ಕ್ರೀಡೆ

ದುರಂದ್‌ ಕಪ್‌ನಲ್ಲಿ ಮಿಂಚಿದ ಬೆಂಗಳೂರು ಸೌತ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ನ ಪ್ರತಿಭೆ ಡಾನಿಯಲ್‌

ಬೆಂಗಳೂರು: ದುರಂದ್‌ ಕಪ್‌ ಭಾರತೀಯ ಫುಟ್‌ಬಾಲ್‌ನ ಮಹತ್ತರ ವೇದಿಕೆಯಾಗಿದ್ದು, ಅನೇಕ ಭವಿಷ್ಯದ ತಾರೆಗಳು ತಮ್ಮ ಪ್ರತಿಭೆಯನ್ನು ಮಿಂಚಿಸಿ ಬಳಿಕ ಯಶಸ್ವಿ ವೃತ್ತಿಪೈ ಕಟ್ಟಿಕೊಂಡಿದ್ದಾರೆ. ಈ ಐಕಾನಿಕ್‌ ಟೂರ್ನಿಯಲ್ಲೇ ಸುನಿಲ್‌ ಕ್ಷೇತ್ರಿ ಮೊದಲ ಬಾರಿಗೆ ಗಮನ ಸೆಳೆದಿದ್ದರು.

ಇಂಡಿಯನ್‌ ಆಯಿಲ್‌ ದುರಂದ್‌ ಕಪ್‌ನ 134ನೇ ಆವೃತ್ತಿಯಲ್ಲಿ ಮಕಕ್ಮಾಯುಮ್‌ ಡಾನಿಯಲ್‌ ತಮ್ಮ ಚೊಚ್ಚಲ ಪ್ರದರ್ಶನದಲ್ಲಿ ಸೌತ್‌ ಯುನೈಟೆಡ್‌ ಫುಟ್‌ಬಾಲ್‌ ಕ್ಲಬ್‌ ಪರ ಆಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಇಂಡಿಯನ್‌ ಏರ್‌ಫೋರ್ಸ್‌ ಎಫ್‌ಟಿ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್‌ ಗಳಿಸಿ ತಂಡವನ್ನು 3-3 ಕಡೆಗೆ ತಲುಪಿಸಿದರು. ಡಾನಿಯಲ್‌ ತಮ್ಮ ಫುಟ್‌ಬಾಲ್‌ ತರಬೇತಿಯನ್ನು ಐಎಸ್‌ಎಲ್‌ ಕ್ಲಬ್ ಚೆನ್ನೈಯನ್‌ ಯು-17 ಮತ್ತು ರಿಸರ್ವ್‌ ತಂಡಗಳಲ್ಲಿ ಶುರುಮಾಡಿ, ಬಳಿಕ ಬೆಂಗಳೂರಿನ ಸೌತ್‌ ಯುನೈಟೆಡ್‌ ಎಫ್‌ಸಿಗೆ ಸೇರ್ಪಡೆಯಾದರು.

ಈ ಬಗ್ಗೆ ಮಾತನಾಡಿದ ಡಾನಿಯಲ್‌ ದುರಂದ್‌ ಕಪ್‌ನಲ್ಲಿ ಆಡವಾಡುವುದು ನನ್ನ ಕನಸಾಗಿತ್ತು ಎಂದರು. ನಾನು ನನ್ನ ಸಹೋದರರೊಂದಿಗೆ ಮೋಜಿಗಾಗಿ ಫುಟ್‌ಬಾಲ್‌ ಆಡಲು ಪ್ರಾರಂಭಿಸಿದೆ. ಬಳಿಕ ನನಗೆ ಆಸಕ್ತಿ ಬಂತು ಆದರೆ ಆರಂಭದಲ್ಲಿ ನನಗೆ ಯಾವುದೇ ಬೆಂಬಲವಿರಲಿಲ್ಲ. ಜೊತೆಗೆ ನನ್ನ ತಂದೆ ಕೂಡ ನಾನು ಫುಟ್‌ಬಾಲ್‌ ಆಡುವುದು ಇಷ್ಟವಿರಲಿಲ್ಲ.

