ಚಿತ್ತಗಾಂಗ್(ಬಾಂಗ್ಲಾದೇಶ):ಭಾರತ ಮತ್ತು ಆತಿಥೇಯ ಬಾಂಗ್ಲಾದೇಶದ ನಡುವಣ ಮೊದಲ ಟೆಸ್ಟ್ ಪಂದ್ಯ ಜಹುರ್ ಅಹ್ಮದ್ ಚೌಧರಿ ಸ್ಟೇಡಿಯಂನಲ್ಲಿ ಬುಧವಾರ ಆರಂಭವಾಗಿದ್ದು ಭಾರತ ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ನಷ್ಟಕ್ಕೆ 278 ರನ್ಗಳ ಸಾಧಾರಣ ಮೊತ್ತ ಪೇರಿಸಿದೆ.
ರೋಹಿತ್ ಶರ್ಮ ಗಾಯಾಳಾದ ಕಾರಣ ಕೆ.ಎಲ್.ರಾಹುಲ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಟಾಸ್ ಗೆದ್ದ ರಾಹುಲ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿತ್ತು. 48 ರನ್ ಗಳಿಗೆ ಪ್ರಮುಖ ಮೂರು ವಿಕೆಟ್ ಗಳು ಪತನಗೊಂಡಿದ್ದವು. ಆರಂಭಿಕರಾದ ಕೆಎಲ್ ರಾಹುಲ್ 22, ಶುಭ್ಮನ್ ಗಿಲ್ 20 ಹಾಗೂ ವಿರಾಟ್ ಕೊಹ್ಲಿ ಕೇವಲ 1 ರನ್ ಗೆ ಔಟಾಗಿದ್ದರು.
ಈ ವೇಳೆ ಉತ್ತಮ ಜೊತೆಯಾಟ ನೀಡಿದ ಚೇತೇಶ್ವರ ಪೂಜಾರ ಹಾಗೂ ರಿಷಬ್ ಪಂತ್ 60 ರನ್ ಗಳ ಜೊತೆಯಾಟ ನೀಡಿದರು. ಪಂತ್ 46 ರನ್ ಗಳಿಸಿದ್ದಾಗ ಮೆಹದಿ ಹಸನ್ ಬೌಲಿಂಗ್ ನಲ್ಲಿ ಬೌಲ್ಡ್ ಆಗಿ ಅರ್ಧ ಶತಕ ವಂಚಿತರಾದರು. ಚೇತೇಶ್ವರ ಪೂಜಾರ 90 ರನ್ ಗಳಿಸಿದ್ದಾಗ ತೈಜುಲ್ ಇಸ್ಲಾಮ್ ಬೌಲಿಂಗ್ ನಲ್ಲಿ ಬೌಲ್ಡ್ ಆದರು.
ಶ್ರೇಯಸ್ ಅಯ್ಯರ್ ಅಜೇಯ 82 ರನ್ ಪೇರಿಸಿದ್ದು ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. ಬಾಂಗ್ಲಾದೇಶ ಪರ ತೈಜುಲ್ ಇಸ್ಲಾಂ 3, ಮೆಹದಿ ಹಸನ್ 2 ಮತ್ತು ಖಾಲೀದ್ ಅಹ್ಮದ್ 1 ವಿಕೆಟ್ ಪಡೆದಿದ್ದಾರೆ.
ಟ್ರೋಲ್ಗೆ ಗುರಿಯಾದ ಕೊಹ್ಲಿ
ಬಾಂಗ್ಲಾದೇಶದ ಎಡಗೈ ಸ್ಪಿನ್ನರ್ ತೈಜು ಲ್ ಇಸ್ಲಾಂ ಅವರ ಟರ್ನಿಂ ಗ್ ಎಸೆತಕ್ಕೆ ಕೊಹ್ಲಿ ಲೆಗ್ ಬಿಫೋರ್ ಕ್ಯಾಚ್ ನೀಡಿ ಔಟಾದರು. ಮಾಜಿ ನಾಯಕ ಡಿಆರ್ ಎಸ್ ಮೊರೆ ಹೋದರಾದರೂ ಅದು ವ್ಯರ್ಥವಾಯಿತು. ಕೊಹ್ಲಿ 2020 ರಿಂದ ಟೆಸ್ಟ್ನಲ್ಲಿ ಶತಕ ಗಳಿಸಿಲ್ಲ. ಕಡಿಮೆ ರನ್ ಗೆ ಔಟಾದ ನಂತರ ಕೊಹ್ಲಿ ಅವರನ್ನು ಮತ್ತೆ ಭಾರಿ ಟ್ರೋಲ್ ಮಾಡಲಾಗುತ್ತಿದೆ. ಎರಡು ವರ್ಷಗಳಲ್ಲಿ 19 ಪಂದ್ಯಗಳನ್ನಾಡಿರುವ ಕೊಹ್ಲಿ ಅವರು 33 ಇನ್ನಿಂಗ್ಸ್ ಗಳಲ್ಲಿ 26.45 ಸರಾಸರಿಯೊಂದಿಗೆ 873 ರನ್ ಗಳನ್ನು ಗಳಿಸಿದ್ದಾರೆ. 79 ಅವರ ಅತ್ಯಧಿಕ ಸ್ಕೋ ರ್ ಆಗಿದೆ. 6 ಅರ್ಧಶತಕಗಳನ್ನು ಗಳಿಸಿದ್ದಾರೆ.
ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…