ಕ್ರೀಡೆ

ಜೆರ್ಸಿ ನಂ.7 ನಿವೃತ್ತಿಗೊಳಿಸಿದ ಬಿಸಿಸಿಐ: ವರದಿ

ನವದೆಹಲಿ : ಭಾರತ ತಂಡದ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ವಿಶೇಷ ಗೌರವ ಸಲ್ಲಿಸಿದೆ. ಭಾರತ ತಂಡ ವಿಶ್ವಕಪ್‌ ವಿಜೇತ ನಾಯಕ ಧೋನಿ ಅವರು ಧರಿಸುತ್ತಿದ್ದ 7ನೇ ಕ್ರಮಾಂಕದ ಜೆರ್ಸಿಯನ್ನು ಬಿಸಿಸಿಐ ನಿವೃತ್ತಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಭಾರತ ತಂಡದ ಆಟಗಾರರಿಗೆ ಇನ್ನುಮುಂದೆ 7ನೇ ಕ್ರಮಾಕದ ಜೆರ್ಸಿ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.

ಐಸಿಸಿ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್‌) ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪರ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಧೋನಿ ಅವರ ಜೆರ್ಸಿ ನಂ.7ನ್ನು ಮೀಸಲಿಡಲಾಗಿದೆ. ಭಾರತ ಕ್ರಿಕೆಟ್‌ ತಂಡಕ್ಕೆ ವಿಕೇಟ್‌ ಕೀಪರ್‌ ನಾಯಕನಾಗಿ ಮಹೇಂದ್ರ ಸಿಂಗ್‌ ಧೋನಿ ನೀಡಿರುವ ಅಪಾರ ಕೊಡುಗೆಯನ್ನು ಗೌರವಿಸಲು ನಂ.7ನ್ನು ನಿವೃತ್ತ ಪಟ್ಟಿಗೆ ಸೇರಿಸಲು ಬಿಸಿಸಿಐ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದೆ.

2019ರ ವಿಶ್ವಕಪ್‌ ಬಳಿಕ ಯಾವುದೇ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸಕ್ರಿಯಗೊಳ್ಳದ ಮಹಿ, 2020ರ ಆಗಸ್ಟ್‌ 15 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ್ದರು. ನಿವೃತ್ತಿಯ ನಂತರವು ಐಪಿಎಲ್‌ನಲ್ಲಿ ಸಕ್ರಿಯರಾಗಿರುವ ಮಹೇಂದ್ರ ಸಿಂಗ್‌ ಧೋನಿ ಅವರು, ಮುಂಬರುವ 2024ರ ಐಪಿಎಲ್‌ ನಲ್ಲಿ ಆಡಲು ಸಜ್ಜಾಗುತ್ತಿದ್ದಾರೆ.

ಕ್ರಿಕೆಟ್‌ ಲೆಜೆಂಡ್‌ ಸಚಿನ್‌ ತೆಂಡುಲ್ಕರ್‌ ಅವರ ಜೆರ್ಸಿ ನಂ.10ನ್ನು ಬಿಸಿಸಿಐ 2017 ರಲ್ಲಿ ಅಧಿಕೃತವಾಗಿ ನಿವೃತ್ತಿಗೊಳಿಸಿತ್ತು.

ಇನ್ನುಮುಂದೆ ನಂ.7 ಮತ್ತು ಜೆರ್ಸಿ ನಂ.10 ನ್ನು ಚೊಚ್ಚಲ ಪಂದ್ಯ ಆಡುವ ಆಟಗಾರರು ಸೇರಿದಂತೆ ಬೇರಾವ ಆಟಗಾರರಿಗೂ ಇದು ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ತನ್ನ ನಿರ್ಧಾರವನ್ನು ರಾಷ್ಟ್ರೀಯ ತಂಡಕ್ಕೆ ತಿಳಿಸಿದೆ ಎಂದು ವರದಿಯಾಗಿದೆ.

andolanait

Recent Posts

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

8 mins ago

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…

30 mins ago

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

2 hours ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

2 hours ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

2 hours ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

2 hours ago