ಕ್ರೀಡೆ

Maharaja trophy 2024: ಗುಲ್ಬರ್ಗಾ ವಿರುದ್ಧ ಗೆದ್ದು ಶುಭಾರಂಭ ಮಾಡಿದ ಬೆಂಗಳೂರು

ಬೆಂಗಳೂರು: ಬೆಂಗಳೂರು ಬ್ಲಾಸ್ಟರ್ಸ್‌ ಅವರ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಗುಲ್ಬರ್ಗಾ ಮಿಸ್ಟಿಕ್ಸ್‌ ಅವರು ಮಹಾರಾಜ ಟ್ರೋಫಿ 2024ರ ಉದ್ಘಾಟನಾ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ.

ಗುಲ್ಬರ್ಗಾ ವಿರುದ್ಧ ಗೆದ್ದ ಬೆಂಗಳೂರು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಲ್ಬರ್ಗಾ 16.4 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ 116 ರನ್‌ ಕಲೆಹಾಕಿತು. ಆ ಮೂಲಕ ಎದುರಾಳಿಗೆ 117 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಬೆಂಗಳೂರು 11.2 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು 117 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಗುಲ್ಬರ್ಗಾ ಇನ್ನಿಂಗ್ಸ್‌: ಟಾಸ್ ಸೋತು ಮೊದಲು ಬ್ಯಾಟಿಂಗ್‌ ಇಳಿದ ಗುಲ್ಬರ್ಗಾ ಪರ ನಾಯಕ ದೇವ್‌ದತ್‌ ಪಡಿಕ್ಕಲ್‌ ಹಾಗೂ ಲುನ್ವಿತ್‌ ಸಿಸೋಡಿಯಾ ಇನ್ನಿಂಗ್ಸ್‌ ಆರಂಭಿಸಿದರು. ಸಿಸೋಡಿಯಾ 14(7), ನಾಯಕ ಪಡಿಕ್ಕಲ್‌ 20(9), ಅನೀಶ್‌ 4(8), ಸಮರನ್‌ 8(8), ಶರತ್‌ 13(13), ಪ್ರವೀಣ್‌ ದುಬೆ 19(23), ಯಶೋವರ್ಧನ್‌ ಔಟಾಗದೇ 11(14), ವೈಶಾಖ್‌ ವಿಜಯ್‌ ಕುಮಾರ್‌ ಡಕ್‌ಔಟ್‌, ಶೆಖಾವತ್‌ 10(9), ರಿತೇಶ್‌ ಭಟ್ಕಲ್‌ ಡಕ್‌ಔಟ್‌, ಶರಣ್‌ 4(6) ರನ್‌ ಗಳಿಸಿದರು.

ಬೆಂಗಳೂರು ಪರ ಆದಿತ್ಯಾ ಗೋಯಲ್‌ 3, ಲವೀಶ್‌ ಕುಶಾಲ್‌, ನವೀನ್‌, ಮೋಸಿನ್‌ ಖಾನ್‌ ತಲಾ ಎರಡೆರೆಡು ವಿಕೆಟ್‌, ಶುಭಾಂಗ್‌ ಹೆಗ್ಡೆ ಒಂದು ವಿಕೆಟ್‌ ಪಡೆದರು.

ಬೆಂಗಳೂರು ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಬೆಂಗಳೂರು ಕೇವಲ ಒಂದು ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಎಲ್‌ ಆರ್‌ ಚೇತನ್‌ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಬೌಂಡರಿ ಸಹಿತ 53 ರನ್‌ ಚಚ್ಚಿದರು.

ಬಳಿಕ ಒಂದಾದ ನಾಯಕ ಮಯಾಂಕ್‌ ಅಗರ್ವಾಲ್‌ ಹಾಗೂ ಭುವನ್‌ ರಾಜು ಔಟಾಗದೇ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಮಯಾಂಕ್‌ 29 ಎಸೆತಗಳಲ್ಲಿ 47 ರನ್‌ ಗಳಿಸಿದರೇ, ಭುವನ್‌ 7(5) ರನ್‌ ಬಾರಿಸಿ ಗೆಲುವು ತಂದುಕೊಟ್ಟರು.

ಗುಲ್ಬರ್ಗಾ ಪರ ವೈಶಾಖ್‌ ವಿಜಯ್‌ ಕುಮಾರ್‌ ಒಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ನವೀನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೇಂದ್ರದ ವಿರುದ್ಧ ರಾಹುಲ್‌ ಗಾಂಧಿ ಮತ್ತೆ ವಾಗ್ದಾಳಿ

ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ನಾಯಕ…

1 min ago

ಬಾಂಗ್ಲಾ ನೂತನ ಪ್ರಧಾನಿ ಪ್ರಮಾಣ ವಚನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪೀಕರ್‌ ಓಂ ಬಿರ್ಲಾ

ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್‌ ರೆಹಮಾನ್‌ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್‌…

8 mins ago

ಕೆನಡಾದಲ್ಲಿ ಹತ್ಯೆಯಾಗಿದ್ದ ಐಟಿ ಉದ್ಯೋಗಿ ಚಂದನ್‌ ಮೃತದೇಹ ಸ್ವಗ್ರಾಮಕ್ಕೆ

ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್‌ ಕುಮಾರ್‌ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್‌…

16 mins ago

ಕೋಲಾರದಲ್ಲಿ ನಾಳೆ ಟಾಟಾ ಹೆಲಿಕಾಪ್ಟರ್‌ ಘಟಕ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಟಾಟಾ ಏರ್‌ಬಸ್‌ ಲಘು ಹೆಲಿಕಾಪ್ಟರ್‌ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…

21 mins ago

ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್‌ಆರ್‌ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿರುವ…

9 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ: ಮಹದೇಶ್ವರನಿಗೆ ಎಣ್ಣೆಮಜ್ಜನ ಸೇವೆ, ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…

12 hours ago