ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ಹಿನ್ನೆಲೆಯಲ್ಲಿ ಬಿಸಿಸಿಐ, ಆಯ್ಕೆ ಸಮಿತಿಯನ್ನೇ ವಜಾಗೊಳಿಸಿದೆ. ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಸೇರಿದಂತೆ ಸಂಪೂರ್ಣ ಸಮಿತಿಯನ್ನೇ ವಜಾ ಮಾಡಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ.
ಟಿ20 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತ್ತು. ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಅತ್ಯಂತ ಕಳಪೆ ಪ್ರದರ್ಶನ ನೀಡಿತ್ತು. ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿತ್ತು. ಇದರಿಂದ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಎಲ್ಲಾ ಆಟಗಾರರನ್ನು ಕಿತ್ತೆಸೆದು ಯುವ ಕ್ರಿಕೆಟಿಗರಿಗೆ ಅವಕಾಶ ನೀಡುವಂತೆ ಒತ್ತಾಯಗಳು ಕೇಳಿಬಂದಿದ್ದವು.
ಅಸಮರ್ಪಕ ಆಯ್ಕೆ ಕೂಡ ಸೋಲಿಗೆ ಪ್ರಮುಖ ಕಾರಣ ಅನ್ನೋ ಮಾತುಗಳು ಸಹ ಕೇಳಿಬಂದಿದ್ದವು. ಇದೀಗ ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಿದ್ದು, ಹೊಸ ಆಯ್ಕೆ ಸಮಿತಿ ರಚಿಸಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಹಾಕುವವರಿಗೆ ಏನೆಲ್ಲಾ ಅರ್ಹತೆಗಳು ಇರಬೇಕೆಂದು ಸಹ ತಿಳಿಸಿದೆ.
ಬಿಸಿಸಿಐ ಹಿರಿಯರ ತಂಡದ ಆಯ್ಕೆ ಸಮಿತಿಗೆ ಸದಸ್ಯ ಹಾಗೂ ಮುಖ್ಯಸ್ಥ ಸ್ಥಾನಕ್ಕೆ ಅರ್ಜಿ ಹಾಕುವ ಅಭ್ಯರ್ಥಿಗಳು ಕನಿಷ್ಠ 7 ಟೆಸ್ಟ್ ಪಂದ್ಯ ಅಥವಾ, 30 ಪ್ರಥಮ ದರ್ಜೆ ಕ್ರಿಕೆಟ್ ಅಥವಾ 10 ಏಕದಿನ ಹಾಗೂ 20 ಪ್ರಥಮ ದರ್ಜೆ ಪಂದ್ಯ ಆಡಿರಬೇಕು ಎಂದು ಬಿಸಿಸಿಐ ಹೇಳಿದೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…