ: 6 ವಿಕೆಟ್ ನಷ್ಟಕ್ಕೆ 278 ರನ್

ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ಗಳ ಸಾಧಾರಣ ಮೊತ್ತ ಪೇರಿಸಿದೆ.

ರೋಹಿತ್ ಶರ್ಮ ಗಾಯಾಳಾದ ಕಾರಣ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. 48 ರನ್ ಗಳಿಗೆ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡಿದ್ದವು. ಆರಂಭಿಕರಾದ ಕೆಎಲ್ ರಾಹುಲ್ 22, ಶುಭ್ಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ ಕೇವಲ 1 ರನ್ ಗೆ ಔಟಾಗಿದ್ದರು.
ಈ ವೇಳೆ ಉತ್ತಮ ಜೊತೆಯಾಟ ನೀಡಿದ ಚೇತೇಶ್ವರ ಪೂಜಾರ ಹಾಗೂ ರಿಷಬ್ ಪಂತ್ 60 ರನ್ ಗಳ ಜೊತೆಯಾಟ ನೀಡಿದರು. ಪಂತ್ 46 ರನ್ ಗಳಿಸಿದ್ದಾಗ ಮೆಹದಿ ಹಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಅರ್ಧ ಶತಕ ವಂಚಿತರಾದರು. ಚೇತೇಶ್ವರ ಪೂಜಾರ 90 ರನ್ ಗಳಿಸಿದ್ದಾಗ ತೈಜುಲ್ ಇಸ್ಲಾಮ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು.
ಶ್ರೇಯಸ್ ಅಯ್ಯರ್ ಅಜೇಯ 82 ರನ್ ಪೇರಿಸಿದ್ದು ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 3, ಮೆಹದಿ ಹಸನ್ 2 ಮತ್ತು ಖಾಲೀದ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
ಟ್ರೋಲ್ಗೆ ಗುರಿಯಾದ ಕೊಹ್ಲಿ
ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜು ಲ್ ಇಸ್ಲಾಂ ಅವರ ಟರ್ನಿಂ ಗ್ ಎಸೆತಕ್ಕೆ ಕೊಹ್ಲಿ ಲೆಗ್ ಬಿಫೋರ್ ಕ್ಯಾಚ್ ನೀಡಿ ಔಟಾದರು. ಮಾಜಿ ನಾಯಕ ಡಿಆರ್ ಎಸ್ ಮೊರೆ ಹೋದರಾದರೂ ಅದು ವ್ಯರ್ಥವಾಯಿತು. ಕೊಹ್ಲಿ 2020 ರಿಂದ ಟೆಸ್ಟ್ನಲ್ಲಿ ಶತಕ ಗಳಿಸಿಲ್ಲ. ಕಡಿಮೆ ರನ್ ಗೆ ಔಟಾದ ನಂತರ ಕೊಹ್ಲಿ ಅವರನ್ನು ಮತ್ತೆ ಭಾರಿ ಟ್ರೋಲ್ ಮಾಡಲಾಗುತ್ತಿದೆ. ಎರಡು ವರ್ಷಗಳಲ್ಲಿ 19 ಪಂದ್ಯಗಳನ್ನಾಡಿರುವ ಕೊಹ್ಲಿ ಅವರು 33 ಇನ್ನಿಂಗ್ಸ್ ಗಳಲ್ಲಿ 26.45 ಸರಾಸರಿಯೊಂದಿಗೆ 873 ರನ್ ಗಳನ್ನು ಗಳಿಸಿದ್ದಾರೆ. 79 ಅವರ ಅತ್ಯಧಿಕ ಸ್ಕೋ ರ್ ಆಗಿದೆ. 6 ಅರ್ಧಶತಕಗಳನ್ನು ಗಳಿಸಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago