ಕ್ರೀಡೆ

ಜೆರ್ಸಿ ನಂ.7 ನಿವೃತ್ತಿಗೊಳಿಸಿದ ಬಿಸಿಸಿಐ: ವರದಿ

ನವದೆಹಲಿ : ಭಾರತ ತಂಡದ ಶ್ರೇಷ್ಠ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರಿಗೆ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ವಿಶೇಷ ಗೌರವ ಸಲ್ಲಿಸಿದೆ. ಭಾರತ ತಂಡ ವಿಶ್ವಕಪ್‌ ವಿಜೇತ ನಾಯಕ ಧೋನಿ ಅವರು ಧರಿಸುತ್ತಿದ್ದ 7ನೇ ಕ್ರಮಾಂಕದ ಜೆರ್ಸಿಯನ್ನು ಬಿಸಿಸಿಐ ನಿವೃತ್ತಿಗೊಳಿಸಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಭಾರತ ತಂಡದ ಆಟಗಾರರಿಗೆ ಇನ್ನುಮುಂದೆ 7ನೇ ಕ್ರಮಾಕದ ಜೆರ್ಸಿ ಲಭ್ಯವಿರುವುದಿಲ್ಲ ಎಂದು ವರದಿಯಾಗಿದೆ.

ಐಸಿಸಿ (ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕೌನ್ಸಿಲ್‌) ಆಯೋಜಿಸುವ ಟೂರ್ನಿಗಳಲ್ಲಿ ಭಾರತ ಪರ ಅತ್ಯಂತ ಯಶಸ್ವಿ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಧೋನಿ ಅವರ ಜೆರ್ಸಿ ನಂ.7ನ್ನು ಮೀಸಲಿಡಲಾಗಿದೆ. ಭಾರತ ಕ್ರಿಕೆಟ್‌ ತಂಡಕ್ಕೆ ವಿಕೇಟ್‌ ಕೀಪರ್‌ ನಾಯಕನಾಗಿ ಮಹೇಂದ್ರ ಸಿಂಗ್‌ ಧೋನಿ ನೀಡಿರುವ ಅಪಾರ ಕೊಡುಗೆಯನ್ನು ಗೌರವಿಸಲು ನಂ.7ನ್ನು ನಿವೃತ್ತ ಪಟ್ಟಿಗೆ ಸೇರಿಸಲು ಬಿಸಿಸಿಐ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿದೆ.

2019ರ ವಿಶ್ವಕಪ್‌ ಬಳಿಕ ಯಾವುದೇ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಸಕ್ರಿಯಗೊಳ್ಳದ ಮಹಿ, 2020ರ ಆಗಸ್ಟ್‌ 15 ರಂದು ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸಿದ್ದರು. ನಿವೃತ್ತಿಯ ನಂತರವು ಐಪಿಎಲ್‌ನಲ್ಲಿ ಸಕ್ರಿಯರಾಗಿರುವ ಮಹೇಂದ್ರ ಸಿಂಗ್‌ ಧೋನಿ ಅವರು, ಮುಂಬರುವ 2024ರ ಐಪಿಎಲ್‌ ನಲ್ಲಿ ಆಡಲು ಸಜ್ಜಾಗುತ್ತಿದ್ದಾರೆ.

ಕ್ರಿಕೆಟ್‌ ಲೆಜೆಂಡ್‌ ಸಚಿನ್‌ ತೆಂಡುಲ್ಕರ್‌ ಅವರ ಜೆರ್ಸಿ ನಂ.10ನ್ನು ಬಿಸಿಸಿಐ 2017 ರಲ್ಲಿ ಅಧಿಕೃತವಾಗಿ ನಿವೃತ್ತಿಗೊಳಿಸಿತ್ತು.

ಇನ್ನುಮುಂದೆ ನಂ.7 ಮತ್ತು ಜೆರ್ಸಿ ನಂ.10 ನ್ನು ಚೊಚ್ಚಲ ಪಂದ್ಯ ಆಡುವ ಆಟಗಾರರು ಸೇರಿದಂತೆ ಬೇರಾವ ಆಟಗಾರರಿಗೂ ಇದು ಲಭ್ಯವಿರುವುದಿಲ್ಲ ಎಂದು ಬಿಸಿಸಿಐ ತನ್ನ ನಿರ್ಧಾರವನ್ನು ರಾಷ್ಟ್ರೀಯ ತಂಡಕ್ಕೆ ತಿಳಿಸಿದೆ ಎಂದು ವರದಿಯಾಗಿದೆ.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

4 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago