ಕ್ರೀಡೆ

2023ರ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ದಿನಾಂಕ ಫಿಕ್ಸ್‌ ಮಾಡಿದ ಬಿಸಿಸಿಐ

ನವದೆಹಲಿ : ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಈ ಬಗ್ಗೆ ಬಿಸಿಸಿಐ ಮೂಲಗಳಿಂದ ಮಾಹಿತಿ ಲಭಿಸಿದ್ದು, ಟೂರ್ನಿಯಲ್ಲಿ 5 ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ ಎಂದು ಗೊತ್ತಾಗಿದೆ. ಮಹಿಳಾ ಐಪಿಎಲ್‌ ಕ್ರಿಕೆಟ್‌ ಟೂರ್ನಿ ಲೀಗ್‌ ಹಂತದಲ್ಲಿ 20 ಪಂದ್ಯಗಳು ಇರಲಿದ್ದು, ಪ್ರತಿ ತಂಡಗಳು ಪರಸ್ಪರ 2 ಬಾರಿ ಮುಖಾಮುಖಿಯಾಗಲಿವೆ. ಲೀಗ್‌ನಲ್ಲಿ ಅಗ್ರಸ್ಥಾನ ಪಡೆಯುವ ತಂಡ ನೇರವಾಗಿ ಫೈನಲ್‌ ಪ್ರವೇಶಿಸಲಿದ್ದು, 2 ಮತ್ತು 3ನೇ ಸ್ಥಾನ ಪಡೆದ ತಂಡಗಳು ಎಲಿಮಿನೇಟರ್‌ನಲ್ಲಿ ಸೆಣಸಲಿವೆ. ಪ್ರತಿ ತಂಡ ಆಡುವ 11ರ ಬಳಗದಲ್ಲಿ 5 ವಿದೇಶಿ ಆಟಗಾರ್ತಿಯರನ್ನು ಹೊಂದುವ ಅವಕಾಶವಿದೆ.

ಮಹಿಳಾ ಐಪಿಎಲ್ ಟೂರ್ನಿಯಲ್ಲಿ ತಂಡವೊಂದರ ಆಡುವ ಹನ್ನೊಂದರ ಬಳಗದಲ್ಲಿ ನಾಲ್ವರು ವಿದೇಶಿ ಆಟಗಾರ್ತಿಯರು(ಐಸಿಸಿ ಪೂರ್ಣ ಸದಸ್ಯತ್ವ ಹೊಂದಿದ ಆಟಗಾರ್ತಿಯರು) ಹಾಗೂ ಅಸೋಸಿಯೇಟ್‌ ರಾಷ್ಟ್ರದ ಓರ್ವ ಆಟಗಾರ್ತಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಬಹುದು. ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್‌ ಪ್ರವೇಶಿಸಲಿದೆ. ಇನ್ನು ಎರಡನೇ ಹಾಗೂ ಮೂರನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವನ್ನು ಆಡಲಿದ್ದು, ವಿಜೇತ ತಂಡವು ಫೈನಲ್‌ ಪಂದ್ಯದಲ್ಲಿ ಸೆಣಸಾಡಲಿದೆ.

ದಕ್ಷಿಣ ಆಫ್ರಿಕಾದಲ್ಲಿ ಫೆಬ್ರವರಿ 9ರಿಂದ 26ರ ವರೆಗೆ ಮಹಿಳಾ ಟಿ20 ವಿಶ್ವಕಪ್‌ ನಡೆಯಲಿದ್ದು, ಆ ಬಳಿಕ ಐಪಿಎಲ್‌ ನಡೆಯುವ ನಿರೀಕ್ಷೆಯಿದೆ. ಕ್ಯಾರವಾನ್‌ ಮಾದರಿಯಲ್ಲಿ 2 ತಾಣಗಳಲ್ಲಿ ತಲಾ 10 ಪಂದ್ಯಗಳನ್ನು ಆಡಿಸುವ ನಿರೀಕ್ಷೆಯಿದೆ. ವಲಯವಾರು ಆಧರಿಸಿ ಬೆಂಗಳೂರು, ಅಹ್ಮದಾಬಾದ್‌, ಚೆನ್ನೈ, ಡೆಲ್ಲಿ, ಕೋಲ್ಕತಾ ಮತ್ತು ಮುಂಬೈ ನಗರಗಳು ಪಂದ್ಯ ಆಯೋಜಿಸುವ ಆಯ್ಕೆ ಪಟ್ಟಿಯಲ್ಲಿವೆ. ಟೂರ್ನಿ ಬಗ್ಗೆ ಐಪಿಎಲ್‌ ಆಡಳಿತ ಮಂಡಳಿ ಮತ್ತು ಬಿಸಿಸಿಐ ಪದಾಧಿಕಾರಿಗಳು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

andolana

Recent Posts

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಟಿ.ನರಸೀಪುರ: ಡೆತ್‌ನೋಟ್‌ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…

25 mins ago

ಬಿಇಒಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಓರ್ವ ಸಾವು, ಹಲವರು ಗಂಭೀರ

ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…

1 hour ago

ಪಿರಿಯಾಪಟ್ಟಣ | ವಿಶೇಷಚೇತನರಿಗೆ ವಿತರಣೆಯಾಗದ ಸಾಧನಗಳು

ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…

3 hours ago

3 ತಿಂಗಳಿಂದ ಬಾರದ ಮಾಸಾಶನ ; ಬಡಜನರು ಕಂಗಾಲು

ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…

4 hours ago

ಗ್ರಾಪಂನಲ್ಲೇ ವಾಸಸ್ಥಳ ದೃಢೀಕರಣ ಪತ್ರ ; ಇನ್ನು ಹೋಬಳಿ ಕೇಂದ್ರಗಳಿಗೆ ಅಲೆಯುವಂತಿಲ್ಲ: ಸರ್ಕಾರದ ತೀರ್ಮಾನ

ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ : ರಾಜ್ಯ ಕಾಂಗ್ರೆಸ್‌ನಲ್ಲಿ ಒಗ್ಗಟ್ಟು : ಬಿಜೆಪಿ -ಜಾ.ದಳ ನಾಯಕರಿಗೆ ಆಘಾತ

ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…

7 hours ago