ಕ್ರೀಡೆ

ಆಯ್ಕೆ ಸಮಿತಿಯನ್ನು ನೂತನ ಸಮಿತಿ ರಚಿಸಲು ಮುಂದಾದ ಬಿಸಿಸಿಐ

ಟಿ20 ವಿಶ್ವಕಪ್ ಕ್ರಿಕೆಟ್​ ಟೂರ್ನಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಬಿಸಿಸಿಐ, ಆಯ್ಕೆ ಸಮಿತಿಯನ್ನೇ ವಜಾಗೊಳಿಸಿದೆ. ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಸೇರಿದಂತೆ ಸಂಪೂರ್ಣ ಸಮಿತಿಯನ್ನೇ ವಜಾ ಮಾಡಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ.

ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿತ್ತು. ಇದರಿಂದ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಎಲ್ಲಾ ಆಟಗಾರರನ್ನು ಕಿತ್ತೆಸೆದು ಯುವ ಕ್ರಿಕೆಟಿಗರಿಗೆ ಅವಕಾಶ ನೀಡುವಂತೆ ಒತ್ತಾಯಗಳು ಕೇಳಿಬಂದಿದ್ದವು.

ಅಸಮರ್ಪಕ ಆಯ್ಕೆ ಕೂಡ ಸೋಲಿಗೆ ಪ್ರಮುಖ ಕಾರಣ ಅನ್ನೋ ಮಾತುಗಳು ಸಹ ಕೇಳಿಬಂದಿದ್ದವು. ಇದೀಗ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಹಾಕುವವರಿಗೆ ಏನೆಲ್ಲಾ ಅರ್ಹತೆಗಳು ಇರಬೇಕೆಂದು ಸಹ ತಿಳಿಸಿದೆ.

ಬಿಸಿಸಿಐ ಹಿರಿಯರ ತಂಡದ ಆಯ್ಕೆ ಸಮಿತಿಗೆ ಸದಸ್ಯ ಹಾಗೂ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿ ಹಾಕುವ ಅಭ್ಯರ್ಥಿಗಳು ಕನಿಷ್ಠ 7 ಟೆಸ್ಟ್ ಪಂದ್ಯ ಅಥವಾ, 30 ಪ್ರಥಮ ದರ್ಜೆ ಕ್ರಿಕೆಟ್ ಅಥವಾ 10 ಏಕದಿನ ಹಾಗೂ 20 ಪ್ರಥಮ ದರ್ಜೆ ಪಂದ್ಯ ಆಡಿರಬೇಕು ಎಂದು ಬಿಸಿಸಿಐ ಹೇಳಿದೆ.

andolana

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

19 hours ago