ಕ್ರೀಡೆ

ಜೆರ್ಸಿ ನಂ.7 ನಿವೃತ್ತಿಗೊಳಿಸಿದ ಬಿಸಿಸಿಐ: ವರದಿ

ನವದೆಹಲಿ : ಭಾರತ ತಂಡದ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ವಿಶೇಷ ಗೌರವ ಸಲ್ಲಿಸಿದೆ. ಭಾರತ ತಂಡ ವಿಶ್ವಕಪ್‌ ವಿಜೇತ ನಾಯಕ ಧೋನಿ ಅವರು ಧರಿಸುತ್ತಿದ್ದ 7ನೇ ಕ್ರಮಾಂಕದ ಜೆರ್ಸಿಯನ್ನು ಬಿಸಿಸಿಐ ನಿವೃತ್ತಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಭಾರತ ತಂಡದ ಆಟಗಾರರಿಗೆ ಇನ್ನುಮುಂದೆ 7ನೇ ಕ್ರಮಾಕದ ಜೆರ್ಸಿ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.

ಐಸಿಸಿ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್‌) ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪರ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಧೋನಿ ಅವರ ಜೆರ್ಸಿ ನಂ.7ನ್ನು ಮೀಸಲಿಡಲಾಗಿದೆ. ಭಾರತ ಕ್ರಿಕೆಟ್‌ ತಂಡಕ್ಕೆ ವಿಕೇಟ್‌ ಕೀಪರ್‌ ನಾಯಕನಾಗಿ ಮಹೇಂದ್ರ ಸಿಂಗ್‌ ಧೋನಿ ನೀಡಿರುವ ಅಪಾರ ಕೊಡುಗೆಯನ್ನು ಗೌರವಿಸಲು ನಂ.7ನ್ನು ನಿವೃತ್ತ ಪಟ್ಟಿಗೆ ಸೇರಿಸಲು ಬಿಸಿಸಿಐ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದೆ.

2019ರ ವಿಶ್ವಕಪ್‌ ಬಳಿಕ ಯಾವುದೇ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸಕ್ರಿಯಗೊಳ್ಳದ ಮಹಿ, 2020ರ ಆಗಸ್ಟ್‌ 15 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ್ದರು. ನಿವೃತ್ತಿಯ ನಂತರವು ಐಪಿಎಲ್‌ನಲ್ಲಿ ಸಕ್ರಿಯರಾಗಿರುವ ಮಹೇಂದ್ರ ಸಿಂಗ್‌ ಧೋನಿ ಅವರು, ಮುಂಬರುವ 2024ರ ಐಪಿಎಲ್‌ ನಲ್ಲಿ ಆಡಲು ಸಜ್ಜಾಗುತ್ತಿದ್ದಾರೆ.

ಕ್ರಿಕೆಟ್‌ ಲೆಜೆಂಡ್‌ ಸಚಿನ್‌ ತೆಂಡುಲ್ಕರ್‌ ಅವರ ಜೆರ್ಸಿ ನಂ.10ನ್ನು ಬಿಸಿಸಿಐ 2017 ರಲ್ಲಿ ಅಧಿಕೃತವಾಗಿ ನಿವೃತ್ತಿಗೊಳಿಸಿತ್ತು.

ಇನ್ನುಮುಂದೆ ನಂ.7 ಮತ್ತು ಜೆರ್ಸಿ ನಂ.10 ನ್ನು ಚೊಚ್ಚಲ ಪಂದ್ಯ ಆಡುವ ಆಟಗಾರರು ಸೇರಿದಂತೆ ಬೇರಾವ ಆಟಗಾರರಿಗೂ ಇದು ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ತನ್ನ ನಿರ್ಧಾರವನ್ನು ರಾಷ್ಟ್ರೀಯ ತಂಡಕ್ಕೆ ತಿಳಿಸಿದೆ ಎಂದು ವರದಿಯಾಗಿದೆ.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

45 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

56 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago