ಕ್ರೀಡೆ

2023ರ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ದಿನಾಂಕ ಫಿಕ್ಸ್‌ ಮಾಡಿದ ಬಿಸಿಸಿಐ

ನವದೆಹಲಿ : ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ ಲೀಗ್‌ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದ್ದು, 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡ ಆಡುವ 11ರ ಬಳಗದಲ್ಲಿ 5 ವಿದೇಶಿ ಆಟಗಾರ್ತಿಯರನ್ನು ಹೊಂದುವ ಅವಕಾಶವಿದೆ.

ಮಹಿಳಾ ಐಪಿಎಲ್ ಟೂರ್ನಿಯಲ್ಲಿ ತಂಡವೊಂದರ ಆಡುವ ಹನ್ನೊಂದರ ಬಳಗದಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರು(ಐಸಿಸಿ ಪೂರ್ಣ ಸದಸ್ಯತ್ವ ಹೊಂದಿದ ಆಟಗಾರ್ತಿಯರು) ಹಾಗೂ ಅಸೋಸಿಯೇಟ್‌ ರಾಷ್ಟ್ರದ ಓರ್ವ ಆಟಗಾರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನು ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ವಿಜೇತ ತಂಡವು ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ.

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 9ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದ್ದು, ಆ ಬಳಿಕ ಐಪಿಎಲ್‌ ನಡೆಯುವ ನಿರೀಕ್ಷೆಯಿದೆ. ಕ್ಯಾರವಾನ್‌ ಮಾದರಿಯಲ್ಲಿ 2 ತಾಣಗಳಲ್ಲಿ ತಲಾ 10 ಪಂದ್ಯಗಳನ್ನು ಆಡಿಸುವ ನಿರೀಕ್ಷೆಯಿದೆ. ವಲಯವಾರು ಆಧರಿಸಿ ಬೆಂಗಳೂರು, ಅಹ್ಮದಾಬಾದ್‌, ಚೆನ್ನೈ, ಡೆಲ್ಲಿ, ಕೋಲ್ಕತಾ ಮತ್ತು ಮುಂಬೈ ನಗರಗಳು ಪಂದ್ಯ ಆಯೋಜಿಸುವ ಆಯ್ಕೆ ಪಟ್ಟಿಯಲ್ಲಿವೆ. ಟೂರ್ನಿ ಬಗ್ಗೆ ಐಪಿಎಲ್‌ ಆಡಳಿತ ಮಂಡಳಿ ಮತ್ತು ಬಿಸಿಸಿಐ ಪದಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

andolana

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

4 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

5 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

5 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

5 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

5 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

5 hours ago