ಕ್ರೀಡೆ

ದುರಂದ್‌ ಕಪ್‌ನಲ್ಲಿ ಮಿಂಚಿದ ಬೆಂಗಳೂರು ಸೌತ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ನ ಪ್ರತಿಭೆ ಡಾನಿಯಲ್‌

ಬೆಂಗಳೂರು: ದುರಂದ್‌ ಕಪ್‌ ಭಾರತೀಯ ಫುಟ್‌ಬಾಲ್‌ನ ಮಹತ್ತರ ವೇದಿಕೆಯಾಗಿದ್ದು, ಅನೇಕ ಭವಿಷ್ಯದ ತಾರೆಗಳು ತಮ್ಮ ಪ್ರತಿಭೆಯನ್ನು ಮಿಂಚಿಸಿ ಬಳಿಕ ಯಶಸ್ವಿ ವೃತ್ತಿಪೈ ಕಟ್ಟಿಕೊಂಡಿದ್ದಾರೆ. ಈ ಐಕಾನಿಕ್‌ ಟೂರ್ನಿಯಲ್ಲೇ ಸುನಿಲ್‌ ಕ್ಷೇತ್ರಿ ಮೊದಲ ಬಾರಿಗೆ ಗಮನ ಸೆಳೆದಿದ್ದರು.

ಇಂಡಿಯನ್‌ ಆಯಿಲ್‌ ದುರಂದ್‌ ಕಪ್‌ನ 134ನೇ ಆವೃತ್ತಿಯಲ್ಲಿ ಮಕಕ್ಮಾಯುಮ್‌ ಡಾನಿಯಲ್‌ ತಮ್ಮ ಚೊಚ್ಚಲ ಪ್ರದರ್ಶನದಲ್ಲಿ ಸೌತ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಪರ ಆಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇಂಡಿಯನ್‌ ಏರ್‌ಫೋರ್ಸ್‌ ಎಫ್‌ಟಿ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್‌ ಗಳಿಸಿ ತಂಡವನ್ನು 3-3 ಕಡೆಗೆ ತಲುಪಿಸಿದರು. ಡಾನಿಯಲ್‌ ತಮ್ಮ ಫುಟ್‌ಬಾಲ್‌ ತರಬೇತಿಯನ್ನು ಐಎಸ್‌ಎಲ್‌ ಕ್ಲಬ್ ಚೆನ್ನೈಯನ್‌ ಯು-17 ಮತ್ತು ರಿಸರ್ವ್‌ ತಂಡಗಳಲ್ಲಿ ಶುರುಮಾಡಿ, ಬಳಿಕ ಬೆಂಗಳೂರಿನ ಸೌತ್‌ ಯುನೈಟೆಡ್‌ ಎಫ್‌ಸಿಗೆ ಸೇರ್ಪಡೆಯಾದರು.

ಈ ಬಗ್ಗೆ ಮಾತನಾಡಿದ ಡಾನಿಯಲ್‌ ದುರಂದ್‌ ಕಪ್‌ನಲ್ಲಿ ಆಡವಾಡುವುದು ನನ್ನ ಕನಸಾಗಿತ್ತು ಎಂದರು. ನಾನು ನನ್ನ ಸಹೋದರರೊಂದಿಗೆ ಮೋಜಿಗಾಗಿ ಫುಟ್‌ಬಾಲ್‌ ಆಡಲು ಪ್ರಾರಂಭಿಸಿದೆ. ಬಳಿಕ ನನಗೆ ಆಸಕ್ತಿ ಬಂತು ಆದರೆ ಆರಂಭದಲ್ಲಿ ನನಗೆ ಯಾವುದೇ ಬೆಂಬಲವಿರಲಿಲ್ಲ. ಜೊತೆಗೆ ನನ್ನ ತಂದೆ ಕೂಡ ನಾನು ಫುಟ್‌ಬಾಲ್‌ ಆಡುವುದು ಇಷ್ಟವಿರಲಿಲ್ಲ.

ಫ್ಯೂಚರ್‌ ಫುಟ್‌ಬಾಲ್‌ ಕೋಚಿಂಗ್‌ ಸೆಂಟರ್‌ ಅಂಗ್ತಾಗೆ ಆಯ್ಕೆಯಾದಾಗ ಎಲ್ಲರೂ ಸಂತಸ ವ್ಯಕ್ತಪಡಿಸಿದರು. ಈಗ ನನ್ನ ಪೋಷಕರು ನನ್ನ ಆಟವನ್ನು ನೋಡಿ ಹೆಮ್ಮೆಪಡುತ್ತಿದ್ದಾರೆ ಎಂದರು.

ಡಾನಿಯಲ್‌ ಮಣಿಪುರ ಸ್ಟೇಲ್‌ ಲೀಗ್‌ನ ಈಸ್ಟರ್ನ್‌ ಸ್ಪೋರ್ಟಿಂಗ್‌ ಯೂನಿಯನ್‌ ತಂಡಕ್ಕೂ ಆಡಿದ್ದು, ಹಾಗೆಯೇ ಭಾರತದ ಅಂಡರ್‌ 19 ಸ್ಯಾಫ್‌ ಚಾಂಪಿಯನ್‌ಶಿಪ್‌ಗಾಗಿ ಕೂಡ ಆಯ್ಕೆಯಾಗಿದ್ದರು. ಫುಟ್‌ಬಾಲ್‌ ಕ್ಷೇತ್ರದಲ್ಲಿ ಭಾರತವನ್ನು ಪ್ರತಿನಿಧಿಸಬೇಕು ಎಂಬುದು ನನ್ನ ಕನಸು ಹಾಗೂ ನಾನು ಭಾರತೀಯ ಫುಟ್‌ಬಾಲ್‌ನ ಲೆಜೆಂಡ್‌ ಆಗಬೇಕೆಂಬುದು ನನ್ನ ಗುರಿ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

21 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

51 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

4 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago