ಕ್ರೀಡೆ

Maharaja trophy 2024: ಗುಲ್ಬರ್ಗಾ ವಿರುದ್ಧ ಗೆದ್ದು ಶುಭಾರಂಭ ಮಾಡಿದ ಬೆಂಗಳೂರು

ಬೆಂಗಳೂರು: ಬೆಂಗಳೂರು ಬ್ಲಾಸ್ಟರ್ಸ್‌ ಅವರ ಸಂಘಟಿತ ಬೌಲಿಂಗ್‌ ದಾಳಿಗೆ ನಲುಗಿದ ಗುಲ್ಬರ್ಗಾ ಮಿಸ್ಟಿಕ್ಸ್‌ ಅವರು ಮಹಾರಾಜ ಟ್ರೋಫಿ 2024ರ ಉದ್ಘಾಟನಾ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ.

ಗುಲ್ಬರ್ಗಾ ವಿರುದ್ಧ ಗೆದ್ದ ಬೆಂಗಳೂರು ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಗುಲ್ಬರ್ಗಾ 16.4 ಓವರ್‌ಗಳಲ್ಲಿ ಆಲ್‌ಔಟ್‌ ಆಗಿ 116 ರನ್‌ ಕಲೆಹಾಕಿತು. ಆ ಮೂಲಕ ಎದುರಾಳಿಗೆ 117 ರನ್‌ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಬೆಂಗಳೂರು 11.2 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು 117 ರನ್‌ ಗಳಿಸಿ ಗೆಲುವಿನ ನಗೆ ಬೀರಿತು.

ಗುಲ್ಬರ್ಗಾ ಇನ್ನಿಂಗ್ಸ್‌: ಟಾಸ್ ಸೋತು ಮೊದಲು ಬ್ಯಾಟಿಂಗ್‌ ಇಳಿದ ಗುಲ್ಬರ್ಗಾ ಪರ ನಾಯಕ ದೇವ್‌ದತ್‌ ಪಡಿಕ್ಕಲ್‌ ಹಾಗೂ ಲುನ್ವಿತ್‌ ಸಿಸೋಡಿಯಾ ಇನ್ನಿಂಗ್ಸ್‌ ಆರಂಭಿಸಿದರು. ಸಿಸೋಡಿಯಾ 14(7), ನಾಯಕ ಪಡಿಕ್ಕಲ್‌ 20(9), ಅನೀಶ್‌ 4(8), ಸಮರನ್‌ 8(8), ಶರತ್‌ 13(13), ಪ್ರವೀಣ್‌ ದುಬೆ 19(23), ಯಶೋವರ್ಧನ್‌ ಔಟಾಗದೇ 11(14), ವೈಶಾಖ್‌ ವಿಜಯ್‌ ಕುಮಾರ್‌ ಡಕ್‌ಔಟ್‌, ಶೆಖಾವತ್‌ 10(9), ರಿತೇಶ್‌ ಭಟ್ಕಲ್‌ ಡಕ್‌ಔಟ್‌, ಶರಣ್‌ 4(6) ರನ್‌ ಗಳಿಸಿದರು.

ಬೆಂಗಳೂರು ಪರ ಆದಿತ್ಯಾ ಗೋಯಲ್‌ 3, ಲವೀಶ್‌ ಕುಶಾಲ್‌, ನವೀನ್‌, ಮೋಸಿನ್‌ ಖಾನ್‌ ತಲಾ ಎರಡೆರೆಡು ವಿಕೆಟ್‌, ಶುಭಾಂಗ್‌ ಹೆಗ್ಡೆ ಒಂದು ವಿಕೆಟ್‌ ಪಡೆದರು.

ಬೆಂಗಳೂರು ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಬೆಂಗಳೂರು ಕೇವಲ ಒಂದು ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು. ಎಲ್‌ ಆರ್‌ ಚೇತನ್‌ 34 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಬೌಂಡರಿ ಸಹಿತ 53 ರನ್‌ ಚಚ್ಚಿದರು.

ಬಳಿಕ ಒಂದಾದ ನಾಯಕ ಮಯಾಂಕ್‌ ಅಗರ್ವಾಲ್‌ ಹಾಗೂ ಭುವನ್‌ ರಾಜು ಔಟಾಗದೇ ಪಂದ್ಯವನ್ನು ಗೆಲ್ಲಿಸಿಕೊಟ್ಟರು. ಮಯಾಂಕ್‌ 29 ಎಸೆತಗಳಲ್ಲಿ 47 ರನ್‌ ಗಳಿಸಿದರೇ, ಭುವನ್‌ 7(5) ರನ್‌ ಬಾರಿಸಿ ಗೆಲುವು ತಂದುಕೊಟ್ಟರು.

ಗುಲ್ಬರ್ಗಾ ಪರ ವೈಶಾಖ್‌ ವಿಜಯ್‌ ಕುಮಾರ್‌ ಒಂದು ವಿಕೆಟ್‌ ಪಡೆದರು.

ಪಂದ್ಯಶ್ರೇಷ್ಠ: ನವೀನ್‌

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago