ನವದೆಹಲಿ: ಟೀಮ್ ಇಂಡಿಯಾದ ಮಾಜಿ ಆಟಗಾರ ಅಂಶುಮಾನ್ ಗಾಯಕ್ವಾಡ್ ಅವರು ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಅವರ ಚಿಕಿತ್ಸೆಗಾಗಿ ಒಂದು ಕೋಟಿ ಆರ್ಥಿಕ ನೆರವು ನೀಡುವುದಾಗಿ ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ.
ತೀವ್ರ ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ಅಂಶುಮಾನ್ ಗಾಯಕ್ವಾಡ್ ಅವರು ಲಂಡನ್ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 71 ವರ್ಷದ ಅಂಶುಮಾನ್ 1975-1987ರ ಅವಧಿಯಲ್ಲಿ ಟೀಂ ಇಂಡಿಯಾ ಪರವಾಗಿ ಆಡಿದ್ದರು. 40 ಟೆಸ್ಟ್ ಹಾಗೂ 15 ಏಕದಿನ ಪಂದ್ಯಗಳಲ್ಲಿ ಟೀಂ ಇಂಡಿಯಾ ಪರವಾಗಿ ಕಣಕ್ಕಿಳಿದಿದ್ದರು ಅಂಶುಮಾನ್.
ಈ ಅವಧಿಯಲ್ಲಿ ಟೀಂ ಇಂಡಿಯಾದ ಕ್ಯಾಪ್ಟನ್ ಆಗಿದ್ದ ಕಪಿಲ್ ದೇವ್ ಅಂಶುಮಾನ್ ಅವರ ಆರೋಗ್ಯ ಸ್ಥಿತಿಗತಿ ಬಗ್ಗೆ ಬಿಸಿಸಿಐಗೆ ವಿವರಿಸಿದ್ದರು. ನನ್ನ ಸಹಪಾಠಿ ಈ ರೀತಿಯಲ್ಲಿ ಇರುವುದನ್ನು ನೋಡಲು ಸಾಧ್ಯವಾಗುತ್ತಿಲ್ಲ. ಬಿಸಿಸಿಐ ಅವರಿಗೆ ಅಗತ್ಯ ನೆರವನ್ನು ನೀಡಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಬಿಸಿಸಿಐ ಗೆ ಮನವಿ ಮಾಡಿದ್ದರು.
ಇದಕ್ಕೆ ಸ್ಪಂದಿಸಿದ ಬಿಸಿಸಿಐ ಈ ಬಿಕ್ಕಟ್ಟಿನ ಸಮಯದಲ್ಲಿ ಅಂಶುಮಾನ್ ಕುಟುಂಬದೊಂದಿಗೆ ಬಿಸಿಸಿಐ ಇರಲಿದೆ. ಗಾಯಕ್ವಾಡ್ ಅವರ ಕುಟುಂಬದ ಪರಿಸ್ಥಿತಿ ಆಧರಿಸಿ ಬಿಸಿಸಿಐ ಆರ್ಥಿಕ ನರೆವು ನೀಡಲಿದೆ. ತಕ್ಷಣವೇ ಅವರಿಗೆ ಚಿಕಿತ್ಸೆಗಾಗಿ ಒಂದು ಕೋಟಿ ಮಂಜೂರು ಮಾಡಲಾಗುವುದು ಎಂದು ಬಿಸಿಸಿಐ ಎಪೆಕ್ಸ್ ತಿಳಿಸಿದೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…