ಕ್ರೀಡೆ

2023ರ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ದಿನಾಂಕ ಫಿಕ್ಸ್‌ ಮಾಡಿದ ಬಿಸಿಸಿಐ

ನವದೆಹಲಿ : ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ ಲೀಗ್‌ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದ್ದು, 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡ ಆಡುವ 11ರ ಬಳಗದಲ್ಲಿ 5 ವಿದೇಶಿ ಆಟಗಾರ್ತಿಯರನ್ನು ಹೊಂದುವ ಅವಕಾಶವಿದೆ.

ಮಹಿಳಾ ಐಪಿಎಲ್ ಟೂರ್ನಿಯಲ್ಲಿ ತಂಡವೊಂದರ ಆಡುವ ಹನ್ನೊಂದರ ಬಳಗದಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರು(ಐಸಿಸಿ ಪೂರ್ಣ ಸದಸ್ಯತ್ವ ಹೊಂದಿದ ಆಟಗಾರ್ತಿಯರು) ಹಾಗೂ ಅಸೋಸಿಯೇಟ್‌ ರಾಷ್ಟ್ರದ ಓರ್ವ ಆಟಗಾರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನು ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ವಿಜೇತ ತಂಡವು ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ.

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 9ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದ್ದು, ಆ ಬಳಿಕ ಐಪಿಎಲ್‌ ನಡೆಯುವ ನಿರೀಕ್ಷೆಯಿದೆ. ಕ್ಯಾರವಾನ್‌ ಮಾದರಿಯಲ್ಲಿ 2 ತಾಣಗಳಲ್ಲಿ ತಲಾ 10 ಪಂದ್ಯಗಳನ್ನು ಆಡಿಸುವ ನಿರೀಕ್ಷೆಯಿದೆ. ವಲಯವಾರು ಆಧರಿಸಿ ಬೆಂಗಳೂರು, ಅಹ್ಮದಾಬಾದ್‌, ಚೆನ್ನೈ, ಡೆಲ್ಲಿ, ಕೋಲ್ಕತಾ ಮತ್ತು ಮುಂಬೈ ನಗರಗಳು ಪಂದ್ಯ ಆಯೋಜಿಸುವ ಆಯ್ಕೆ ಪಟ್ಟಿಯಲ್ಲಿವೆ. ಟೂರ್ನಿ ಬಗ್ಗೆ ಐಪಿಎಲ್‌ ಆಡಳಿತ ಮಂಡಳಿ ಮತ್ತು ಬಿಸಿಸಿಐ ಪದಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

andolana

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago