ಕ್ರೀಡೆ

ಟೆಸ್ಟ್ನಲ್ಲೂ ಬಾಂಗ್ಲಾ ವಿರುದ್ಧ ತಿಣುಕಾಟ: 6 ವಿಕೆಟ್ ನಷ್ಟಕ್ಕೆ 278 ರನ್

ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ಗಳ ಸಾಧಾರಣ ಮೊತ್ತ ಪೇರಿಸಿದೆ.

ರೋಹಿತ್ ಶರ್ಮ ಗಾಯಾಳಾದ ಕಾರಣ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. 48 ರನ್ ಗಳಿಗೆ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡಿದ್ದವು. ಆರಂಭಿಕರಾದ ಕೆಎಲ್ ರಾಹುಲ್ 22, ಶುಭ್ಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ ಕೇವಲ 1 ರನ್ ಗೆ ಔಟಾಗಿದ್ದರು.
ಈ ವೇಳೆ ಉತ್ತಮ ಜೊತೆಯಾಟ ನೀಡಿದ ಚೇತೇಶ್ವರ ಪೂಜಾರ ಹಾಗೂ ರಿಷಬ್ ಪಂತ್ 60 ರನ್ ಗಳ ಜೊತೆಯಾಟ ನೀಡಿದರು. ಪಂತ್ 46 ರನ್ ಗಳಿಸಿದ್ದಾಗ ಮೆಹದಿ ಹಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಅರ್ಧ ಶತಕ ವಂಚಿತರಾದರು. ಚೇತೇಶ್ವರ ಪೂಜಾರ 90 ರನ್ ಗಳಿಸಿದ್ದಾಗ ತೈಜುಲ್ ಇಸ್ಲಾಮ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು.
ಶ್ರೇಯಸ್ ಅಯ್ಯರ್ ಅಜೇಯ 82 ರನ್ ಪೇರಿಸಿದ್ದು ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 3, ಮೆಹದಿ ಹಸನ್ 2 ಮತ್ತು ಖಾಲೀದ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
ಟ್ರೋಲ್ಗೆ ಗುರಿಯಾದ ಕೊಹ್ಲಿ
ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜು ಲ್ ಇಸ್ಲಾಂ ಅವರ ಟರ್ನಿಂ ಗ್ ಎಸೆತಕ್ಕೆ ಕೊಹ್ಲಿ ಲೆಗ್ ಬಿಫೋರ್ ಕ್ಯಾಚ್ ನೀಡಿ ಔಟಾದರು. ಮಾಜಿ ನಾಯಕ ಡಿಆರ್ ಎಸ್ ಮೊರೆ ಹೋದರಾದರೂ ಅದು ವ್ಯರ್ಥವಾಯಿತು. ಕೊಹ್ಲಿ 2020 ರಿಂದ ಟೆಸ್ಟ್ನಲ್ಲಿ ಶತಕ ಗಳಿಸಿಲ್ಲ. ಕಡಿಮೆ ರನ್ ಗೆ ಔಟಾದ ನಂತರ ಕೊಹ್ಲಿ ಅವರನ್ನು ಮತ್ತೆ ಭಾರಿ ಟ್ರೋಲ್ ಮಾಡಲಾಗುತ್ತಿದೆ. ಎರಡು ವರ್ಷಗಳಲ್ಲಿ 19 ಪಂದ್ಯಗಳನ್ನಾಡಿರುವ ಕೊಹ್ಲಿ ಅವರು 33 ಇನ್ನಿಂಗ್ಸ್ ಗಳಲ್ಲಿ 26.45 ಸರಾಸರಿಯೊಂದಿಗೆ 873 ರನ್ ಗಳನ್ನು ಗಳಿಸಿದ್ದಾರೆ. 79 ಅವರ ಅತ್ಯಧಿಕ ಸ್ಕೋ ರ್ ಆಗಿದೆ. 6 ಅರ್ಧಶತಕಗಳನ್ನು ಗಳಿಸಿದ್ದಾರೆ.

andolanait

Recent Posts

ಓದುಗರ ಪತ್ರ: ನಾಗನಹಳ್ಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ನಾಗನಹಳ್ಳಿಯಿಂದ ಪ್ರತಿನಿತ್ಯ ಸಾರ್ವಜನಿಕರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮೈಸೂರು ನಗರಕ್ಕೆ ತೆರಳುತ್ತಾರೆ. ಆದರೆ ನಾಗನಹಳ್ಳಿಯಿಂದ ಮೈಸೂರಿಗೆ…

5 hours ago

ಓದುಗರ ಪತ್ರ: ತಾಲ್ಲೂಕು ಕಚೇರಿ ಆವರಣದಲ್ಲಿ ಕಸ ತೆರವುಗೊಳಿಸಿ

ಮೈಸೂರಿನಲ್ಲಿ ಪಾರಂಪರಿಕತೆ ಹಾಗೂ ಆಧುನಿಕತೆಯನ್ನು ಸಮ್ಮಿಳಿಸಿಕೊಂಡು ನಿರ್ಮಿಸಲಾಗಿರುವ ತಾಲ್ಲೂಕು ಕಚೇರಿಯ ಕಟ್ಟಡದ ಆವರಣದಲ್ಲೇ ಕಸ ಸಂಗ್ರಹವಾಗಿದ್ದು, ಕೆಲಸ ಕಾರ್ಯಗಳಿಗಾಗಿ ಪ್ರತಿ…

5 hours ago

ಓದುಗರ ಪತ್ರ: ಜನಪ್ರತಿನಿಧಿಗಳು ಪ್ರಜಾಪ್ರಭುತ್ವದ ಮೌಲ್ಯವನ್ನು ಉಳಿಸಲಿ

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಶಾಸಕ, ಹುಬ್ಬಳ್ಳಿಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಶಿವರಾಜಕುಮಾರ್-‘ಆನಂದ್’೪೦ರ ವೇಳೆ-ಆ ದಿನಗಳ ನೆನಪು

ಕಳೆದವಾರ, ಫೆಬ್ರವರಿ ೧೯, ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರ ಸೆಟ್ಟೇರಿ ೪೦ ವರ್ಷ. ಅಭಿಮಾನಿಗಳು ಈ ನೆನಪಿನ ಸಂಭ್ರಮವನ್ನು ಆಚರಿಸಿದರು.…

5 hours ago

ಸಫಾರಿ ಪುನಾರಂಭಕ್ಕೆ ಸಾರ್ವಜನಿಕರ ಮಿಶ್ರ ಪ್ರತಿಕ್ರಿಯೆ

ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ತಾತ್ಕಾಲಿಕವಾಗಿ…

5 hours ago

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ  ಮಡಿಕೇರಿ: ಕುಶಾಲನಗರದ ಬಹು…

5 hours ago