ಕ್ರೀಡೆ

ಬಿಸಿಸಿಐ ಗುತ್ತಿಗೆ ಒಪ್ಪಂದ: ಜಡೇಜಗೆ ಬಡ್ತಿ, ರಾಹುಲ್‌ಗೆ ಹಿಂಬಡ್ತಿ

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕೇಂದ್ರಿಯ ಗುತ್ತಿಗೆಯ ‘ಎ ಪ್ಲಸ್’ ಗ್ರೇಡ್ ಪಡೆದಿದ್ದಾರೆ.

ಈ ನಾಲ್ವರು ಆಟಗಾರರೂ ವಾರ್ಷಿಕ ತಲಾ ₹7 ಕೋಟಿ ಮೌಲ್ಯ ಪಡೆಯಲಿದ್ದಾರೆ. ಈ ಪೈಕಿ ರವೀಂದ್ರ ಜಡೇಜ ಬಡ್ತಿ ಪಡೆದಿದ್ದಾರೆ.

2022-23ನೇ ಸಾಲಿನ ಕೇಂದ್ರಿಯ ಗುತ್ತಿಗೆ ಒಪ್ಪಂದ ಆಟಗಾರರ ಪಟ್ಟಿಯನ್ನು ಬಿಸಿಸಿಐ ಪ್ರಕಟಿಸಿದೆ. ‘ಎ ಪ್ಲಸ್’ ಗ್ರೇಡ್ ಪಡೆದವರು ವಾರ್ಷಿಕ ತಲಾ ₹7 ಕೋಟಿ, ‘ಎ’ ಗ್ರೇಡ್ ಪಡೆದವರು ತಲಾ ₹5 ಕೋಟಿ, ‘ಬಿ’ ಗ್ರೇಡ್ ಪಡೆದವರು ತಲಾ ₹3 ಕೋಟಿ ಮತ್ತು ‘ಸಿ’ ಗ್ರೇಡ್ ಪಡೆದವರು ತಲಾ ₹1 ಕೋಟಿ ಪಡೆಯಲಿದ್ದಾರೆ.

ಗುತ್ತಿಗೆ ಪಟ್ಟಿಯಲ್ಲಿ ಒಟ್ಟು 26 ಆಟಗಾರರು ಸ್ಥಾನ ಪಡೆದಿದ್ದಾರೆ. ಭುವನೇಶ್ವರ್ ಕುಮಾರ್, ಅಜಿಂಕ್ಯ ರಹಾನೆ ಮತ್ತು ಇಶಾಂತ್ ಶರ್ಮಾ ಗುತ್ತಿಗೆ ಒಪ್ಪಂದ ಗಿಟ್ಟಿಸುವಲ್ಲಿ ವಿಫಲರಾಗಿದ್ದಾರೆ.

ಕನ್ನಡಿಗ ಕೆ.ಎಲ್. ರಾಹುಲ್, ‘ಬಿ’ ಗ್ರೇಡ್‌ಗೆ ಹಿಂಬಡ್ತಿ ಪಡೆದಿದ್ದಾರೆ. ಆಲ್‌ರೌಂಡರ್ ಅಕ್ಷರ್ ಪಟೇಲ್ ‘ಎ’ ಗ್ರೇಡ್‌ಗೆ ಬಡ್ತಿ ಪಡೆದಿದ್ದಾರೆ. ವಿಕೆಟ್ ಕೀಪರ್ ಕೆ.ಎಸ್. ಭರತ್ ಇದೇ ಮೊದಲ ಬಾರಿಗೆ ‘ಸಿ’ ಗ್ರೇಡ್‌ನಲ್ಲಿ ಕಾಣಿಸಿಕೊಂಡಿದ್ದಾರೆ.

