ಕ್ರೀಡೆ

2023ರ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ದಿನಾಂಕ ಫಿಕ್ಸ್‌ ಮಾಡಿದ ಬಿಸಿಸಿಐ

ನವದೆಹಲಿ : ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ ಲೀಗ್‌ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದ್ದು, 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡ ಆಡುವ 11ರ ಬಳಗದಲ್ಲಿ 5 ವಿದೇಶಿ ಆಟಗಾರ್ತಿಯರನ್ನು ಹೊಂದುವ ಅವಕಾಶವಿದೆ.

ಮಹಿಳಾ ಐಪಿಎಲ್ ಟೂರ್ನಿಯಲ್ಲಿ ತಂಡವೊಂದರ ಆಡುವ ಹನ್ನೊಂದರ ಬಳಗದಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರು(ಐಸಿಸಿ ಪೂರ್ಣ ಸದಸ್ಯತ್ವ ಹೊಂದಿದ ಆಟಗಾರ್ತಿಯರು) ಹಾಗೂ ಅಸೋಸಿಯೇಟ್‌ ರಾಷ್ಟ್ರದ ಓರ್ವ ಆಟಗಾರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನು ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ವಿಜೇತ ತಂಡವು ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ.

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 9ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದ್ದು, ಆ ಬಳಿಕ ಐಪಿಎಲ್‌ ನಡೆಯುವ ನಿರೀಕ್ಷೆಯಿದೆ. ಕ್ಯಾರವಾನ್‌ ಮಾದರಿಯಲ್ಲಿ 2 ತಾಣಗಳಲ್ಲಿ ತಲಾ 10 ಪಂದ್ಯಗಳನ್ನು ಆಡಿಸುವ ನಿರೀಕ್ಷೆಯಿದೆ. ವಲಯವಾರು ಆಧರಿಸಿ ಬೆಂಗಳೂರು, ಅಹ್ಮದಾಬಾದ್‌, ಚೆನ್ನೈ, ಡೆಲ್ಲಿ, ಕೋಲ್ಕತಾ ಮತ್ತು ಮುಂಬೈ ನಗರಗಳು ಪಂದ್ಯ ಆಯೋಜಿಸುವ ಆಯ್ಕೆ ಪಟ್ಟಿಯಲ್ಲಿವೆ. ಟೂರ್ನಿ ಬಗ್ಗೆ ಐಪಿಎಲ್‌ ಆಡಳಿತ ಮಂಡಳಿ ಮತ್ತು ಬಿಸಿಸಿಐ ಪದಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

andolana

Recent Posts

ಕಾರು ಚಾಲಕನ ಪುತ್ರನಿಗೆ ಟಿಕೆಟ್‌ ನೀಡಿ ಗೆಲ್ಲಿಸಿಕೊಂಡು ಬಂದ ದಳಪತಿ ವಿಜಯ್‌!

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್‌ ಅವರ ಕಾರು ಚಾಲಕನ…

10 hours ago

ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು : ಮೈಸೂರಲ್ಲಿ ಸಂಭ್ರಮಾಚರಣೆ

ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…

10 hours ago

ವಿಜಯ್‌ ಭೇಟಿಯಾಗಿ ತ್ರಿಶಾ ಅಭಿನಂದನೆ

ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…

11 hours ago

ತಮಿಳುನಾಡು| ಸಿಎಂ ಎಂ.ಕೆ.ಸ್ಟಾಲಿನ್‌ಗೆ ಸೋಲು

ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್‌ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…

13 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ: ಕೈ ಅಭ್ಯರ್ಥಿ ಸಮರ್ಥ್‌ ಶಾಮನೂರು ಜಯಭೇರಿ

ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…

14 hours ago

ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್‌ಡಿಎ…

15 hours ago