ಫ್ಯೂಚರ್‌ ಫುಟ್‌ಬಾಲ್‌ ಕೋಚಿಂಗ್‌ ಸೆಂಟರ್‌ ಅಂಗ್ತಾಗೆ ಆಯ್ಕೆಯಾದಾಗ ಎಲ್ಲರೂ ಸಂತಸ ವ್ಯಕ್ತಪಡಿಸಿದರು. ಈಗ ನನ್ನ ಪೋಷಕರು ನನ್ನ ಆಟವನ್ನು ನೋಡಿ ಹೆಮ್ಮೆಪಡುತ್ತಿದ್ದಾರೆ ಎಂದರು.

ಡಾನಿಯಲ್‌ ಮಣಿಪುರ ಸ್ಟೇಲ್‌ ಲೀಗ್‌ನ ಈಸ್ಟರ್ನ್‌ ಸ್ಪೋರ್ಟಿಂಗ್‌ ಯೂನಿಯನ್‌ ತಂಡಕ್ಕೂ ಆಡಿದ್ದು, ಹಾಗೆಯೇ ಭಾರತದ ಅಂಡರ್‌ 19 ಸ್ಯಾಫ್‌ ಚಾಂಪಿಯನ್‌ಶಿಪ್‌ಗಾಗಿ ಕೂಡ ಆಯ್ಕೆಯಾಗಿದ್ದರು. ಫುಟ್‌ಬಾಲ್‌ ಕ್ಷೇತ್ರದಲ್ಲಿ ಭಾರತವನ್ನು ಪ್ರತಿನಿಧಿಸಬೇಕು ಎಂಬುದು ನನ್ನ ಕನಸು ಹಾಗೂ ನಾನು ಭಾರತೀಯ ಫುಟ್‌ಬಾಲ್‌ನ ಲೆಜೆಂಡ್‌ ಆಗಬೇಕೆಂಬುದು ನನ್ನ ಗುರಿ ಎಂದರು.

ಆಂದೋಲನ ಡೆಸ್ಕ್

Recent Posts

ವರ್ತನೆ ತಪ್ಪಿದರೆ ದಾಳಿ ನಿಶ್ಚಿತ : ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಾಷಿಂಗ್ಟನ್ : ಇರಾನ್ ತಪ್ಪು ವರ್ತನೆ ತೋರಿದರೆ ಮತ್ತೆ ಸೇನಾ ದಾಳಿ ಆರಂಭವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

12 mins ago

ನಿಗದಿಗಿಂತ ಮುನ್ನವೇ ಮುಂಗಾರು ಮಳೆ : ಮೇ ಅಂತ್ಯಕ್ಕೆ ಕೇರಳ ಪ್ರವೇಶ

ಬೆಂಗಳೂರು : ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗದಿಗಿಂತ ಮುಂಚಿತವಾಗಿಯೇ…

33 mins ago

ಬೆಟ್ಟದಪುರ | ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶ ; ಬಾಲಕ ಸಾವು

ಬೆಟ್ಟದಪುರ : ಪಿರಿಯಾಪಟ್ಟಣ ತಾಲ್ಲೂಕಿನ ಬಿ.ಟಿ.ಎಂ. ಕೊಪ್ಪಲು ಗ್ರಾಮದಲ್ಲಿ ಮನೆಯ ಹಿಂದೆ ಕ್ರಿಕೆಟ್ ಆಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ…

2 hours ago

ಚಿಪ್ಪುಹಂದಿ ಬೇಟೆಯಾಡಿ ಮಾರಾಟಕ್ಕೆ ಯತ್ನ: ಓರ್ವ ಬಂಧನ

ಮೈಸೂರು : ಕಾಡುಪ್ರಾಣಿ ಬೇಟೆ ಹಾಗೂ ಅಕ್ರಮ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ…

3 hours ago

ʼದೃಷ್ಟಿ ಉಪಗ್ರಹʼ ಉಡಾವಣೆ ಯಶಸ್ವಿ

ಬೆಂಗಳೂರು : ಮೋಡ, ಕತ್ತಲೆ, ಮಳೆ... ಯಾವುದಕ್ಕೂ ಜಗ್ಗದ ಕಣ್ಣು ಹೊಂದಿರುವ ಭಾರತದ ಮೊದಲ ಖಾಸಗಿ ಉಪಗ್ರಹ ‘ದೃಷ್ಟಿ’ ಇಂದು…

4 hours ago

ಮೇ.6ರಂದು ಯಸಳೂರಿನ ಅರ್ಜುನ ಆನೆ ಸಮಾಧಿ ಸ್ಥಳದ ಸ್ಮಾರಕ ಉದ್ಘಾಟನೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…

7 hours ago