ಬಿಸಿಸಿಐ ಕೇಂದ್ರಿಯ ಗುತ್ತಿಗೆ ಒಪ್ಪಂದ; ಆಟಗಾರರ ಗ್ರೇಡ್ ವಿವರ ಇಂತಿದೆ:

ಎ ಪ್ಲಸ್ ಗ್ರೇಡ್ (₹7 ಕೋಟಿ): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್‌ಪ್ರೀತ್ ಬೂಮ್ರಾ, ರವೀಂದ್ರ ಜಡೇಜ
ಎ ಗ್ರೇಡ್ (₹5 ಕೋಟಿ): ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಮೊಹಮ್ಮದ್ ಶಮಿ, ರಿಷಭ್ ಪಂತ್, ಅಕ್ಷರ್ ಪಟೇಲ್
ಬಿ ಗ್ರೇಡ್ (₹3 ಕೋಟಿ): ಚೇತೇಶ್ವರ ಪೂಜಾರ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮೊಹಮ್ಮದ್ ಸಿರಾಜ್, ಸೂರ್ಯಕುಮಾರ್ ಯಾದವ್, ಶುಭಮನ್ ಗಿಲ್.
ಸಿ ಗ್ರೇಡ್ (₹1 ಕೋಟಿ): ಉಮೇಶ್ ಯಾದವ್, ಶಿಖರ್ ಧವನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶಾನ್, ದೀಪಕ್ ಹೂಡಾ, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ.ಎಸ್. ಭರತ್.

andolanait

Recent Posts

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

4 hours ago

ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ತಂಬಾಕು ಪ್ರಚಾರ : ತೆರವಿಗೆ ಫೆ.15 ಗಡವು

ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ…

4 hours ago

ಕೇಂದ್ರ ಸೂಚನೆ ಮೇರೆಗೆ ದರ ಏರಿಕೆ ಕೈಬಿಟ್ಟ ನಮ್ಮ ಮೆಟ್ರೋ

ಬೆಂಗಳೂರು : ಮೆಟ್ರೋ ದರ ಏರಿಕೆಗೆ ಬಿಎಂಆರ್‌ಸಿಎಲ್ ಬ್ರೇಕ್ ಹಾಕಿದೆ. ಸೋಮವಾರದಿಂದ ಶೇ.5ರಷ್ಟು ದರ ಏರಿಕೆಗೆ ಬಿಎಂಆರ್‌ಸಿಎಲ್ ಮುಂದಾಗಿತ್ತು. ಆದರೆ…

4 hours ago

ಮೈಸೂರು | ಕೇಂದ್ರ ಕಾರಾಗೃಹಕ್ಕೆ ಭೇಟಿ, ಪರಿಶೀಲನೆ ನಡೆಸಿದ ಅಲೋಕ್‌ಕುಮಾರ್‌

ಮೈಸೂರು : ಸಜಾ ಬಂಧಿಗಳು ಕಾರಾಗೃಹದಿಂದ ಬಿಡುಗಡೆಯಾಗುವುದರೊಳಗೆ ಉತ್ತಮ ನಡತೆಯನ್ನು ಹೊಂದಿ ಹೊರಗೆ ಹೋದ ಬಳಿಕ ಸಮಾಜಮುಖಿ ಜೀವನ ಆರಂಭಿಸಬೇಕು…

4 hours ago

2028ಕ್ಕೆ ಮೈತ್ರಿ ಸರ್ಕಾರ | ಎಚ್‌ಡಿಕೆ ಸಿಎಂ ಎಂದ ಜಿ.ಟಿ.ಹರೀಶ್‌ಗೌಡ

ಹುಣಸೂರು : 2028ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಜಿ.ಡಿ.ಹರೀಶ್‌ಗೌಡ…

5 hours ago

ಪ್ರೀತಿ ಹೆಸರಿನಲ್ಲಿ ಬೆದರಿಕೆ : ತಾಯಿ-ಮಗಳ ಆತ್ಮಹತ್ಯೆ

ಮಳವಳ್ಳಿ : ತಾಯಿ ಮತ್ತು ಮಗಳು ಇಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಮೀಪದ ದಳವಾಯಿ ಕೋಡಿಹಳ್ಳಿ…

5 hours ago