ಕ್ರೀಡೆ

ದುರಂದ್‌ ಕಪ್‌ನಲ್ಲಿ ಮಿಂಚಿದ ಬೆಂಗಳೂರು ಸೌತ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ನ ಪ್ರತಿಭೆ ಡಾನಿಯಲ್‌

ಬೆಂಗಳೂರು: ದುರಂದ್‌ ಕಪ್‌ ಭಾರತೀಯ ಫುಟ್‌ಬಾಲ್‌ನ ಮಹತ್ತರ ವೇದಿಕೆಯಾಗಿದ್ದು, ಅನೇಕ ಭವಿಷ್ಯದ ತಾರೆಗಳು ತಮ್ಮ ಪ್ರತಿಭೆಯನ್ನು ಮಿಂಚಿಸಿ ಬಳಿಕ ಯಶಸ್ವಿ ವೃತ್ತಿಪೈ ಕಟ್ಟಿಕೊಂಡಿದ್ದಾರೆ. ಈ ಐಕಾನಿಕ್‌ ಟೂರ್ನಿಯಲ್ಲೇ ಸುನಿಲ್‌ ಕ್ಷೇತ್ರಿ ಮೊದಲ ಬಾರಿಗೆ ಗಮನ ಸೆಳೆದಿದ್ದರು.

ಇಂಡಿಯನ್‌ ಆಯಿಲ್‌ ದುರಂದ್‌ ಕಪ್‌ನ 134ನೇ ಆವೃತ್ತಿಯಲ್ಲಿ ಮಕಕ್ಮಾಯುಮ್‌ ಡಾನಿಯಲ್‌ ತಮ್ಮ ಚೊಚ್ಚಲ ಪ್ರದರ್ಶನದಲ್ಲಿ ಸೌತ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಪರ ಆಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇಂಡಿಯನ್‌ ಏರ್‌ಫೋರ್ಸ್‌ ಎಫ್‌ಟಿ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್‌ ಗಳಿಸಿ ತಂಡವನ್ನು 3-3 ಕಡೆಗೆ ತಲುಪಿಸಿದರು. ಡಾನಿಯಲ್‌ ತಮ್ಮ ಫುಟ್‌ಬಾಲ್‌ ತರಬೇತಿಯನ್ನು ಐಎಸ್‌ಎಲ್‌ ಕ್ಲಬ್ ಚೆನ್ನೈಯನ್‌ ಯು-17 ಮತ್ತು ರಿಸರ್ವ್‌ ತಂಡಗಳಲ್ಲಿ ಶುರುಮಾಡಿ, ಬಳಿಕ ಬೆಂಗಳೂರಿನ ಸೌತ್‌ ಯುನೈಟೆಡ್‌ ಎಫ್‌ಸಿಗೆ ಸೇರ್ಪಡೆಯಾದರು.

ಈ ಬಗ್ಗೆ ಮಾತನಾಡಿದ ಡಾನಿಯಲ್‌ ದುರಂದ್‌ ಕಪ್‌ನಲ್ಲಿ ಆಡವಾಡುವುದು ನನ್ನ ಕನಸಾಗಿತ್ತು ಎಂದರು. ನಾನು ನನ್ನ ಸಹೋದರರೊಂದಿಗೆ ಮೋಜಿಗಾಗಿ ಫುಟ್‌ಬಾಲ್‌ ಆಡಲು ಪ್ರಾರಂಭಿಸಿದೆ. ಬಳಿಕ ನನಗೆ ಆಸಕ್ತಿ ಬಂತು ಆದರೆ ಆರಂಭದಲ್ಲಿ ನನಗೆ ಯಾವುದೇ ಬೆಂಬಲವಿರಲಿಲ್ಲ. ಜೊತೆಗೆ ನನ್ನ ತಂದೆ ಕೂಡ ನಾನು ಫುಟ್‌ಬಾಲ್‌ ಆಡುವುದು ಇಷ್ಟವಿರಲಿಲ್ಲ.

ಫ್ಯೂಚರ್‌ ಫುಟ್‌ಬಾಲ್‌ ಕೋಚಿಂಗ್‌ ಸೆಂಟರ್‌ ಅಂಗ್ತಾಗೆ ಆಯ್ಕೆಯಾದಾಗ ಎಲ್ಲರೂ ಸಂತಸ ವ್ಯಕ್ತಪಡಿಸಿದರು. ಈಗ ನನ್ನ ಪೋಷಕರು ನನ್ನ ಆಟವನ್ನು ನೋಡಿ ಹೆಮ್ಮೆಪಡುತ್ತಿದ್ದಾರೆ ಎಂದರು.

ಡಾನಿಯಲ್‌ ಮಣಿಪುರ ಸ್ಟೇಲ್‌ ಲೀಗ್‌ನ ಈಸ್ಟರ್ನ್‌ ಸ್ಪೋರ್ಟಿಂಗ್‌ ಯೂನಿಯನ್‌ ತಂಡಕ್ಕೂ ಆಡಿದ್ದು, ಹಾಗೆಯೇ ಭಾರತದ ಅಂಡರ್‌ 19 ಸ್ಯಾಫ್‌ ಚಾಂಪಿಯನ್‌ಶಿಪ್‌ಗಾಗಿ ಕೂಡ ಆಯ್ಕೆಯಾಗಿದ್ದರು. ಫುಟ್‌ಬಾಲ್‌ ಕ್ಷೇತ್ರದಲ್ಲಿ ಭಾರತವನ್ನು ಪ್ರತಿನಿಧಿಸಬೇಕು ಎಂಬುದು ನನ್ನ ಕನಸು ಹಾಗೂ ನಾನು ಭಾರತೀಯ ಫುಟ್‌ಬಾಲ್‌ನ ಲೆಜೆಂಡ್‌ ಆಗಬೇಕೆಂಬುದು ನನ್ನ ಗುರಿ ಎಂದರು.

ಆಂದೋಲನ ಡೆಸ್ಕ್

Recent Posts

ಹುಣಸೂರು| ಗುರುಪುರದ ಬಳಿ ಒಂದು ವರ್ಷದ ಹುಲಿ ಮರಿ ಸೆರೆ

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…

1 min ago

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

1 hour ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

1 hour ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

1 hour ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

1 hour ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

2 hours ago