ಕ್ರೀಡೆ

2023ರ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ದಿನಾಂಕ ಫಿಕ್ಸ್‌ ಮಾಡಿದ ಬಿಸಿಸಿಐ

ನವದೆಹಲಿ : ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ ಲೀಗ್‌ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದ್ದು, 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡ ಆಡುವ 11ರ ಬಳಗದಲ್ಲಿ 5 ವಿದೇಶಿ ಆಟಗಾರ್ತಿಯರನ್ನು ಹೊಂದುವ ಅವಕಾಶವಿದೆ.

ಮಹಿಳಾ ಐಪಿಎಲ್ ಟೂರ್ನಿಯಲ್ಲಿ ತಂಡವೊಂದರ ಆಡುವ ಹನ್ನೊಂದರ ಬಳಗದಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರು(ಐಸಿಸಿ ಪೂರ್ಣ ಸದಸ್ಯತ್ವ ಹೊಂದಿದ ಆಟಗಾರ್ತಿಯರು) ಹಾಗೂ ಅಸೋಸಿಯೇಟ್‌ ರಾಷ್ಟ್ರದ ಓರ್ವ ಆಟಗಾರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನು ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ವಿಜೇತ ತಂಡವು ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ.

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 9ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದ್ದು, ಆ ಬಳಿಕ ಐಪಿಎಲ್‌ ನಡೆಯುವ ನಿರೀಕ್ಷೆಯಿದೆ. ಕ್ಯಾರವಾನ್‌ ಮಾದರಿಯಲ್ಲಿ 2 ತಾಣಗಳಲ್ಲಿ ತಲಾ 10 ಪಂದ್ಯಗಳನ್ನು ಆಡಿಸುವ ನಿರೀಕ್ಷೆಯಿದೆ. ವಲಯವಾರು ಆಧರಿಸಿ ಬೆಂಗಳೂರು, ಅಹ್ಮದಾಬಾದ್‌, ಚೆನ್ನೈ, ಡೆಲ್ಲಿ, ಕೋಲ್ಕತಾ ಮತ್ತು ಮುಂಬೈ ನಗರಗಳು ಪಂದ್ಯ ಆಯೋಜಿಸುವ ಆಯ್ಕೆ ಪಟ್ಟಿಯಲ್ಲಿವೆ. ಟೂರ್ನಿ ಬಗ್ಗೆ ಐಪಿಎಲ್‌ ಆಡಳಿತ ಮಂಡಳಿ ಮತ್ತು ಬಿಸಿಸಿಐ ಪದಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

andolana

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

36 mins ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

38 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

41 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

43 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

48 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

53 mins ago