ಕ್ರೀಡೆ

BBL: ಅಪಾಯಕಾರಿ ಪಿಚ್‌ನಿಂದ ಅರ್ಧದಲ್ಲೇ ನಿಂತ ಪಂದ್ಯ

ಮೆಲ್ಬೋರ್ನ್‌ : ಬಿಗ್‌ ಬ್ಯಾಷ್‌ ಲೀಗ್‌ ೨೦೨೩ ಟೂರ್ನಿಯಲ್ಲಿನ ಮೆಲ್ಬೋರ್ನ್‌ ರೇನಿಗೇಡ್ಸ್‌ ಮತ್ತು ಪರ್ತ್‌ ಸ್ಕಾಚರ್ಸ್‌ ನಡುವಿನ ಪಂದ್ಯ ಪಿಚ್‌ ಅಪಾಯಕಾರಿಯಾಗಿ ವರ್ತಿಸುತ್ತಿದೆ ಎಂಬ ಕಾರಣಕ್ಕೆ ರದ್ದಾಗಿದೆ. ಪಿಚ್‌ ಸಹಕಾರಿಯಲ್ಲದೇ ವರ್ತಿಸುತ್ತಿದ್ದನ್ನು ಅಂಪೈರ್‌ಗಳು ಗಮನಿಸಿ ಪಂದ್ಯವನನು ಅರ್ಧಕ್ಕೆ ನಿಲ್ಲಿಸಿದ ಘಟನೆ ಭಾನುವಾರ ನಡೆದಿದೆ. ಕ್ರಿಕೆಟ್‌ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಪಾಯಕಾರಿ ಪಿಚ್‌ ಎಂದು ಪಂದ್ಯವೊಂದನ್ನು ರದ್ದುಪಡಿಸಲಾಗಿದೆ.

ಮೆಲ್ಬೋರ್ನ್‌ನ ಗೀಲಾಂಗ್‌ ಮೈದಾನದಲ್ಲಿ ಪರ್ತ್‌ ಬ್ಯಾಟಿಂಗ್‌ ಮಾಡುವಾಗ ಹಲವು ಬಾರಿ ಚೆಂಡು ದಿಢೀರನೇ ಪುಟಿದೇಳುತ್ತಿತ್ತು. ಇದನ್ನು ಗಮನಿಸಿದ ಅಂಪೈರ್‌ಗಳು ೬.೫ ಓವರ್‌ಗಳಿಗೆ ಪಂದ್ಯ ನಿಲ್ಲಿಸಲು ನಿರ್ಧರಿಸಿದರು. ಬ್ಯಾಟ್ಸ್‌ಮನ್‌ಗಳ ಸುರಕ್ಷತೆ ದೃಷ್ಠಿಯಿಂದ ಈ ಪಂದ್ಯವನ್ನು ರದ್ದುಗೊಳಿಸಿದರು.

ಪಿಚ್‌ ತೇವಾಂಶದಿಂದ ಕೂಡಿದ ಸ್ಥಳವಾದ್ದರಿಂದ ಸಮಸ್ಯೆಯು ಗಂಭೀರವಾಗಿದ್ದು, ಬ್ಯಾಟರ್‌ಗಳಿಗೆ ಅಪಾಯದ ಅಂಶವಾಗಿತ್ತು. ಪಿಚ್‌ನಲ್ಲಿ ಅಲ್ಲಲ್ಲಿ ಕುಳಿಗಳು ಕಾಣಿಸುತ್ತಿತ್ತು. ಪ್ರತಿಬಾರಿಯೂ ಚೆಂಡು ಹಾಕಿದಾಗೆಲ್ಲಾ ಚೆಂಡು ತೀವ್ರ ತಿರುವುಗಳನ್ನು ಪಡೆಯುತ್ತಿತ್ತು.

ಪಂದ್ಯದ ಹಿಂದಿನ ದಿನ ಸುರಿದ ಮಳೆಗೆ ಸ್ಟೇಡಿಯಂ ಒದ್ದೆಯಾಗಿತ್ತು. ನೀರು ಪಿಚ್‌ಗೆ ಹಾಕಲಾಗಿದ್ದ ಹೊದಿಕೆಯನ್ನು ಮೀರಿ ಒಳಗೆ ಸೋರಿಕೆಯಾಗಿತ್ತು ಅದರಿಂದ ಈ ಪಿಚ್‌ ಅಪಾಯಕಾರಿಯಾಗಿ ಪರಿಣಮಿಸಿತು ಎಂದು ಹೇಳಲಾಗಿದೆ.

ಪಂದ್ಯ ನಡೆಯುತ್ತಿರುವಾಗ ಕಾಮೆಂಟಿ ಮಾಡುತ್ತಿದ್ದ ಇಂಗ್ಲೆಂಡ್‌ ಮಾಜಿ ನಾಯಕ ಮೈಕಲ್‌ ವಾನ್‌, ಆಸೀಸ್‌ ವಿಕೆಟ್‌ ಕೀಪರ್ ಗಿಲ್‌ಕ್ರಿಸ್ಟ್‌ ಬಳಿ ಈ ಪಿಚ್‌ ನಿಜವಾಗಿಯೂ ಬ್ಯಾಟರ್‌ಗಳಿಗೆ ಅಪಾಯವಾಗಲಿದೆಯೇ, ಅಥವಾ ಬ್ಯಾಟಿಂಗ್‌ ಮಾಡಲು ಮಾತ್ರ ಕಷ್ಟವಾಗಲಿದೆಯೇ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಗಿಲ್‌ಕ್ರಿಸ್ಟ್‌ ಪಿಚ್‌ ನೈಜ ಅಪಾಯ ಎಂದು ನನಗನಿಸುತ್ತದೆ ಎಂದರು.

ಇದಾದ ಬಳಿಕ ಪಂದ್ಯ ರದ್ದುಗೊಳಿಸಲಾಯಿತು.

andolanait

Recent Posts

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

9 mins ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

21 mins ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

50 mins ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

2 hours ago

ಬಿಜೆಪಿ ಕ್ರಿಮಿನಲ್‌ ಪಿತೂರಿ ಮಾಡಿ ಶೃಂಗೇರಿಯಲ್ಲಿ ವೋಟ್‌ ಚೋರಿ ಮಾಡಿದೆ: ಸಿಎಂ ಸಿದ್ದರಾಮಯ್ಯ ಬಾಂಬ್‌

ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್‌ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದ್ದಾರೆ ಎಂದು…

2 hours ago

ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ: ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…

3 hours ago