ಕ್ರೀಡೆ

ಟೆಸ್ಟ್ನಲ್ಲೂ ಬಾಂಗ್ಲಾ ವಿರುದ್ಧ ತಿಣುಕಾಟ: 6 ವಿಕೆಟ್ ನಷ್ಟಕ್ಕೆ 278 ರನ್

ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ಗಳ ಸಾಧಾರಣ ಮೊತ್ತ ಪೇರಿಸಿದೆ.

ರೋಹಿತ್ ಶರ್ಮ ಗಾಯಾಳಾದ ಕಾರಣ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. 48 ರನ್ ಗಳಿಗೆ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡಿದ್ದವು. ಆರಂಭಿಕರಾದ ಕೆಎಲ್ ರಾಹುಲ್ 22, ಶುಭ್ಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ ಕೇವಲ 1 ರನ್ ಗೆ ಔಟಾಗಿದ್ದರು.
ಈ ವೇಳೆ ಉತ್ತಮ ಜೊತೆಯಾಟ ನೀಡಿದ ಚೇತೇಶ್ವರ ಪೂಜಾರ ಹಾಗೂ ರಿಷಬ್ ಪಂತ್ 60 ರನ್ ಗಳ ಜೊತೆಯಾಟ ನೀಡಿದರು. ಪಂತ್ 46 ರನ್ ಗಳಿಸಿದ್ದಾಗ ಮೆಹದಿ ಹಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಅರ್ಧ ಶತಕ ವಂಚಿತರಾದರು. ಚೇತೇಶ್ವರ ಪೂಜಾರ 90 ರನ್ ಗಳಿಸಿದ್ದಾಗ ತೈಜುಲ್ ಇಸ್ಲಾಮ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು.
ಶ್ರೇಯಸ್ ಅಯ್ಯರ್ ಅಜೇಯ 82 ರನ್ ಪೇರಿಸಿದ್ದು ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 3, ಮೆಹದಿ ಹಸನ್ 2 ಮತ್ತು ಖಾಲೀದ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
ಟ್ರೋಲ್ಗೆ ಗುರಿಯಾದ ಕೊಹ್ಲಿ
ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜು ಲ್ ಇಸ್ಲಾಂ ಅವರ ಟರ್ನಿಂ ಗ್ ಎಸೆತಕ್ಕೆ ಕೊಹ್ಲಿ ಲೆಗ್ ಬಿಫೋರ್ ಕ್ಯಾಚ್ ನೀಡಿ ಔಟಾದರು. ಮಾಜಿ ನಾಯಕ ಡಿಆರ್ ಎಸ್ ಮೊರೆ ಹೋದರಾದರೂ ಅದು ವ್ಯರ್ಥವಾಯಿತು. ಕೊಹ್ಲಿ 2020 ರಿಂದ ಟೆಸ್ಟ್ನಲ್ಲಿ ಶತಕ ಗಳಿಸಿಲ್ಲ. ಕಡಿಮೆ ರನ್ ಗೆ ಔಟಾದ ನಂತರ ಕೊಹ್ಲಿ ಅವರನ್ನು ಮತ್ತೆ ಭಾರಿ ಟ್ರೋಲ್ ಮಾಡಲಾಗುತ್ತಿದೆ. ಎರಡು ವರ್ಷಗಳಲ್ಲಿ 19 ಪಂದ್ಯಗಳನ್ನಾಡಿರುವ ಕೊಹ್ಲಿ ಅವರು 33 ಇನ್ನಿಂಗ್ಸ್ ಗಳಲ್ಲಿ 26.45 ಸರಾಸರಿಯೊಂದಿಗೆ 873 ರನ್ ಗಳನ್ನು ಗಳಿಸಿದ್ದಾರೆ. 79 ಅವರ ಅತ್ಯಧಿಕ ಸ್ಕೋ ರ್ ಆಗಿದೆ. 6 ಅರ್ಧಶತಕಗಳನ್ನು ಗಳಿಸಿದ್ದಾರೆ.

andolanait

Recent Posts

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 mins ago

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

15 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

24 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

24 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

24 hours ago