ಕ್ರೀಡೆ

ಟೆಸ್ಟ್ನಲ್ಲೂ ಬಾಂಗ್ಲಾ ವಿರುದ್ಧ ತಿಣುಕಾಟ: 6 ವಿಕೆಟ್ ನಷ್ಟಕ್ಕೆ 278 ರನ್

ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ಗಳ ಸಾಧಾರಣ ಮೊತ್ತ ಪೇರಿಸಿದೆ.

ರೋಹಿತ್ ಶರ್ಮ ಗಾಯಾಳಾದ ಕಾರಣ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. 48 ರನ್ ಗಳಿಗೆ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡಿದ್ದವು. ಆರಂಭಿಕರಾದ ಕೆಎಲ್ ರಾಹುಲ್ 22, ಶುಭ್ಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ ಕೇವಲ 1 ರನ್ ಗೆ ಔಟಾಗಿದ್ದರು.
ಈ ವೇಳೆ ಉತ್ತಮ ಜೊತೆಯಾಟ ನೀಡಿದ ಚೇತೇಶ್ವರ ಪೂಜಾರ ಹಾಗೂ ರಿಷಬ್ ಪಂತ್ 60 ರನ್ ಗಳ ಜೊತೆಯಾಟ ನೀಡಿದರು. ಪಂತ್ 46 ರನ್ ಗಳಿಸಿದ್ದಾಗ ಮೆಹದಿ ಹಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಅರ್ಧ ಶತಕ ವಂಚಿತರಾದರು. ಚೇತೇಶ್ವರ ಪೂಜಾರ 90 ರನ್ ಗಳಿಸಿದ್ದಾಗ ತೈಜುಲ್ ಇಸ್ಲಾಮ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು.
ಶ್ರೇಯಸ್ ಅಯ್ಯರ್ ಅಜೇಯ 82 ರನ್ ಪೇರಿಸಿದ್ದು ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 3, ಮೆಹದಿ ಹಸನ್ 2 ಮತ್ತು ಖಾಲೀದ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
ಟ್ರೋಲ್ಗೆ ಗುರಿಯಾದ ಕೊಹ್ಲಿ
ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜು ಲ್ ಇಸ್ಲಾಂ ಅವರ ಟರ್ನಿಂ ಗ್ ಎಸೆತಕ್ಕೆ ಕೊಹ್ಲಿ ಲೆಗ್ ಬಿಫೋರ್ ಕ್ಯಾಚ್ ನೀಡಿ ಔಟಾದರು. ಮಾಜಿ ನಾಯಕ ಡಿಆರ್ ಎಸ್ ಮೊರೆ ಹೋದರಾದರೂ ಅದು ವ್ಯರ್ಥವಾಯಿತು. ಕೊಹ್ಲಿ 2020 ರಿಂದ ಟೆಸ್ಟ್ನಲ್ಲಿ ಶತಕ ಗಳಿಸಿಲ್ಲ. ಕಡಿಮೆ ರನ್ ಗೆ ಔಟಾದ ನಂತರ ಕೊಹ್ಲಿ ಅವರನ್ನು ಮತ್ತೆ ಭಾರಿ ಟ್ರೋಲ್ ಮಾಡಲಾಗುತ್ತಿದೆ. ಎರಡು ವರ್ಷಗಳಲ್ಲಿ 19 ಪಂದ್ಯಗಳನ್ನಾಡಿರುವ ಕೊಹ್ಲಿ ಅವರು 33 ಇನ್ನಿಂಗ್ಸ್ ಗಳಲ್ಲಿ 26.45 ಸರಾಸರಿಯೊಂದಿಗೆ 873 ರನ್ ಗಳನ್ನು ಗಳಿಸಿದ್ದಾರೆ. 79 ಅವರ ಅತ್ಯಧಿಕ ಸ್ಕೋ ರ್ ಆಗಿದೆ. 6 ಅರ್ಧಶತಕಗಳನ್ನು ಗಳಿಸಿದ್ದಾರೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago