ಕ್ರೀಡೆ

ಚೆನ್ನೈ ಸೂಪರ್​ ಕಿಂಗ್ಸ್​ಗೆ ಭರ್ಜರಿ ಜಯ: ಪ್ಲೇಆಫ್​ಗೆ ಎಂಟ್ರಿಕೊಟ್ಟ ಧೋನಿ ಬಾಯ್ಸ್

ದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ 2023ನೇ ಸಾಲಿನ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 77 ರನ್ ಅಂತರದ ಗೆಲುವು ದಾಖಲಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ.

ಈ ಮೂಲಕ ಗುಜರಾತ್ ಟೈಟನ್ಸ್ ಬಳಿಕ ಪ್ಲೇ ಆಫ್‌ಗೆ ಪ್ರವೇಶಿಸಿದ ಎರಡನೇ ತಂಡವೆನಿಸಿದೆ.

ಇದು ಮಹೇಂದ್ರ ಸಿಂಗ್‌ ಧೋನಿ ಅವರ ಕೊನೆಯ ಐಪಿಎಲ್ ಎಂದೇ ಅಂದಾಜಿಸಲಾಗಿದೆ. ಈಗ ಮಹಿ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಲಗ್ಗೆ ಇಟ್ಟಿರುವ ಸಿಎಸ್‌ಕೆ ಮಗದೊಂದು ಟ್ರೋಫಿ ಮೇಲೆ ಕಣ್ಣಿಟ್ಟಿದೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಟಾಸ್ ಗೆದ್ದ ಚೆನ್ನೈ, ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 223 ರನ್‌ಗಳ ಬೃಹತ್‌ ಮೊತ್ತ ದಾಖಲಿಸಿತು.

ಚೆನ್ನೈ ಪರ ಆರಂಭಿಕ ಬ್ಯಾಟರ್‌ಗಳಾದ ಡೆವೊನ್‌ ಕಾಸ್ಟೇ 52 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಸಮೇತ 87 ರನ್ ಗಳಿಸಿದರು. ಋತುರಾಜ್ ಗಾಯಕವಾಡ್ 50 ಎಸೆತಗಳಲ್ಲಿ 7 ಸಿಕ್ಸರ್, 3 ಬೌಂಡರಿ ಸಹಿತ 79 ರನ್ ಗಳಿಸಿ ಮಿಂಚಿದರು.

ಇತ್ತ ಶಿವಂ ದುಬೆ 9 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 22 ರನ್ ಗಳಿಸಿದರೆ, ರವೀಂದ್ರ ಜಡೇಜ 7 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಮೇತ 200 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು.

ಡೆಲ್ಲಿ ಕ್ಯಾಪಿಟಲ್ಸ್ ಪರ ಖಲೀಲ್ ಅಹ್ಮದ್, ಅನ್ರಿಚ್ ನಾರ್ಟ್ಟೆ ಹಾಗೂ ಚೇತನ್ ಜಕಾರಿಯಾ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಚೆನ್ನೈ ನೀಡಿದ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಡೆಲ್ಲಿ ನಾಯಕ ಡೇವಿಡ್ ವಾರ್ನರ್ ಅರ್ಧಶತಕದ (86) ಹೊರತಾಗಿಯೂ ಒಂಬತ್ತು ವಿಕೆಟ್ ನಷ್ಟಕ್ಕೆ 149 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಉಳಿದಂತೆ ಬೇರಾವ ಆಟಗಾರರಿಂದಲೂ ನಿರೀಕ್ಷಿತ ಜೊತೆಯಾಟ ಕಾಣಲಿಲ್ಲ.

ಸಿಎಸ್‌ಕೆ ಪರ ದೀಪಕ್ ಚಾಹರ್ ಮೂರು ವಿಕೆಟ್ ಗಳಿಸಿದರು.

ಪಂದ್ಯಶ್ರೇಷ್ಠ: ಋತುರಾಜ್‌ ಗಾಯಕ್ವಾಡ್‌

andolanait

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

4 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

5 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

6 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

6 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

7 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

7 hours ago