ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಬಿಸಿಸಿಐ, ಆಯ್ಕೆ ಸಮಿತಿಯನ್ನೇ ವಜಾಗೊಳಿಸಿದೆ. ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಸೇರಿದಂತೆ ಸಂಪೂರ್ಣ ಸಮಿತಿಯನ್ನೇ ವಜಾ ಮಾಡಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ.
ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿತ್ತು. ಇದರಿಂದ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಎಲ್ಲಾ ಆಟಗಾರರನ್ನು ಕಿತ್ತೆಸೆದು ಯುವ ಕ್ರಿಕೆಟಿಗರಿಗೆ ಅವಕಾಶ ನೀಡುವಂತೆ ಒತ್ತಾಯಗಳು ಕೇಳಿಬಂದಿದ್ದವು.
ಅಸಮರ್ಪಕ ಆಯ್ಕೆ ಕೂಡ ಸೋಲಿಗೆ ಪ್ರಮುಖ ಕಾರಣ ಅನ್ನೋ ಮಾತುಗಳು ಸಹ ಕೇಳಿಬಂದಿದ್ದವು. ಇದೀಗ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಹಾಕುವವರಿಗೆ ಏನೆಲ್ಲಾ ಅರ್ಹತೆಗಳು ಇರಬೇಕೆಂದು ಸಹ ತಿಳಿಸಿದೆ.
ಬಿಸಿಸಿಐ ಹಿರಿಯರ ತಂಡದ ಆಯ್ಕೆ ಸಮಿತಿಗೆ ಸದಸ್ಯ ಹಾಗೂ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿ ಹಾಕುವ ಅಭ್ಯರ್ಥಿಗಳು ಕನಿಷ್ಠ 7 ಟೆಸ್ಟ್ ಪಂದ್ಯ ಅಥವಾ, 30 ಪ್ರಥಮ ದರ್ಜೆ ಕ್ರಿಕೆಟ್ ಅಥವಾ 10 ಏಕದಿನ ಹಾಗೂ 20 ಪ್ರಥಮ ದರ್ಜೆ ಪಂದ್ಯ ಆಡಿರಬೇಕು ಎಂದು ಬಿಸಿಸಿಐ ಹೇಳಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…