ಕ್ರೀಡೆ

ಬಿಸಿಸಿಐ ಗುತ್ತಿಗೆ ಒಪ್ಪಂದ: ಜಡೇಜಗೆ ಬಡ್ತಿ, ರಾಹುಲ್‌ಗೆ ಹಿಂಬಡ್ತಿ

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕೇಂದ್ರಿಯ ಗುತ್ತಿಗೆಯ ‘ಎ ಪ್ಲಸ್’ ಗ್ರೇಡ್ ಪಡೆದಿದ್ದಾರೆ.

ಈ ನಾಲ್ವರು ಆಟಗಾರರೂ ವಾರ್ಷಿಕ ತಲಾ ₹7 ಕೋಟಿ ಮೌಲ್ಯ ಪಡೆಯಲಿದ್ದಾರೆ. ಈ ಪೈಕಿ ರವೀಂದ್ರ ಜಡೇಜ ಬಡ್ತಿ ಪಡೆದಿದ್ದಾರೆ.

2022-23ನೇ ಸಾಲಿನ ಕೇಂದ್ರಿಯ ಗುತ್ತಿಗೆ ಒಪ್ಪಂದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ‘ಎ ಪ್ಲಸ್’ ಗ್ರೇಡ್ ಪಡೆದವರು ವಾರ್ಷಿಕ ತಲಾ ₹7 ಕೋಟಿ, ‘ಎ’ ಗ್ರೇಡ್ ಪಡೆದವರು ತಲಾ ₹5 ಕೋಟಿ, ‘ಬಿ’ ಗ್ರೇಡ್ ಪಡೆದವರು ತಲಾ ₹3 ಕೋಟಿ ಮತ್ತು ‘ಸಿ’ ಗ್ರೇಡ್ ಪಡೆದವರು ತಲಾ ₹1 ಕೋಟಿ ಪಡೆಯಲಿದ್ದಾರೆ.

ಗುತ್ತಿಗೆ ಪಟ್ಟಿಯಲ್ಲಿ ಒಟ್ಟು 26 ಆಟಗಾರರು ಸ್ಥಾನ ಪಡೆದಿದ್ದಾರೆ. ಭುವನೇಶ್ವರ್ ಕುಮಾರ್, ಅಜಿಂಕ್ಯ ರಹಾನೆ ಮತ್ತು ಇಶಾಂತ್ ಶರ್ಮಾ ಗುತ್ತಿಗೆ ಒಪ್ಪಂದ ಗಿಟ್ಟಿಸುವಲ್ಲಿ ವಿಫಲರಾಗಿದ್ದಾರೆ.

ಕನ್ನಡಿಗ ಕೆ.ಎಲ್. ರಾಹುಲ್, ‘ಬಿ’ ಗ್ರೇಡ್‌ಗೆ ಹಿಂಬಡ್ತಿ ಪಡೆದಿದ್ದಾರೆ. ಆಲ್‌ರೌಂಡರ್ ಅಕ್ಷರ್ ಪಟೇಲ್ ‘ಎ’ ಗ್ರೇಡ್‌ಗೆ ಬಡ್ತಿ ಪಡೆದಿದ್ದಾರೆ. ವಿಕೆಟ್ ಕೀಪರ್ ಕೆ.ಎಸ್. ಭರತ್ ಇದೇ ಮೊದಲ ಬಾರಿಗೆ ‘ಸಿ’ ಗ್ರೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಬಿಸಿಸಿಐ ಕೇಂದ್ರಿಯ ಗುತ್ತಿಗೆ ಒಪ್ಪಂದ; ಆಟಗಾರರ ಗ್ರೇಡ್ ವಿವರ ಇಂತಿದೆ:

ಎ ಪ್ಲಸ್ ಗ್ರೇಡ್ (₹7 ಕೋಟಿ): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ರವೀಂದ್ರ ಜಡೇಜ
ಎ ಗ್ರೇಡ್ (₹5 ಕೋಟಿ): ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್
ಬಿ ಗ್ರೇಡ್ (₹3 ಕೋಟಿ): ಚೇತೇಶ್ವರ ಪೂಜಾರ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್.
ಸಿ ಗ್ರೇಡ್ (₹1 ಕೋಟಿ): ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶಾನ್, ದೀಪಕ್ ಹೂಡಾ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ.ಎಸ್. ಭರತ್.

andolanait

Recent Posts

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

23 mins ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

34 mins ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

1 hour ago

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಕೇಂದ್ರ ಮುಚ್ಚುವ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…

1 hour ago

ಮೈಸೂರು ಅರಮನೆ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿತ

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…

2 hours ago

ದ್ವೇಷ ಭಾಷಣ ಮಾಡುವುದರಲ್ಲಿ ಬಿಜೆಪಿಯವರು ಪಿತಾಮಹರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…

2 hours ago