ಕ್ರೀಡೆ

ಇಂಗ್ಲೆಂಡ್‌ ವಿರುದ್ಧದ ಕೊನೆಯ 3 ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ ಪ್ರಕಟ; ತಂಡದಲ್ಲಿಲ್ಲ ಕಿಂಗ್‌ ಕೊಹ್ಲಿ!

ಭಾರತ ಪ್ರವಾಸವನ್ನು ಕೈಗೊಂಡಿರುವ ಇಂಗ್ಲೆಂಡ್‌ ವಿರುದ್ಧ ಸದ್ಯ 5 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಮ್‌ ಇಂಡಿಯಾ ನಿರತವಾಗಿದ್ದು, ಮೊದಲ ಪಂದ್ಯದಲ್ಲಿ ಸೋತು, ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಕಮ್‌ಬ್ಯಾಕ್‌ ಮಾಡಿದೆ. ಇನ್ನು ವೈಯಕ್ತಿಕ ಕಾರಣಗಳಿಂದ ಈ ಎರಡೂ ಪಂದ್ಯಗಳಿಗೂ ವಿರಾಟ್‌ ಕೊಹ್ಲಿ ಲಭ್ಯವಿರಲಿಲ್ಲ. ಈ ಕುರಿತು ಸ್ವತಃ ವಿರಾಟ್‌ ಕೊಹ್ಲಿಯೇ ಮಾಹಿತಿಯನ್ನು ಬಿಸಿಸಿಐ ಜತೆ ಹಂಚಿಕೊಂಡಿದ್ದರು.

ಹೀಗೆ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಕೊಹ್ಲಿ ಉಳಿದ ಮೂರು ಪಂದ್ಯಗಳಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇದೀಗ ಈ ಪಂದ್ಯಗಳಿಗೆ ಬಿಸಿಸಿಐ 17 ಆಟಗಾರರನ್ನೊಳಗೊಂಡ ಟೀಮ್‌ ಇಂಡಿಯಾವನ್ನು ಪ್ರಕಟಿಸಿದ್ದು, ವಿರಾಟ್‌ ಕೊಹ್ಲಿ ಹೆಸರು ಇಲ್ಲದಿರುವುದು ಅವರ ಅಭಿಮಾನಿಗಳಲ್ಲಿ ಬೇಸರಕ್ಕೆ ಕಾರಣವಾಗಿದೆ.

ಇನ್ನು ಬೆನ್ನು ನೋವಿಗೆ ಉಂಟಾಗಿರುವ ಶ್ರೇಯಸ್‌ ಅಯ್ಯರ್‌ ಸಹ ತಂಡದಿಂದ ಹೊರಬಿದ್ದಿದ್ದಾರೆ. ಎರಡನೇ ಪಂದ್ಯಕ್ಕೆ ಕೆಎಲ್‌ ರಾಹುಲ್‌ ಬದಲಿ ಆಟಗಾರನಾಗಿ ಕಣಕ್ಕಿಳಿದಿದ್ದ ಸರ್ಫರಾಜ್‌ ಖಾನ್‌ ತಂಡಲ್ಲಿದ್ದು, ಕೆಎಸ್‌ ಭರತ್‌ ಹಾಗೂ ಧ್ರುವ್‌ ಜುರೆಲ್‌ ಇಬ್ಬರು ವಿಕೆಟ್‌ ಕೀಪರ್‌ಗಳಿದ್ದಾರೆ.

ನ್ಯಾಷನಲ್‌ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆಗೆ ಒಳಗಾಗಿರುವ ಕೆಎಲ್‌ ರಾಹುಲ್‌ ಹಾಗೂ ರವೀಂದ್ರ ಜಡೇಜಾ ಹೆಸರೂ ಸಹ ಇದ್ದು, ಫಿಟ್‌ನೆಸ್‌ ಟೆಸ್ಟ್‌ ಪರೀಕ್ಷೆ ಪಾಸ್‌ ಆದರಷ್ಟೇ ಈ ಆಟಗಾರರಿಗೆ ಮೂರನೇ ಪಂದ್ಯದ ಆಡುವ ಬಳಗದಲ್ಲಿ ಅವಕಾಶ ಸಿಗಲಿದೆ.

ಪ್ರಕಟವಾಗಿರುವ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಜತ್ ಪಾಟಿದಾರ್, ರವೀಂದ್ರ ಜಡೇಜಾ, ಕೆಎಸ್ ಭರತ್ (ವಿಕೆಟ್‌ ಕೀಪರ್), ಧ್ರುವ್ ಜುರೆಲ್ (ವಿಕೆಟ್‌ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್‌ ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್.

andolana

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago